AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ಬಿಹಾರ ಯಾತ್ರೆಯಲ್ಲಿ ಮೋದಿಯ ತಾಯಿಯ ನಿಂದನೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ

ಬಿಹಾರದಲ್ಲಿ ರಾಹುಲ್ ಗಾಂಧಿಯ ಯಾತ್ರೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ತಾಯಿಯ ಮೇಲೆ ನಿಂದನೆಗಳನ್ನು ಮಾಡಲಾಯಿತು. ಇದಕ್ಕೆ ರಾಹುಲ್ ಗಾಂಧಿ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ಬಿಹಾರದ ದರ್ಭಾಂಗದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಬಳಸಲಾದ ಪದಗಳ ಕುರಿತು ಬಿಜೆಪಿ ರಾಹುಲ್ ಗಾಂಧಿಯನ್ನು ಕಟುವಾಗಿ ಟೀಕಿಸಿದೆ.

ರಾಹುಲ್ ಗಾಂಧಿಯ ಬಿಹಾರ ಯಾತ್ರೆಯಲ್ಲಿ ಮೋದಿಯ ತಾಯಿಯ ನಿಂದನೆ; ಕ್ಷಮೆಯಾಚನೆಗೆ ಬಿಜೆಪಿ ಒತ್ತಾಯ
Rahul Gandhi Rally
ಸುಷ್ಮಾ ಚಕ್ರೆ
|

Updated on: Aug 28, 2025 | 4:49 PM

Share

ನವದೆಹಲಿ, ಆಗಸ್ಟ್ 28: ಬಿಹಾರದಲ್ಲಿ ರಾಹುಲ್ ಗಾಂಧಿ (Rahul Gandhi) ನೇತೃತ್ವದ ಯಾತ್ರೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ತಾಯಿಯ ಮೇಲೆ ನಿಂದನೆಯ ಘೋಷಣೆಗಳನ್ನು ಕೂಗಲಾಗಿದೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಆರೋಪಿಸಿದ್ದಾರೆ. ಹೀಗಾಗಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮೇಲೆ ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಚಾರದ ಸಮಯದಲ್ಲಿ ಪ್ರಧಾನಿ ಮೋದಿಯ ತಾಯಿಯ ವಿರುದ್ಧ ನಿಂದನೆಗಳನ್ನು ಮಾಡಲಾಗಿದೆ ಎಂದು ಹೇಳಿರುವ ಬಿಜೆಪಿ, ಕಾಂಗ್ರೆಸ್​ನ ಈ ಯಾತ್ರೆಯು ಎಲ್ಲಾ ಅವಮಾನ, ದ್ವೇಷದ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿದೆ.

“ಪ್ರಧಾನಿ ಮೋದಿ ಅವರ ದಿವಂಗತ ತಾಯಿಯ ವಿರುದ್ಧ ಅಸಭ್ಯ ಭಾಷೆ ಬಳಸಿರುವುದು ಅತ್ಯಂತ ನಾಚಿಕೆಗೇಡಿನ ಮತ್ತು ಖಂಡನೀಯ. ಈ ಭಾಷೆ ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಅವರ ಇಡೀ ಇಂಡಿಯ ಬ್ಲಾಕ್ ಸೇರಿದಂತೆ ಪ್ರಧಾನಿ ಮೋದಿ ವಿರುದ್ಧದ ದ್ವೇಷದ ಉತ್ತುಂಗವನ್ನು ಪ್ರತಿಬಿಂಬಿಸುತ್ತದೆ. ಆರ್‌ಜೆಡಿ-ಕಾಂಗ್ರೆಸ್ ಚುನಾವಣಾ ವೇದಿಕೆಯಿಂದ ಬಂದಿರುವ ಈ ದ್ವೇಷಪೂರಿತ ಹೇಳಿಕೆಯು ಬಿಹಾರ ಮತ್ತು ದೇಶಾದ್ಯಂತ ತಮ್ಮ ತಾಯಿಯನ್ನು ದೇವರಿಗೆ ಸಮಾನವೆಂದು ಪರಿಗಣಿಸುವ ಪ್ರತಿಯೊಬ್ಬ ಭಾರತೀಯನಿಗೆ ಮಾಡಿದ ಅವಮಾನವಾಗಿದೆ” ಎಂದು ಧರ್ಮೇಂದ್ರ ಪ್ರಧಾನ್ ಎಕ್ಸ್​ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ: ಗುಜರಾತ್​​ನಲ್ಲಿ ಆರಂಭವಾದ ಮತ ಕಳ್ಳತನವನ್ನು ಬಿಜೆಪಿ 2014ರಲ್ಲಿ ರಾಷ್ಟ್ರಮಟ್ಟಕ್ಕೂ ತಂದಿತು; ರಾಹುಲ್ ಗಾಂಧಿ ಆರೋಪ

“ಬಿಹಾರವನ್ನು ಅವಮಾನಿಸುವವರನ್ನು ಉತ್ತೇಜಿಸಿದ ನಂತರ, ವೈಯಕ್ತಿಕ ಕೋಪ ಮತ್ತು ದ್ವೇಷದಿಂದ ಪ್ರಧಾನಿ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅಂತಹ ಭಾಷೆಯನ್ನು ಬಳಸುವುದು ಕಾಂಗ್ರೆಸ್ ನಾಯಕರು, ಪಕ್ಷಗಳ ಕೆಟ್ಟ ಮನಸ್ಥಿತಿ ಮತ್ತು ತೀವ್ರ ಹತಾಶೆಗೆ ಪುರಾವೆಯಾಗಿದೆ.

ರಾಹುಲ್ ಗಾಂಧಿ ಮತ್ತು ತೇಜಸ್ವಿ ಯಾದವ್ ಅವರ ಯಾತ್ರೆಯ ವೇದಿಕೆಯಿಂದ ಪ್ರಧಾನಿ ನರೇಂದ್ರ ಮೋದಿಯವರ ದಿವಂಗತ ತಾಯಿಯ ವಿರುದ್ಧ ಅತ್ಯಂತ ಅಸಭ್ಯ ಭಾಷೆಯನ್ನು ಬಳಸಲಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ