AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವಾರಗಳವರೆಗೆ ಶೇ 50ರಷ್ಟು ವಿಮಾನಗಳು ಮಾತ್ರ ಕಾರ್ಯನಿರ್ವಹಿಸುವಂತೆ ಸ್ಪೈಸ್ ಜೆಟ್​​ಗೆ ಡಿಜಿಸಿಎ ಆದೇಶ

ಈ ಆದೇಶದಿಂದ ನಮಗೇನೂ ಪರಿಣಾಮವುಂಟಾಗುವುದಿಲ್ಲ. ಇದು ಪ್ರಯಾಣ ಜಾಸ್ತಿ ಇಲ್ಲದ ಹೊತ್ತು, ಯಾವುದೇ ವಿಮಾನಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪೈಸ್ ಜೆಟ್ ಉತ್ತರಿಸಿದೆ.

8 ವಾರಗಳವರೆಗೆ ಶೇ 50ರಷ್ಟು ವಿಮಾನಗಳು ಮಾತ್ರ ಕಾರ್ಯನಿರ್ವಹಿಸುವಂತೆ  ಸ್ಪೈಸ್ ಜೆಟ್​​ಗೆ  ಡಿಜಿಸಿಎ ಆದೇಶ
ಸ್ಪೈಸ್ ಜೆಟ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 27, 2022 | 7:04 PM

Share

ದೆಹಲಿ: ವಿಮಾನದಲ್ಲಿ ಆಗಾಗ್ಗೆ ಸುರಕ್ಷಾ ದೋಷಗಳು ಕಂಡುಬಂದ ಹಿನ್ನಲೆಯಲ್ಲಿ ಎಂಟು ವಾರಗಳವರೆಗೆ ಶೇ 50ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಪೈಸ್ ಜೆಟ್​​ಗೆ ಬುಧವಾರ ಆದೇಶಿಸಿದೆ. ಆದಾಗ್ಯೂ ಈ ಆದೇಶದಿಂದ ನಮಗೇನೂ ಪರಿಣಾಮವುಂಟಾಗುವುದಿಲ್ಲ. ಇದು ಪ್ರಯಾಣ ಜಾಸ್ತಿ ಇಲ್ಲದ ಹೊತ್ತು, ಯಾವುದೇ ವಿಮಾನಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪೈಸ್ ಜೆಟ್ ಉತ್ತರಿಸಿದೆ.  ಹಲವಾರು ಬಾರಿ ಸ್ಪಾಟ್ ಚೆಕ್, ತಪಾಸಣೆ ನಡೆಸಿ ಮತ್ತು ಶೋಕಾಸ್ ನೋಟಿಸ್​​ಗೆ ಸ್ಪೈಸ್ ಜೆಟ್ ಸಲ್ಲಿಸಿದ ಉತ್ತರಗಳನ್ನು ನೋಡಿ ಸುರಕ್ಷಿತ ಮತ್ತು ವಿಶ್ವಾಸಾರ್ಹ ವಿಮಾನಯಾನ ಸೇವೆಗಾಗಿ ಸ್ಪೈಸ್ ಜೆಟ್ 8 ವಾರಗಳ ವರೆಗೆ ಶೇ 50 ವಿಮಾನಗಳನ್ನು ಮಾತ್ರ ಕಾರ್ಯ ನಿರ್ವಹಿಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಆದೇಶದಲ್ಲಿ ಹೇಳಿದೆ. ಈ ಎಂಟು ವಾರಗಳಲ್ಲಿ ಡಿಜಿಸಿಎ ಸ್ಪೈಸ್ ಜೆಟ್ ವಿಮಾನದ ಮೇಲೆ ತೀವ್ರ ಕಣ್ಗಾವಲಿರಿಸಲಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಸಂಸ್ಥೆಯೊಂದು ಎದುರಿಸಿದ ಅತಿ ಕಠಿಣ ಕ್ರಮ ಇದಾಗಿದೆ.

ಶೇ 50ಕ್ಕಿಂತ ಹೆಚ್ಚು ವಿಮಾನಗಳನ್ನು ಕಾರ್ಯನಿರ್ವಹಿಸುವಂತಿಲ್ಲ. ಹಾಗೆ ಮಾಡುವುದಾದರೆ ಅದನ್ನು ಸುರಕ್ಷಿತ ಮತ್ತು ಸಮರ್ಥವಾಗಿ ನಿರ್ವಹಿಸಲು ಸೂಕ್ತ ತಾಂತ್ರಿಕ ಬೆಂಬಲ ಮತ್ತು ಆರ್ಥಿಕ ಸಂಪನ್ಮೂಲ ಇದೆ ಎಂಬುದನ್ನು ಡಿಜಿಸಿಎಗೆ ಮನವರಿಕೆ ಮಾಡಬೇಕು ಎಂದು ಡಿಜಿಸಿಎ ಹೇಳಿದೆ.

ಸ್ಪೈಸ್ ಜೆಟ್ ಸುರಕ್ಷಿತ, ಸಮರ್ಥ ಮತ್ತು ವಿಶ್ವಾಸಾರ್ಹ ರೀತಿಯಲ್ಲಿ ವಿಮಾನ ಸೇವೆ ನೀಡಲು ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ.

Published On - 6:25 pm, Wed, 27 July 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಸಿಎಂ ತಾರತಮ್ಯ ಮಾಡಲ್ಲ, ಅನುದಾನ ಸಮಾನವಾಗಿ ಸಿಗುತ್ತದೆ: ಕೊತ್ತೂರು ಮಂಜನಾಥ್
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ಮೈಸೂರು ಜನ ಮತ್ತು ಪೌರಕಾರ್ಮಿಕರಿಗೆ ಶ್ರೇಯಸ್ಸು ಸಲ್ಲಬೇಕು: ಪಾಲಿಕೆ ಆಯುಕ್ತ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ