AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ 19 ಸೋಂಕಿತರ ಚಿಕಿತ್ಸೆಗೆ ಬಳಸಬಹುದಾದ ಕೊಲ್ಚಿಸಿನ್​ ಔಷಧ ಕ್ಲಿನಿಕಲ್​ ಟ್ರಯಲ್​​ಗೆ ಡಿಜಿಸಿಐ ಅನುಮೋದನೆ..

ಕೊಲ್ಚಿಸಿನ್​ ಔಷಧ ಕೊವಿಡ್​ 19 ಸೋಂಕಿತರಿಗೆ ಎಷ್ಟು ಸುರಕ್ಷಿತ, ಪರಿಣಾಮಕಾರಿ ಎಂಬುದನ್ನು ತಿಳಿಯಲು ಎರಡು ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ ನೀಡಿದೆ.

ಕೊವಿಡ್​ 19 ಸೋಂಕಿತರ ಚಿಕಿತ್ಸೆಗೆ ಬಳಸಬಹುದಾದ ಕೊಲ್ಚಿಸಿನ್​ ಔಷಧ ಕ್ಲಿನಿಕಲ್​ ಟ್ರಯಲ್​​ಗೆ ಡಿಜಿಸಿಐ ಅನುಮೋದನೆ..
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jun 12, 2021 | 5:34 PM

Share

ಕೊಲ್ಚಿಸಿನ್​ ಔಷಧಗಳ ಮೇಲೆ ಕ್ಲಿನಿಕಲ್​ ಟ್ರಯಲ್​ ನಡೆಸಲು ಡ್ರಗ್ಸ್​ ಕಂಟ್ರೋಲರ್​ ಜನರಲ್​ ಆಫ್​ ಇಂಡಿಯಾ (DGCI’s), ಕೌನ್ಸಿಲ್​ ಆಫ್​ ಸೈಂಟಿಫಿಕ್​ ಆ್ಯಂಡ್​ ಇಂಡಸ್ಟ್ರಿಯಲ್​ ರಿಸರ್ಚ್​ (CSIR) ಮತ್ತು ಹೈದರಾಬಾದ್​​ನ ಲಕ್ಸಾಯ್​ ಲೈಫ್​ ಸೈನ್ಸಸ್​ ಪ್ರೈವೇಟ್​ ಲಿಮಿಟೆಡ್​ಗೆ ಅನುಮೋದನೆ ನೀಡಿದೆ ಎಂದು ಪಿಟಿಐ ವರದಿ ಮಾಡಿದೆ. ಕೊಲ್ಚಿಸಿನ್​ ಮಾತ್ರೆಗಳಿಂದ ಕೊವಿಡ್​ 19 ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾಗಿದೆ ಎಂದು ಹೇಳಲಾಗಿದೆ. ಹಾಗೇ ಈ ಔಷಧಗಳು ಕೊವಿಡ್​ 19 ಸೋಂಕಿತರಿಗೆ ಎಷ್ಟು ಸುರಕ್ಷಿತ, ಪರಿಣಾಮಕಾರಿ ಎಂಬುದನ್ನು ತಿಳಿಯಲು ಎರಡು ಹಂತದ ಕ್ಲಿನಿಕಲ್​ ಟ್ರಯಲ್​ ನಡೆಸಲು ಡಿಸಿಜಿಐ ಅನುಮೋದನೆ ನೀಡಿದೆ. ಈ ಬಗ್ಗೆ CSIR ಅಧಿಕೃತ ಮಾಹಿತಿ ನೀಡಿದೆ.

CSIRನ ಮಹಾ ನಿರ್ದೇಶಕರ ಸಲಹೆಗಾರ ರಾಮ್​ ವಿಶ್ವಕರ್ಮ ಪಿಟಿಐಗೆ ಮಾಹಿತಿ ನೀಡಿದ್ದು, ಕೊರೊನಾ ಸೋಂಕಿತರು ಹೃದಯ ಸಂಬಂಧಿ ತೊಂದರೆಗೆ ಒಳಗಾಗುತ್ತಾರೆ ಎಂಬುದನ್ನು ಹಲವು ಅಧ್ಯಯನಗಳು ಬಹಿರಂಗಪಡಿಸಿವೆ. ಅಷ್ಟೇ ಅಲ್ಲ, ಅದೆಷ್ಟೋ ಜನ ಕೊರೊನಾ ಸೋಂಕಿಗೆ ಒಳಗಾಗಿ, ನಂತರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಹೊಸದಾದ ಅಥವಾ ಇರುವುದರಲ್ಲೇ ಯಾವುದು ಉತ್ತಮ ಔಷಧ ಎಂಬುದನ್ನು ಕಂಡುಹಿಡಿಯುವುದು ಅನಿವಾರ್ಯವಾಗಿದೆ. ಅದರಲ್ಲಿ ಈ ಕೊಲ್ಚಿಸಿನ್​ ಔಷಧ, ಹೃದಯ ಸಮಸ್ಯೆ ಇರುವವರಿಗೆ ಅತ್ಯುತ್ತಮ ಔಷಧವಾಗಿದೆ ಎಂದು ಹೇಳಿದ್ದಾರೆ. ಹಾಗೇ, ಲಕ್ಸಾಯ್​ ಲೈಫ್​ ಸೈನ್ಸ್​​ನ ಸಿಇಒ ರಾಮ್​ ಉಪಾಧ್ಯಾಯ ಈ ಬಗ್ಗೆ ಪಿಟಿಐಗೆ ಪ್ರತಿಕ್ರಿಯೆ ನೀಡಿದ್ದು, ಕೊಲ್ಚಿಸಿನ್​ ಔಷಧಗಳ ಕ್ಲಿನಿಕಲ್ ಟ್ರಯಲ್​​ಗಾಗಿ ರೋಗಿಗಳ ದಾಖಲಾತಿ ಪ್ರಕ್ರಿಯೆ ನಡೆದಿದೆ. ಮುಂದಿನ 8-10 ವಾರಗಳಲ್ಲಿ ಟ್ರಯಲ್​ ಮುಗಿಯಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: BBK To begin soon : ಕಿಚ್ಚನ ಬಿಗ್ ಬಾಸ್ ಮತ್ತೆ ಪ್ರಾರಂಭವಾಗಲಿದ್ಯಾ? ಯಾರೆಲ್ಲಾ ಇರ್ತಾರೆ ಈ ಬಾರಿ?

Published On - 5:31 pm, Sat, 12 June 21

Follow Us
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK