AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನಗಳಲ್ಲಿ ಪವರ್ ಬ್ಯಾಂಕ್​ ಕೊಂಡೊಯುವಂತಿಲ್ವಾ? ಡಿಜಿಸಿಎ ಕಠಿಣ ನಿಯಮ ಜಾರಿಗೆ ತರುತ್ತಾ?

ಭಾರತದಲ್ಲಿ ಶೀಘ್ರದಲ್ಲೇ ವಿಮಾನಗಳಲ್ಲಿ ಪವರ್ ಬ್ಯಾಂಕ್​ಗಳನ್ನು ಕೊಂಡೊಯ್ಯುವ ಕುರಿತ ನಿಯಮಗಳನ್ನು ಬಿಗಿಗೊಳಿಸುವ ಸಾಧ್ಯತೆ ಇದೆ. ಪ್ರಪಂಚದಾದ್ಯಂತ ಲಿಥಿಯಂ-ಆಯಾನ್ ಬ್ಯಾಟರಿಯಿಂದ ಉಂಟಾದ ಅಗ್ನಿ ಅವಘಡಗಳ ಬಳಿಕ ಈ ಕ್ರಮದ ಚರ್ಚೆ ವೇಗ ಪಡೆದುಕೊಂಡಿದೆ. ಇತ್ತೀಚೆಗೆ, ದೆಹಲಿ ವಿಮಾನ ನಿಲ್ದಾಣದಲ್ಲಿ  ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿತ್ತು.

ವಿಮಾನಗಳಲ್ಲಿ ಪವರ್ ಬ್ಯಾಂಕ್​ ಕೊಂಡೊಯುವಂತಿಲ್ವಾ? ಡಿಜಿಸಿಎ ಕಠಿಣ ನಿಯಮ ಜಾರಿಗೆ ತರುತ್ತಾ?
ವಿಮಾನImage Credit source: Cleartrip
ನಯನಾ ರಾಜೀವ್
|

Updated on: Oct 23, 2025 | 3:16 PM

Share

ನವದೆಹಲಿ, ಅಕ್ಟೋಬರ್ 23: ಭಾರತದಲ್ಲಿ ಶೀಘ್ರದಲ್ಲೇ ವಿಮಾನಗಳಲ್ಲಿ ಪವರ್ ಬ್ಯಾಂಕ್​ಗಳನ್ನು ಕೊಂಡೊಯ್ಯುವ ಕುರಿತ ನಿಯಮಗಳನ್ನು ಬಿಗಿಗೊಳಿಸುವ ಸಾಧ್ಯತೆ ಇದೆ. ಪ್ರಪಂಚದಾದ್ಯಂತ ಲಿಥಿಯಂ-ಆಯಾನ್ ಬ್ಯಾಟರಿಯಿಂದ ಉಂಟಾದ ಅಗ್ನಿ ಅವಘಡಗಳ ಬಳಿಕ ಈ ಕ್ರಮದ ಚರ್ಚೆ ವೇಗ ಪಡೆದುಕೊಂಡಿದೆ. ಇತ್ತೀಚೆಗೆ, ದೆಹಲಿ ವಿಮಾನ ನಿಲ್ದಾಣದಲ್ಲಿ  ಇಂಡಿಗೋ ವಿಮಾನ((IndiGo)ದಲ್ಲಿ ಪ್ರಯಾಣಿಕರೊಬ್ಬರ ಪವರ್ ಬ್ಯಾಂಕ್‌ಗೆ ಬೆಂಕಿ ಹೊತ್ತಿಕೊಂಡಿತ್ತು.

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಈಗ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ತಾಂತ್ರಿಕ ಇನ್‌ಪುಟ್ ಸಂಗ್ರಹಿಸುವ ಪ್ರಕ್ರಿಯೆಯಲ್ಲಿದೆ.

ದುಬೈನ ಎಮಿರೇಟ್ಸ್​ ಏರ್​ಲೈನ್ಸ್​ ಈಗಾಗಲೇ ಜಾರಿಗೆ ತಂದಿದೆ ದುಬೈನ ಎಮಿರೇಟ್ಸ್​ ಏರ್​ಲೈನ್ಸ್​ ಅಕ್ಟೋಬರ್ 1ರಿಂದ ಪವರ್ ಬ್ಯಾಂಕ್​ಗಳ ಬಳಕೆಗಳ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಿದೆ. ಪ್ರಯಾಣಿಕರು 100 ವ್ಯಾಟ್ ಸಾಮರ್ಥ್ಯದ ಪವರ್ ಬ್ಯಾಂಕ್ ಅನ್ನು ಮಾತ್ರ ಕೊಂಡೊಯ್ಯಬಹುದು ಎಂದು ಕಂಪನಿ ಹೇಳಿದೆ.

ಆದರೆ ಅವರು ಹಾರಾಟದ ಸಮಯದಲ್ಲಿ ಸಾಧನಗಳನ್ನು ಚಾರ್ಜ್​ ಮಾಡಲು ಬಳಸುವಂತಿಲ್ಲ.ಹೊಸ ನಿಯಮಗಳ ಅಡಿಯಲ್ಲಿ, ಪ್ರತಿ ಪವರ್ ಬ್ಯಾಂಕ್​ನ ಬ್ಯಾಟರಿ ಸಾಮರ್ಥ್ಯದ ರೇಟಿಂಗ್ ಅನ್ನು ಅದರ ಮೇಲೆ ಸ್ಪಷ್ಟವಾಗಿ ಬರೆಯುವುದು ಕಡ್ಡಾಯವಾಗಿದೆ.

ಮತ್ತಷ್ಟು ಓದಿ: ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಪವರ್ ಬ್ಯಾಂಕ್​ಗೆ ಬೆಂಕಿ; ಸ್ವಲ್ಪದರಲ್ಲೇ ತಪ್ಪಿದ ದೊಡ್ಡ ಅವಘಡ

ಹೆಚ್ಚಿನ ಸ್ಮಾರ್ಟ್​​ಫೋನ್​ಗಳು ಮತ್ತು ಈಗಿನ ಲಿಥಿಯಂ ಬ್ಯಾಟರಿ ಸಾಧನಗಳು ಟ್ರಿಕಲ್ ಚಾರ್ಜಿಂಗ್ ಸಿಸ್ಟಂ ಅನ್ನು ಹೊಂದಿವೆ. ಇದು ಬ್ಯಾಟರಿಗೆ ಕ್ರಮೇಣ ಕರೆಂಟ್ ಅನ್ನು ವರ್ಗಾಯಿಸುವ ಮೂಲಕ ಓವರ್ ಚಾರ್ಜಿಂಗ್ ತಡೆಯುತ್ತದೆ. ಆದರೆ ಅಗ್ಗದ ಪವರ್ ಬ್ಯಾಂಕ್​ಗಳು ಈ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವುದಿಲ್ಲ. ಅಧಿಕ ಬಿಸಿಯಾಗುವಿಕೆ ಮತ್ತು ಬೆಂಕಿಯ ಅಪಾಯವನ್ನು ಹೆಚ್ಚಿಸುತ್ತದೆ. ಅದಕ್ಕಾಗಿಯೇ ವಾಯುಯಾನಅಧಿಕಾರಿಗಳು ಈಗ ಈ ಸಾಧನಗಳಿಗೆ ಕಠಿಣ ಸುರಕ್ಷತಾ ಮಾನದಂಡಗಳನ್ನು ಜಾರಿಗೆ ತರುವ ಕೆಲಸ ಮಾಡುತ್ತಿದ್ದಾರೆ.

ಸಿಂಗಾಪುರ ಏರ್​ಲೈನ್ಸ್​ ಏಪ್ರಿಲ್ 1ರಿಂದ ಪ್ರಯಾಣಿಕರಿಗೆ ಹೊಸ ನಿಯಮ ಜಾರಿಗೆ ತಂದಿದೆ. ಪ್ರಯಾಣಿಕರು ಇನ್ನುಮುಂದೆ ವಿಮಾನದ ಯುಎಸ್​ಬಿ ಪೋರ್ಟ್​ನಿಂದ ತಮ್ಮ ಪವಬರ್ ಬ್ಯಾಂಜ್​ಗಳನ್ನು ಚಾರ್ಜ್​ ಮಾಡಲು ಅವುಗಳನ್ನು ಬಳಸಲಾಗುವುದಿಲ್ಲ. ಇದರ ಉದ್ದೇಶ ವಿಮಾನಗಳಲ್ಲಿ ಬೆಂಕಿಯನ್ನು ತಡೆಗಟ್ಟುವುದಾಗಿದೆ.

ಚೀನಾದಿಂದ ದಕ್ಷಿಣ ಕೊರಿಯಾಕ್ಕೆ ಹೋಗುತ್ತಿದ್ದ ಏರ್ ಚೀನಾ ವಿಮಾನದಲ್ಲಿ ಲಿಥಿಯಂ ಬ್ಯಾಟರಿ ಬೆಂಕಿಗೆ ಆಹುತಿಯಾದ ಘಟನೆ ಇತ್ತೀಚೆಗೆ ಸಂಭವಿಸಿದೆ. ಪರಿಸ್ಥಿತಿ ಎಷ್ಟು ಗಂಭೀರವಾಗಿತ್ತೆಂದರೆ ವಿಮಾನವನ್ನು ಶಾಂಘೈನಲ್ಲಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

ಈ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಡಿಜಿಸಿಎ ಈಗ ಹೊಸ ನಿಮಯಗಳನ್ನು ರೂಪಿಸುತ್ತಿದೆ. ಮುಂಬರುವ ತಿಂಗಳುಗಳಲ್ಲಿ ಪವರ್​ ಬ್ಯಾಂಕ್​ಗೆ ಸಂಬಂಧಿಸಿದ ನಿಯಮಗಳನ್ನು ಬದಲಿಸುವ ಸಾಧ್ಯತೆ ಇದೆ.

ಪವರ್ ಬ್ಯಾಂಕ್​ಗಳನ್ನು ಸೀಟ್ ಪಾಕೆಟ್ಸ್​ ಅಥವಾ ಪಾದದ ಜಾಗದಲ್ಲಿ ಮಾತ್ರ ಇಡುವುದು. ವಿಮಾನಗಳ ಸಮಯದಲ್ಲಿ ಅವುಗಳನ್ನು ಚಾರ್ಜ್​ ಮಾಡುವುದು ಅಥವಾ ಬಳಸುವುದನ್ನು ಸಂಪೂರ್ಣವಾಗಿ ನಿಷೇಧಿಸಬಹುದು.ಪ್ರಮಾಣೀಕೃತ ಮತ್ತು ಸೀಮಿತ ಸಾಮರ್ಥ್ಯದ ಪವರ್ ಬ್ಯಾಂಕ್​ಗಳನ್ನು ಮಾತ್ರ ಅನುಮತಿಸಲು ವಿಮಾನಯಾನ ಸಂಸ್ಥೆಗಳಿಗೆ ಸೂಚನೆ ನೀಡುವ ಸಾಧ್ಯತೆ ಇದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಗೃಹಲಕ್ಷ್ಮೀ ಹಣದಲ್ಲಿ ರೊಟ್ಟಿ ಕೇಂದ್ರ ತೆರೆದ ನಾರಿಯರು!
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ಮಾಡಿದ್ದುಣ್ಣೋ ಮಹಾರಾಯ, ಬೆಕ್ಕಿಗೆ ಒದ್ದ ಮಹಿಳೆಗೆ ಏನಾಯ್ತು ನೋಡಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಡಿಸಿಎಂ ಡಿಕೆ ಶಿವಕುಮಾರ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಧೋನಿ ಸ್ಟೈಲ್​​ನಲ್ಲಿ ಸ್ಟಂಪಿಂಗ್; ಸಂಜು-ಕ್ಲಾಸನ್ ಮಧ್ಯೆ ಫುಲ್ ಕಿರಿಕ್
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಮಂಗಳೂರು: ಬಾವಿ ನೀರಿನಲ್ಲಿ ಡೀಸೆಲ್, ಸ್ಥಳೀಯರು ಹೇಳೋದೇನು ನೋಡಿ
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಅಧಿಕ ಜೇಷ್ಠ ಮಾಸದಲ್ಲಿ ವಿಷ್ಣು ಸಹಸ್ರನಾಮ ಓದಲೇಬೇಕು!
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಪಂಚ್ ಕೋತಿ ಇದ್ದ ಮೃಗಾಲಯಕ್ಕೆ ನುಗ್ಗಿದ್ದ ಇಬ್ಬರು ಅಮೆರಿಕನ್ನರ ಬಂಧನ
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಬೆಂಗಳೂರಿನಲ್ಲಿ ಭಾರೀ ಮಳೆ: ಲೇಔಟ್ ಒಳಗೆ ನುಗ್ಗಿದ ರಾಜಕಾಲುವೆ ಕೊಳಚೆ ನೀರು
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ಜೈಲಿಗೆ ಸ್ವತಃ ಡಿಜಿಪಿ ಭೇಟಿ ನೀಡಿದಾಗ ನಟ ದರ್ಶನ್ ಸಮಸ್ಯೆ ಹೇಳಿಕೊಂಡ್ರಾ?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?
ದುಬಾರೆ ದುರಂತದ ಬೆನ್ನಲ್ಲೇ ಅಲರ್ಟ್: ಅರಣ್ಯ ಇಲಾಖೆ ಕೈಗೊಂಡ ಕ್ರಮಗಳೇನು?