AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿತೀಶ್ ಕುಮಾರ್ ಮೈತ್ರಿ ಸರ್ಕಾರದ ಆಡಳಿತ ವೈಫಲ್ಯ ಬಯಲಾಗಿದೆ: ಧರ್ಮೇಂದ್ರ ಪ್ರಧಾನ್

ಬಿಹಾರದಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವ್ನನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಿತೀಶ್ ಕುಮಾರ್ ಮೈತ್ರಿ ಸರ್ಕಾರದ ಆಡಳಿತ ವೈಫಲ್ಯ ಬಯಲಾಗಿದೆ: ಧರ್ಮೇಂದ್ರ ಪ್ರಧಾನ್
ಧಮೇಂದ್ರ ಪ್ರಧಾನ್
ನಯನಾ ರಾಜೀವ್
|

Updated on: Jul 14, 2023 | 11:02 AM

Share

ಬಿಹಾರದಲ್ಲಿ ನಡೆದ ಪೊಲೀಸ್ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವ್ನನಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ಬಿಹಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಲಾಠಿ ಚಾರ್ಜ್​, ಅಶ್ರುವಾಯು, ಸತ್ಯ ಹೇಳಿದವರನ್ನು ವಿಧಾನಸಭೆಯಿಂದ ಹೊರಹಾಕುವುದು ಇದು ನಿತೀಶ್​ ಕುಮಾರ್ ಮೈತ್ರಿ ಸರ್ಕಾರದ ಉತ್ತಮ ಆಡಳಿತವೇ ಎಂದು ಕಿಡಿಕಾರಿದ್ದಾರೆ.

ಪಕ್ಷದ ಪದಾಧಿಕಾರಿ ವಿಜಯ್ ಕುಮಾರ್ ಸಿಂಗ್ ಅವರ ಸಾವಿನಿಂದ ಬಿಜೆಪಿ ಕೋಪಗೊಂಡಿದೆ. ಶಿಕ್ಷಕರ ನೇಮಕಾತಿಗಾಗಿ ಹೊರ ರಾಜ್ಯಗಳಿಂದ ಬರುವವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಪ್ರತಿಭಟಿಸಲು ಆಯೋಜಿಸಿದ್ದ ಸಭೆಯಲ್ಲಿ ಸಿಂಗ್ ಭಾಗವಹಿಸಿದ್ದರು.

ಪ್ರತಿಭಟನೆಗೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಟ್ನಾ ತಲುಪಿದ್ದರು. ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ರಾಜೀನಾಮೆಗೆ ಒತ್ತಾಯಿಸಿದರು. ಈ ವೇಳೆ ಬಿಹಾರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಹತ್ತಾರು ಕಾರ್ಯಕರ್ತರು ಗಾಯಗೊಂಡಿದ್ದಾರೆ. ಬಿಜೆಪಿ ಸಂಸದ ಜನಾರ್ದನ್ ಸಿಂಗ್, ಅಶೋಕ್ ಯಾದವ್ ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪೊಲೀಸರ ಲಾಠಿಚಾರ್ಜ್‌ನಲ್ಲಿ ಅವರೂ ಗಾಯಗೊಂಡಿದ್ದಾರೆ.

ಮತ್ತಷ್ಟು ಓದಿ: Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

ಬಿಜೆಪಿ ನಾಯಕ ವಿಜಯ್ ಕುಮಾರ್ ಸಿಂಗ್ ಅವರನ್ನು ಕೊಂದ ಲಾಠಿ ಚಾರ್ಜ್ ಪ್ರಜಾಪ್ರಭುತ್ವ ವಿರೋಧಿ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಬಿಹಾರದಲ್ಲಿ 1.7 ಲಕ್ಷ ಶಿಕ್ಷಕರ ಹುದ್ದೆಗಳಿಗೆ ಲಕ್ಷಾಂತರ ಅರ್ಜಿಗಳು ಬಂದಿವೆ, ತಿಭಟನೆಯಲ್ಲಿ ತೊಡಗಿದ್ದ ಹಲವು ಪಕ್ಷದ ಮುಖಂಡರನ್ನು ಬಂಧಿಸಲಾಗಿದೆ. ಬಿಜೆಪಿ ರಾಜ್ಯಸಭಾ ಸಂಸದ ಸುಶೀಲ್ ಮೋದಿ ಅವರನ್ನೂ ವಶಕ್ಕೆ ಪಡೆಯಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ