AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DHFL ಹಗರಣ : ಅವಿನಾಶ್ ಭೋಸಲೆ ಅವರ ಅಗಸ್ಟಾ ವೆಸ್ಟ್​ ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡ ಸಿಬಿಐ

ಡಿಎಚ್​ಎಫ್​ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಮೂಲದ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್​ಲ್ಯಾಂಡ್ ಹೆಲಿಕಾಪ್ಟರ್​ ಅನ್ನು ಸಿಬಿಐ ವಶಪಡಿಸಿಕೊಂಡಿದೆ.

DHFL ಹಗರಣ : ಅವಿನಾಶ್ ಭೋಸಲೆ ಅವರ ಅಗಸ್ಟಾ ವೆಸ್ಟ್​ ಲ್ಯಾಂಡ್ ಹೆಲಿಕಾಪ್ಟರ್ ವಶಪಡಿಸಿಕೊಂಡ ಸಿಬಿಐ
Agusta WestlandImage Credit source: India.com
TV9 Web
| Edited By: |

Updated on: Jul 31, 2022 | 9:56 AM

Share

ಡಿಎಚ್​ಎಫ್​ಎಲ್ ಹಗರಣಕ್ಕೆ ಸಂಬಂಧಿಸಿದಂತೆ ಪುಣೆ ಮೂಲದ ಉದ್ಯಮಿ ಅವಿನಾಶ್ ಭೋಸಲೆಗೆ ಸೇರಿದ ಅಗಸ್ಟಾ ವೆಸ್ಟ್​ಲ್ಯಾಂಡ್ ಹೆಲಿಕಾಪ್ಟರ್​ ಅನ್ನು ಸಿಬಿಐ ವಶಪಡಿಸಿಕೊಂಡಿದೆ. 34,614 ಕೋಟಿ ರೂ ಬ್ಯಾಂಕ್ ಹಗರಣದಲ್ಲಿ ಈ ಹೆಲಿಕಾಪ್ಟರ್ ವಶಪಡಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ. ಹಗರಣ ಸಂಬಂಧ ಆಸ್ತಿ ವಶಕ್ಕೆ ಪಡೆಯಲು ಸಿಬಿಐ ಅಧಿಕಾರಿಗಳು ಅವಿನಾಶ್​ಗೆ ಸಂಬಂಧಿಸಿದ ಸಂಸ್ಥೆ ಹಾಗೂ ಆಸ್ತಿಗಳ ಮೇಲೆ ದಾಳಿ ನಡೆಸಿದ್ದರು.

ಈ ವೇಳೆ ಹೆಲಿಕಾಪ್ಟರ್ ಪತ್ತೆಯಾಗಿದ್ದು, ಅದನ್ನು ತನಿಖಾಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ವರದಿಗಳ ಪ್ರಕಾರ ಇತ್ತೀಚೆಗಷ್ಟೇ ಅವಿನಾಶ್ ಅಗಸ್ಟಾ ವೆಸ್ಟ್​ಲ್ಯಾಂಡ್ ನಿರ್ಮಾಣದ ಹೆಲಿಕಾಪ್ಟರ್ ಖರೀದಿಸಿದ್ದರು ಎಂದು ತಿಳಿದುಬಂದಿದೆ. ಜೂನ್ 20 ರಂದು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಮಾಜಿ ಡಿಎಚ್‌ಎಫ್‌ಎಲ್ ಅಧಿಕಾರಿಗಳಾದ ಕಪಿಲ್ ವಾಧವನ್, ದೀಪಕ್ ವಾಧವನ್ ಮತ್ತು ಇತರರ ವಿರುದ್ಧ ಸಿಬಿಐ ಆರೋಪ ಹೊರಿಸಿತ್ತು.

ಸಿಬಿಐ ಪ್ರಕಾರ, ಅವರು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ 17 ಬ್ಯಾಂಕ್‌ಗಳ ಒಕ್ಕೂಟಕ್ಕೆ ಡಿಎಚ್‌ಎಫ್‌ಎಲ್‌ನ ಬೋಗಸ್ ಲೆಡ್ಜರ್‌ಗಳಲ್ಲಿ 34,615 ಕೋಟಿ ಬ್ಯಾಂಕ್ ಸಾಲಗಳನ್ನು ನೀಡುವ ಮೂಲಕ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೋಟಿಗಟ್ಟಲೆ ಮೌಲ್ಯದ ಪೇಂಟಿಂಗ್‌ಗಳು, ವಾಚ್‌ಗಳು ಮತ್ತು ಆಭರಣಗಳು ಸಿಬಿಐ ಈಗಾಗಲೇ ವಶಪಡಿಸಿಕೊಂಡಿದೆ. ಕೆಲವು ದಿನಗಳ ಹಿಂದೆ, DHFL ಒಳಗೊಂಡಿರುವ ದೇಶದ ಅತಿದೊಡ್ಡ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮತ್ತಷ್ಟು ಹುಡುಕಾಟ ನಡೆಸಿತ್ತು.

ಈ ದಾಳಿಯ ವೇಳೆ ಕೇಂದ್ರ ಸಂಸ್ಥೆಯು ಜಾಕೋಬ್ ಆ್ಯಂಡ್ ಕಂ ಮತ್ತು ಫ್ರಾಂಕ್ ಮುಲ್ಲರ್ ಜಿನೀವಾ ಅವರ ಎರಡು ಸೂಪರ್ ಐಷಾರಾಮಿ ವಾಚ್‌ಗಳನ್ನು ವಶಪಡಿಸಿಕೊಂಡಿದ್ದು, ಇದರ ಒಟ್ಟು ಮೌಲ್ಯ ಸುಮಾರು 5 ಕೋಟಿ ರೂಪಾಯಿ ಎಂದು ಸಿಬಿಐ ತಿಳಿಸಿತ್ತು.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ