AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmendra Pradhan: ಸಿಜೆಪಿ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ ಅವರು ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನೀಟ್ (NEET-UG) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಮತ್ತು ಪ್ರತಿಭಟನಾನಿರತ ಸಂಘಟನೆಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದವು.

Dharmendra Pradhan: ಸಿಜೆಪಿ ಬೇಡಿಕೆಗೆ ಮಣಿದ ಸರ್ಕಾರ; ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Dharmendra Pradhan ResignsImage Credit source: PTI
ಸುಷ್ಮಾ ಚಕ್ರೆ
|

Updated on:Jul 25, 2026 | 3:20 PM

Share

ಮುಖ್ಯಾಂಶಗಳು

  • ಕೊನೆಗೂ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಗೆಲುವು
  • ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ, ಜುಲೈ 25: ದೆಹಲಿಯ ಜಂತರ್ ಮಂತರ್‌ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಡೆಸಿದ ಬೃಹತ್ ಪ್ರತಿಭಟನೆಗಳ ಬೆನ್ನಲ್ಲೇ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮೇಂದ್ರ ಪ್ರಧಾನ್ (Dharmendra Pradhan Resignation) ಇಂದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಕೇಂದ್ರ ಸಚಿವರಾದ ಜೆಪಿ ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರನ್ನು ಭೇಟಿಯಾಗಿದ್ದ ಸಿಜೆಪಿ ವಕ್ತಾರರು ತಮ್ಮ 3 ಬೇಡಿಕೆಗಳನ್ನು ಸಲ್ಲಿಸಿದ್ದರು. ಅದರಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಯೇ ಮೊದಲ ಮತ್ತು ಮುಖ್ಯವಾದ ಬೇಡಿಕೆಯಾಗಿತ್ತು. ಸಂಧಾನ ಮಾತುಕತೆಯ ವೇಳೆ ಉಳಿದ ಎರಡು ಬೇಡಿಕೆಗಳಿಗೆ ಕೂಡಲೇ ಒಪ್ಪಿಗೆ ಸೂಚಿಸಿದ್ದ ಕೇಂದ್ರ ಸಚಿವರು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ನಿರ್ಧಾರ ತೆಗೆದುಕೊಳ್ಳಲು ಇಂದು (ಶನಿವಾರ) ಮಧ್ಯಾಹ್ನದವರೆಗೆ ಸಮಯ ಕೋರಿದ್ದರು.

ಇದೀಗ ಕೊನೆಗೂ ಸಿಜೆಪಿ ಹಾಗೂ ಪ್ರತಿಭಟನಾಕಾರರ ಬೇಡಿಕೆಗೆ ಮಣಿದಿರುವ ಕೇಂದ್ರ ಸರ್ಕಾರ ಧರ್ಮೇಂದ್ರ ಪ್ರಧಾನ್ ಅವರಿಂದ ರಾಜೀನಾಮೆ ಪಡೆದಿದೆ. ಅಲ್ಲಿಗೆ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿಸಿ ಪ್ರತಿಭಟನೆ ಮಾಡುತ್ತಿರುವವರ ಎಲ್ಲ ಬೇಡಿಕೆಗಳೂ ಈಡೇರಿದಂತಾಗಿದೆ.

ಇದನ್ನೂ ಓದಿ: ‘ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನಾಳೆಯವರೆಗೆ ಸಮಯ ಕೇಳಿದ ಸರ್ಕಾರ’; ಸಚಿವರ ಜೊತೆ ಸಭೆ ಬಳಿಕ ಸಿಜೆಪಿ ಮಾಹಿತಿ

ರಾಜೀನಾಮೆ ಬಳಿಕ ಧರ್ಮೇಂದ್ರ ಪ್ರಧಾನ್ ಹೇಳಿದ್ದೇನು?:

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, “ಜಂತರ್ ಮಂತರ್‌ನಲ್ಲಿ ಹಾಗೂ ದೇಶಾದ್ಯಂತ ಇರುವ ಪರಿಸ್ಥಿತಿಯ ಲಾಭವನ್ನು ದೇಶವಿರೋಧಿ ಶಕ್ತಿಗಳು ಪಡೆಯಬಾರದು. ದೇಶವು ಒಗ್ಗಟ್ಟಿನಿಂದ ಇರಬೇಕು. ಭಾರತದ ವಿದ್ಯಾರ್ಥಿಗಳು ಕಾನೂನು ಸಂಕಷ್ಟದಲ್ಲಿ ಸಿಲುಕಿಕೊಳ್ಳದೆ ತಮ್ಮ ಅಧ್ಯಯನ ಮತ್ತು ವೃತ್ತಿಜೀವನದ ಮೇಲೆ ಗಮನ ಹರಿಸಬೇಕು ಎಂಬ ಕಾರಣಕ್ಕಾಗಿ ನಾನು ಪ್ರಧಾನಮಂತ್ರಿಯವರಿಗೆ ನನ್ನ ರಾಜೀನಾಮೆಯನ್ನು ಸಲ್ಲಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇಂದು ಮಧ್ಯಾಹ್ನ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ‘ಸಿಜೆಪಿ’ ನೀಡಿದ ಡೆಡ್‌ಲೈನ್ ಅಂತ್ಯ

ಸಿಜೆಪಿ ಪ್ರತಿಕ್ರಿಯೆ:

ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬಳಿಕ ಎಕ್ಸ್​ನಲ್ಲಿ ಪ್ರತಿಕ್ರಿಯಿಸಿದ ಸಿಜೆಪಿ, “ಶಿಕ್ಷಣ ಸಚಿವರು ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ, ವಿದ್ಯಾರ್ಥಿ ಶಕ್ತಿಗೆ ಜಯವಾಗಲಿ” ಎಂದು ಬರೆದುಕೊಂಡಿದೆ.

ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಸಿಜೆಪಿ ವಕ್ತಾರ ಅಶುತೋಷ್ ರಾಂಕಾ, “ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರೊಂದಿಗಿನ ಭೇಟಿ ಫಲಪ್ರದವಾಗಿದೆ. ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿಷಯದಲ್ಲಿ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದ ನಂತರ ಸಿಜೆಪಿ ತನ್ನ ಮುಂದಿನ ನಡೆಯನ್ನು ನಿರ್ಧರಿಸಲಿದೆ” ಎಂದು ಹೇಳಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:42 pm, Sat, 25 July 26

Follow Us