AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಏರ್​ಪೋರ್ಟ್​ನಿಂದ ಹೊರಟಿದ್ದ ಏರ್​ಇಂಡಿಯಾ ವಿಮಾನದಿಂದ ಬಿದ್ದಿದ್ದೇನು?

ಇಂದಿರಾಗಾಂಧಿ ಏರ್​ಪೋರ್ಟ್​ನಿಂದ ಹೊರಟಿದ್ದ ವಿಮಾನವೊಂದರಿಂದ ಲೋಹದ ಮಾದರಿಯ ವಸ್ತುವು ಮನೆಯ ಮೇಲೆ ಬಿದ್ದಿರುವ ಘಟನೆ ವರದಿಯಾಗಿದೆ. ಈ ಘಟನೆ ಸೆಪ್ಟೆಂಬರ್ 2 ರಂದು ತಡರಾತ್ರಿ 9.30 ರ ಸುಮಾರಿಗೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.

ದೆಹಲಿ ಏರ್​ಪೋರ್ಟ್​ನಿಂದ ಹೊರಟಿದ್ದ ಏರ್​ಇಂಡಿಯಾ ವಿಮಾನದಿಂದ ಬಿದ್ದಿದ್ದೇನು?
ಏರ್​ ಇಂಡಿಯಾ ವಿಮಾನ
ನಯನಾ ರಾಜೀವ್
|

Updated on: Sep 05, 2024 | 9:12 AM

Share

ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಟೇಕ್​ ಆಫ್​ ಆದ ವಿಮಾನದಿಂದ ಲೋಹದ ವಸ್ತುವೊಂದು ಮನೆಯ ಮೇಲೆ ಬಿದ್ದಿರುವ ಘಟನೆ ವರದಿಯಾಗಿದೆ. ತಕ್ಷಣವೇ, ಆ ಸಮಯದಲ್ಲಿ ಟೇಕ್ ಆಫ್ ಆಗುತ್ತಿದ್ದ ಎಲ್ಲಾ ವಿಮಾನಗಳ ಪೈಲಟ್‌ಗಳಿಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಯಿತು. ಇದರ ನಂತರ, ವಿಮಾನವನ್ನು ಗುರುತಿಸಿ ಮತ್ತು ಅದನ್ನು ವಿಮಾನ ನಿಲ್ದಾಣಕ್ಕೆ ಹಿಂತಿರುಗಿಸಲು ಸೂಚನೆಗಳನ್ನು ನೀಡಲಾಗಿತ್ತು.

ಈ ಘಟನೆ ಸೆಪ್ಟೆಂಬರ್ 2 ರಂದು ತಡರಾತ್ರಿ 9.30 ರ ಸುಮಾರಿಗೆ ಸಂಭವಿಸಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ. ಖಾಸಗಿ ವಿಮಾನಯಾನ ಸಂಸ್ಥೆಯೊಂದು ಐಜಿಐ ವಿಮಾನ ನಿಲ್ದಾಣದಿಂದ ಹೊರಟಿತ್ತು. ವಿಮಾನವು ವಸಂತ್ ಕುಂಜ್ ಪ್ರದೇಶದಿಂದ ಹೊರಡುವಾಗ, ಅದರ ಕೆಲವು ತುಣುಕುಗಳು ಆ ಪ್ರದೇಶದ ಮನೆಯೊಂದರ ಛಾವಣಿಯ ಮೇಲೆ ಆಕಾಶದಿಂದ ಬಿದ್ದವು.

ಇದಾದ ನಂತರ ಮನೆಯ ಮಾಲೀಕರು ತಕ್ಷಣ ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಹೊರಗೆ ವಿಮಾನದ ಎಂಜಿನ್‌ನ ಭಾಗ ಪತ್ತೆಯಾದ ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ತನಿಖೆಗೆ ಆದೇಶಿಸಿದೆ ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಮುಂಬೈ: ಏರ್​ ಇಂಡಿಯಾ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ ಮಹಿಳೆ

ಸೋಮವಾರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ಈ ಲೋಹದ ವಸ್ತುಗಳು ಬಿದ್ದಿರಬಹುದು ಎಂದು ಮೂಲಗಳು ತಿಳಿಸಿವೆ.

ಬಹುಶಃ ವಿಮಾನ ಎಂಜಿನ್‌ನಿಂದ ಮುರಿದ ಬ್ಲೇಡ್‌ನ ಭಾಗ ಇದಾಗಿರಬಹುದು. ಆದಾಗ್ಯೂ, ಲೋಹದ ತುಂಡುಗಳು ಆ ವಿಮಾನದದ್ದೇ ಅಥವಾ ಇಲ್ಲವೇ ಎಂಬುದನ್ನು ಇನ್ನೂ ಖಚಿತಪಡಿಸಲು ಸಾಧ್ಯವಿಲ್ಲ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಐಜಿಐ ವಿಮಾನ ನಿಲ್ದಾಣ ಸೇರಿದಂತೆ ಹಲವು ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗಿದೆ. ಇದಾದ ನಂತರ ವಸಂತ್‌ ಕುಂಜ್‌ ಕಡೆಗೆ ಹಾರಿದ ವಿಮಾನಗಳನ್ನು ಗುರುತಿಸುವ ಕಾರ್ಯ ತ್ವರಿತವಾಗಿ ಆರಂಭವಾಯಿತು. ಆದಾಗ್ಯೂ, ಸ್ವಲ್ಪ ತನಿಖೆಯ ನಂತರ, ಆ ಸಮಯದಲ್ಲಿ ಐಜಿಐ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಮತ್ತು ಲ್ಯಾಂಡ್ ಆಗುವ ಬಗ್ಗೆ ಎಟಿಸಿ ವಿಮಾನದ ಪೈಲಟ್‌ಗೆ ಮಾಹಿತಿ ನೀಡಿತು.  ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ IX-145 ನ ಭಾಗ ಅದು ಎಂದು ತಿಳಿದುಬಂದಿದೆ. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಸುರಕ್ಷಿತವಾಗಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ