AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

8 ವಾರಗಳವರೆಗೆ ಶೇ 50ರಷ್ಟು ವಿಮಾನಗಳು ಮಾತ್ರ ಕಾರ್ಯನಿರ್ವಹಿಸುವಂತೆ ಸ್ಪೈಸ್ ಜೆಟ್​​ಗೆ ಡಿಜಿಸಿಎ ಆದೇಶ

ಈ ಆದೇಶದಿಂದ ನಮಗೇನೂ ಪರಿಣಾಮವುಂಟಾಗುವುದಿಲ್ಲ. ಇದು ಪ್ರಯಾಣ ಜಾಸ್ತಿ ಇಲ್ಲದ ಹೊತ್ತು, ಯಾವುದೇ ವಿಮಾನಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪೈಸ್ ಜೆಟ್ ಉತ್ತರಿಸಿದೆ.

8 ವಾರಗಳವರೆಗೆ ಶೇ 50ರಷ್ಟು ವಿಮಾನಗಳು ಮಾತ್ರ ಕಾರ್ಯನಿರ್ವಹಿಸುವಂತೆ  ಸ್ಪೈಸ್ ಜೆಟ್​​ಗೆ  ಡಿಜಿಸಿಎ ಆದೇಶ
ಸ್ಪೈಸ್ ಜೆಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 27, 2022 | 7:04 PM

Share

ದೆಹಲಿ: ವಿಮಾನದಲ್ಲಿ ಆಗಾಗ್ಗೆ ಸುರಕ್ಷಾ ದೋಷಗಳು ಕಂಡುಬಂದ ಹಿನ್ನಲೆಯಲ್ಲಿ ಎಂಟು ವಾರಗಳವರೆಗೆ ಶೇ 50ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ಸ್ಪೈಸ್ ಜೆಟ್​​ಗೆ ಬುಧವಾರ ಆದೇಶಿಸಿದೆ. ಆದಾಗ್ಯೂ ಈ ಆದೇಶದಿಂದ ನಮಗೇನೂ ಪರಿಣಾಮವುಂಟಾಗುವುದಿಲ್ಲ. ಇದು ಪ್ರಯಾಣ ಜಾಸ್ತಿ ಇಲ್ಲದ ಹೊತ್ತು, ಯಾವುದೇ ವಿಮಾನಗಳನ್ನು ರದ್ದು ಮಾಡುವುದಿಲ್ಲ ಎಂದು ಸ್ಪೈಸ್ ಜೆಟ್ ಉತ್ತರಿಸಿದೆ.  ಹಲವಾರು ಬಾರಿ ಸ್ಪಾಟ್ ಚೆಕ್, ತಪಾಸಣೆ ನಡೆಸಿ ಮತ್ತು ಶೋಕಾಸ್ ನೋಟಿಸ್​​ಗೆ ಸ್ಪೈಸ್ ಜೆಟ್ ಸಲ್ಲಿಸಿದ ಉತ್ತರಗಳನ್ನು ನೋಡಿ ಸುರಕ್ಷಿತ ಮತ್ತು ವಿಶ್ವಾಸಾರ್ಹ ವಿಮಾನಯಾನ ಸೇವೆಗಾಗಿ ಸ್ಪೈಸ್ ಜೆಟ್ 8 ವಾರಗಳ ವರೆಗೆ ಶೇ 50 ವಿಮಾನಗಳನ್ನು ಮಾತ್ರ ಕಾರ್ಯ ನಿರ್ವಹಿಸುವಂತೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಆದೇಶದಲ್ಲಿ ಹೇಳಿದೆ. ಈ ಎಂಟು ವಾರಗಳಲ್ಲಿ ಡಿಜಿಸಿಎ ಸ್ಪೈಸ್ ಜೆಟ್ ವಿಮಾನದ ಮೇಲೆ ತೀವ್ರ ಕಣ್ಗಾವಲಿರಿಸಲಿದೆ. ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಸಂಸ್ಥೆಯೊಂದು ಎದುರಿಸಿದ ಅತಿ ಕಠಿಣ ಕ್ರಮ ಇದಾಗಿದೆ.

ಶೇ 50ಕ್ಕಿಂತ ಹೆಚ್ಚು ವಿಮಾನಗಳನ್ನು ಕಾರ್ಯನಿರ್ವಹಿಸುವಂತಿಲ್ಲ. ಹಾಗೆ ಮಾಡುವುದಾದರೆ ಅದನ್ನು ಸುರಕ್ಷಿತ ಮತ್ತು ಸಮರ್ಥವಾಗಿ ನಿರ್ವಹಿಸಲು ಸೂಕ್ತ ತಾಂತ್ರಿಕ ಬೆಂಬಲ ಮತ್ತು ಆರ್ಥಿಕ ಸಂಪನ್ಮೂಲ ಇದೆ ಎಂಬುದನ್ನು ಡಿಜಿಸಿಎಗೆ ಮನವರಿಕೆ ಮಾಡಬೇಕು ಎಂದು ಡಿಜಿಸಿಎ ಹೇಳಿದೆ.

ಸ್ಪೈಸ್ ಜೆಟ್ ಸುರಕ್ಷಿತ, ಸಮರ್ಥ ಮತ್ತು ವಿಶ್ವಾಸಾರ್ಹ ರೀತಿಯಲ್ಲಿ ವಿಮಾನ ಸೇವೆ ನೀಡಲು ವಿಫಲವಾಗಿದೆ ಎಂದು ಡಿಜಿಸಿಎ ಹೇಳಿದೆ.

Published On - 6:25 pm, Wed, 27 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ