AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ದಾಖಲೆ ಬರೆದ ಧಾರಾವಿ.. 24 ಗಂಟೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣಗಳಿಲ್ಲ

ಏಪ್ರಿಲ್​ 1 ರಂದು ಧಾರಾವಿಯಲ್ಲಿ ಮೊದಲ ಕೊವಿಡ್​ ಪ್ರಕರಣ ಪತ್ತೆಯಾಗಿತ್ತು. ಕೇವಲ 2.5 ಚದರ ಕಿ.ಮೀ ಪ್ರದೇಶದಲ್ಲಿ ಬರೋಬ್ಬರಿ 6.5 ಲಕ್ಷ ಜನರು ವಾಸಿಸುವುದರಿಂದ ಇಲ್ಲಿ ಕೊರೊನಾ ವೈರಾಣು ಒಬ್ಬರಿಂದ ಒಬ್ಬರಿಗೆ ಹರಡುವುದು ಸುಲಭವಾಗಿತ್ತು.

ಹೊಸ ದಾಖಲೆ ಬರೆದ ಧಾರಾವಿ.. 24 ಗಂಟೆಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣಗಳಿಲ್ಲ
ಮುಂಬೈನ ಧಾರಾವಿ
Skanda
| Edited By: |

Updated on: Dec 26, 2020 | 11:26 AM

Share

ಮುಂಬೈ: ಭಾರತದಲ್ಲಿ ಕೊರೊನಾ ಹಾವಳಿ ಆರಂಭವಾದಾಗ ಹೆಚ್ಚೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳಿಗೆ ಸಾಕ್ಷಿಯಾಗಿ ದೇಶದ ನಿದ್ದೆಗೆಡಿಸಿದ್ದ ಧಾರಾವಿ ಕೊಳಗೇರಿ ಇದೀಗ ಅಚ್ಚರಿಗೆ ಕಾರಣವಾಗಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಸಂಜೆಯವರೆಗಿನ 24 ತಾಸು ಅವಧಿಯಲ್ಲಿ ಒಂದೇ ಒಂದು ಕೊವಿಡ್​ ಪ್ರಕರಣ ಧಾರಾವಿಯಲ್ಲಿ ದಾಖಲಾಗಿಲ್ಲ.

ಏಪ್ರಿಲ್​ 1 ರಂದು ಧಾರಾವಿಯಲ್ಲಿ ಮೊದಲ ಕೊವಿಡ್​ ಪ್ರಕರಣ ಪತ್ತೆಯಾಗಿತ್ತು. ಕೇವಲ 2.5 ಚದರ ಕಿ.ಮೀ ಪ್ರದೇಶದಲ್ಲಿ ಬರೋಬ್ಬರಿ 6.5 ಲಕ್ಷ ಜನರು ವಾಸಿಸುವುದರಿಂದ ಇಲ್ಲಿ ಕೊರೊನಾ ವೈರಾಣು ಒಬ್ಬರಿಂದ ಒಬ್ಬರಿಗೆ ಹರಡುವುದು ಸುಲಭವಾಗಿತ್ತು. ಇದೇ ಕಾರಣಕ್ಕೆ ತಲೆಕೆಡಿಸಿಕೊಂಡ ಮುಂಬೈ ಮಹಾನಗರ ಪಾಲಿಕೆ ಧಾರಾವಿಯಲ್ಲಿ ಕೊರೊನಾ ನಿಯಂತ್ರಿಸಲು ಹರಸಾಹಸಪಡಬೇಕಾಯಿತು.

ಆದರೆ, ಮುಂಬೈ ಮಹಾನಗರ ಪಾಲಿಕೆ ಕಠಿಣ ನಿರ್ಧಾರಗಳನ್ನು ತೆಗೆದುಕೊಂಡ ಫಲವಾಗಿ ಅಚ್ಚರಿಯ ರೀತಿಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು. ಜುಲೈ ತಿಂಗಳಲ್ಲಿ ಈ ಕುರಿತು ಮಾತನಾಡಿದ್ದ ವಿಶ್ವ ಆರೋಗ್ಯ ಸಂಸ್ಥೆ ಕೊರೊನಾ ನಿಯಂತ್ರಣಕ್ಕೆ ಧಾರಾವಿಯನ್ನು ಉದಾಹರಣೆಯಾಗಿ ತೆಗೆದುಕೊಂಡಿತ್ತು.

ಇದೀಗ ಧಾರಾವಿಯಲ್ಲಿ 24 ಗಂಟೆ ಅವಧಿಯಲ್ಲಿ ಒಂದೇ ಒಂದು ಕೊರೊನಾ ಪ್ರಕರಣ ಪತ್ತೆಯಾಗದಿರುವುದು ನಿಜಕ್ಕೂ ಅಚ್ಚರಿ ಮೂಡಿಸಿದೆ. ಧಾರಾವಿ ಪ್ರದೇಶದಲ್ಲಿ ಇದುವರೆಗೆ 3,788 ಜನ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಆ ಪೈಕಿ 3,464 ಜನ ಗುಣಮುಖರಾಗಿದ್ದಾರೆ. ಪ್ರಸ್ತುತ ಧಾರಾವಿಯಲ್ಲಿ 12 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 8 ಜನ ಹೋಮ್​ ಐಸೋಲೇಶನ್​ನಲ್ಲಿ ಹಾಗೂ ನಾಲ್ವರು ಕೊವಿಡ್ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow Us
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ