AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ ರಾಜೀನಾಮೆ ನೀಡಿದ ಧರ್ಮೇಂದ್ರ ಪ್ರಧಾನ್ ಸಂಸತ್‌ಗೆ ಮರಳಿದರು. ಎನ್‌ಡಿಎ ಸಂಸದರು ಭವ್ಯ ಸ್ವಾಗತ ನೀಡಿದರು. ಜೈರಾಮ್ ರಮೇಶ್ ಅವರ ವ್ಯಂಗ್ಯಕ್ಕೆ ಪ್ರಧಾನ್, "ನಾನು ಬೀದಿ ಹೋರಾಟಗಾರ, ಎಸಿ ಕೊಠಡಿಯಲ್ಲಿ ಕೂರುವ ಕಾರ್ಯಕರ್ತನಲ್ಲ" ಎಂದು ಖಡಕ್ ತಿರುಗೇಟು ನೀಡಿದರು. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಅವರ ನಿರ್ಧಾರವನ್ನು ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ, ಪ್ರಧಾನ್ ಅವರ ಮುಂದಿನ ರಾಜಕೀಯ ಪಾತ್ರ ಕುತೂಹಲ ಕೆರಳಿಸಿದೆ.

ನಾನು ಬೀದಿ ಹೋರಾಟಗಾರ: ಜೈರಾಮ್ ರಮೇಶ್ ಹೇಳಿಕೆಗೆ ಧರ್ಮೇಂದ್ರ ಪ್ರಧಾನ್ ತಿರುಗೇಟು
ಧರ್ಮೇಂದ್ರ ಪ್ರಧಾನ್
ನಯನಾ ರಾಜೀವ್
|

Updated on: Jul 27, 2026 | 3:30 PM

Share

ನವದೆಹಲಿ, ಜುಲೈ 27: ನೀಟ್(NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಮೊದಲ ಬಾರಿಗೆ ಸಂಸತ್ತಿಗೆ ಆಗಮಿಸಿದ ಧರ್ಮೇಂದ್ರ ಪ್ರಧಾನ್ ಅವರಿಗೆ ಎನ್‌ಡಿಎ ಸಂಸದರು ಭವ್ಯ ಸ್ವಾಗತ ಕೋರಿದರು. ಈ ವೇಳೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಹೇಳಿಕೆಗೆ ಪ್ರಧಾನ್ ನೀಡಿದ ತಿರುಗೇಟು ಸಂಸತ್ತಿನ ಅಂಗಳದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಸಂಸತ್ತಿನ ಆವರಣದಲ್ಲಿ ಪ್ರಧಾನ್ ಅವರನ್ನು ಎದುರುಗೊಂಡ ಕಾಂಗ್ರೆಸ್ ಸಂಸದ ಜೈರಾಮ್ ರಮೇಶ್, “ಇದೆಲ್ಲಾ ನಡೆಯುತ್ತಿರುತ್ತದೆ ಬಿಡಿ” ಎಂದು ವ್ಯಂಗ್ಯವಾಗಿ ಮಾತನಾಡಿ ಸಮಾಧಾನಪಡಿಸಲು ಯತ್ನಿಸಿದರು. ಇದಕ್ಕೆ ತಕ್ಷಣವೇ ಪ್ರತ್ಯುತ್ತರ ನೀಡಿದ ಪ್ರಧಾನ್, “ಏನೂ ಆಗಿಲ್ಲ, ನಾನು ಬೀದಿ ಹೋರಾಟಗಾರ , ಎಸಿ ಕೊಠಡಿಯಲ್ಲಿ ಕೂರುವ ಕಾರ್ಯಕರ್ತನಲ್ಲ ಎಂದು ಖಡಕ್ ಆಗಿ ತಿರುಗೇಟು ನೀಡಿದ್ದಾರೆ.

ಸಂಸತ್ತಿನಲ್ಲಿ ಭವ್ಯ ಸ್ವಾಗತ ಸೋಮವಾರ ಪ್ರಧಾನ್ ಅವರು ಕಾರಿನಿಂದ ಇಳಿಯುತ್ತಿದ್ದಂತೆ ಎನ್‌ಡಿಎ ಸಂಸದರು “ಧರ್ಮೇಂದ್ರ ಪ್ರಧಾನ್ ಜಿಂದಾಬಾದ್” ಎಂದು ಜಯಘೋಷ ಕೂಗಿದರು. ಒಬ್ಬ ಸಂಸದರು ಸಾಂಪ್ರದಾಯಿಕ ಟೋಪಿ ಹಾಕಿ, ಶಾಲು ಹೊದಿಸಿ ಗೌರವಿಸಿದರು. ಯಾವುದೇ ನೇರ ಆರೋಪಗಳಿಲ್ಲದಿದ್ದರೂ ಯುವಕರ ಭವಿಷ್ಯಕ್ಕಾಗಿ ಹಾಗೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ ಅವರ ನಿರ್ಧಾರವನ್ನು ಬಿಜೆಪಿ ನಾಯಕರು “ತ್ಯಾಗ ಮತ್ತು ರಾಜಕೀಯ ಹೊಣೆಗಾರಿಕೆಯ ಮಾದರಿ” ಎಂದು ಬಣ್ಣಿಸಿದ್ದಾರೆ.

ವಿಡಿಯೋ

ಒಡಿಶಾದ ಸಂಬಲ್ಪುರ ಕ್ಷೇತ್ರದ ಸಂಸದರಾಗಿರುವ ಧರ್ಮೇಂದ್ರ ಪ್ರಧಾನ್, ರಾಜ್ಯ ಬಿಜೆಪಿಯ ಅತ್ಯಂತ ಪ್ರಭಾವಿ ನಾಯಕರಾಗಿದ್ದಾರೆ. ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುವಲ್ಲಿ ಮತ್ತು 78 ಶಾಸಕರಲ್ಲಿ ಬಹುಪಾಲು ಶಾಸಕರನ್ನು ಬೆಳೆಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ.

ಮತ್ತಷ್ಟು ಓದಿ: ನೀಟ್​ ಕೇಸ್ ಬಳಿಕ ಎಚ್ಚೆತ್ತ ಕೇಂದ್ರ: ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?

ಪ್ರಧಾನ್ ಅವರು ಕೇವಲ ಸಚಿವರಷ್ಟೇ ಅಲ್ಲದೆ, ಪಕ್ಷದ ಪ್ರಮುಖ ‘ಚುನಾವಣಾ ತಂತ್ರಜ್ಞ’ ಎಂದು ಹೆಸರು ಪಡೆದಿದ್ದಾರೆ. ಇತ್ತೀಚೆಗೆ ಹರಿಯಾಣ, ಬಿಹಾರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳದ ಭವಾನಿಪುರ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಗೆಲುವಿನ ಹಿಂದೆ ಇವರ ಪರಿಶ್ರಮವಿತ್ತು. ಸಚಿವ ಸ್ಥಾನದಿಂದ ಕೆಳಗಿಳಿದಿರುವ ಪ್ರಧಾನ್ ಅವರಿಗೆ ಮುಂಬರುವ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಉಸ್ತುವಾರಿ ಅಥವಾ ಬಿಜೆಪಿ ಪಕ್ಷದ ಸಂಘಟನೆಯಲ್ಲಿ ಪ್ರಮುಖ ರಾಷ್ಟ್ರೀಯ ಹುದ್ದೆಯನ್ನು ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು