AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?

ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಹೊರತುಪಡಿಸಿ ಕಾಂಗ್ರೆಸ್‌ಗೆ ಹಿನ್ನಡೆಯಾಗಿದೆ. ತಮಿಳುನಾಡು ಚುನಾವಣೆಯಲ್ಲಿ ರಾಹುಲ್ ಗಾಂಧಿ ನಟ ವಿಜಯ್ ಅವರ ಟಿ.ವಿ.ಕೆ. ಪಕ್ಷದೊಂದಿಗೆ ಮೈತ್ರಿ ಸೂಚಿಸಿದ್ದರು. ಆದರೆ ಪಕ್ಷದ ಹಿರಿಯ ಡಿಎಂಕೆ ಜೊತೆಗೂಡಲು ನಿರ್ಧರಿಸಿದರು. ಅವರ ಮಾತಿಗೆ ಮನ್ನಣೆ ನೀಡಿ ರಾಹುಲ್ ಸುಮ್ಮನಾಗಿದ್ದರು. ಈ ನಿರ್ಧಾರವೇ ತಮಿಳುನಾಡಿನಲ್ಲಿ ಕಾಂಗ್ರೆಸ್‌ನ ಕಳಪೆ ಪ್ರದರ್ಶನಕ್ಕೆ ಕಾರಣವಾಯಿತೇ ಎಂಬ ಚರ್ಚೆ ಈಗ ಶುರುವಾಗಿದೆ.

ರಾಹುಲ್​​ ಮಾತು ಕೇಳದೆ ತಮಿಳುನಾಡಲ್ಲಿ ಕೆಟ್ಟಿತಾ ಕಾಂಗ್ರೆಸ್​​? ಅಸಲಿಗೆ ಆಗಿದ್ದೇನು?
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on:May 04, 2026 | 2:49 PM

Share

ಚೆನ್ನೈ, ಮೇ 04: ಪಂಚರಾಜ್ಯ ಚುನಾವಣೆಯಲ್ಲಿ ಕೇರಳ ಒಂದನ್ನು ಹೊರತುಪಡಿಸಿದರೆ ಉಳಿದೆಡೆ ಕಾಂಗ್ರೆಸ್​ ಸಾಧನೆ ಹೇಳಿಕೊಳ್ಳುವ ಮಟ್ಟಿಗೆ ಏನೂ ಆಗಿಲ್ಲ. ಈ ನಡುವೆ ತಮಿಳುನಾಡು ಚುನಾವಣೆ ಸಂಬಂಧ ಅಚ್ಚರಿಯ ವಿಚಾರವೊಂದು ಬೆಳಕಿಗೆ ಬಂದಿದ್ದು, ರಾಹುಲ್​​ ಗಾಂಧಿ ಹೇಳಿದ್ದ ಮಾತು ಕೇಳದೆ ಹೋಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ನ ಕಳಪೆ ಸಾಧನೆಗೆ ಕಾರಣವಾ? ಎಂಬ ಬಗ್ಗೆ ಹೊಸ ಚರ್ಚೆ ಶುರುವಾಗಿದೆ. ಹಿರಿಯರ ಸಲಹೆ ಎಂದು ರಾಹುಲ್​​ ಸುಮ್ಮನಾಗಿದ್ದೇ ತಮಿಳುನಾಡಲ್ಲಿ ಕಾಂಗ್ರೆಸ್​​ ಪಾಲಿಗೆ ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ.

ರಾಹುಲ್​​ ಏನು ಹೇಳಿದ್ದರು?

ತಮಿಳುನಾಡು ವಿಧಾನಸಭೆ ಚುನಾವಣೆಗೆ ನಟ ದಳಪತಿ ವಿಜಯ್​​ ನೇತೃತತ್ವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜೊತೆ ಮೈತ್ರಿ ಮಾಡಿಕೊಳ್ಳುವಂತೆ ರಾಹುಲ್​​ ಗಾಂಧಿ ಸೂಚಿಸಿದ್ದರು. ಆದರೆ ಟಿವಿಕೆ ಜತೆ ಮೈತ್ರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಿ.ಚಿದಂಬರಂ ಒಪ್ಪಿರಲಿಲ್ಲ. ಬದಲಾಗಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಜೊತೆಗೆ ಹೋಗೋಣ ಎಂದು ಅವರು ಸೂಚಿಸಿದ್ದರು. ಈ ವೇಳೆ ಹಿರಿಯರ ಮಾತಿಗೆ ಬೆಲೆ ಕೊಟ್ಟು ರಾಹುಲ್ ಗಾಂಧಿ ಕೂಡ ಸುಮ್ಮನಾಗಿದ್ದರು. ಹೀಗಾಗಿ ಖರ್ಗೆ, ಚಿದಂಬರಂ ನಿರ್ಧಾರದಿಂದ ಕಾಂಗ್ರೆಸ್​ಗೆ ಸೋಲು ಎಂಬ ಚರ್ಚೆ ಪಕ್ಷದಲ್ಲಿಯೇ ಶುರುವಾಗಿದೆ ಎಂದು ಎಐಸಿಸಿ ಮೂಲದ ನಾಯಕರಿಂದಲೇ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ದಳಪತಿ ಕಿಂಗ್ ಮೇಕರ್ ಅಲ್ಲ, ಕಿಂಗ್; ತಮಿಳುನಾಡಿಗೆ ವಿಜಯ್ ಮುಂದಿನ ಸಿಎಂ?

ಟಿವಿಕೆ-ಕಾಂಗ್ರೆಸ್​​ ಮೈತ್ರಿಗೆ ವಿಜಯ್​​ ತಂದೆಯ ಬೆಂಬಲ

234 ಸದಸ್ಯರ ಬಲವನ್ನು ಹೊಂದಿರುವ ತಮಿಳುನಾಡು ವಿಧಾನಸಭೆಯ ಅಧಿಕಾರ ಹಿಡಿಯಲು 118 ಸ್ಥಾನಗಳ ಅಗತ್ಯವಿದೆ. ನಟ ದಳಪತಿ ವಿಜಯ್​​ ನೇತೃತತ್ವ ತಮಿಳಗ ವೆಟ್ರಿ ಕಳಗಂ (ಟಿವಿಕೆ) ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದರೂ ಬಹುಮತಕ್ಕೆ ಬೆರಳೆಣಿಕೆಯ ಸೀಟ್​​ಗಳು ಕೊರತೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಚುನಾವಣಾ ಫಲಿತಾಂಶ ಭಾರಿ ಕುತೂಹಲಕ್ಕೆ ಕಾರಣವಾಗಿದ್ದು, ಸರ್ಕಾರ ರಚಿಸಲು ಅನ್ಯರ ಬೆಂಬಲ ಅನಿವಾರ್ಯವಾದರೆ ವಿಜಯ್​​ ಯಾರ ಜೊತೆ ಕೈಜೋಡಿಸಲಿದ್ದಾರೆ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಈ ನಡುವೆ ಮೈತ್ರಿ ಸಂಬಂಧ ಕಾಂಗ್ರೆಸ್​​ ಟಿವಿಕೆ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದ್ದು, ವಿಜಯ್​​ ತಂದೆಯೂ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.

ಚುನಾವಣಾ ಫಲಿತಾಂಶದ ಲೈವ್​ ಅಪ್​​ಡೇಟ್​​ಗಾಗಿ ಇಲ್ಲಿ ಕ್ಲಿಕ್ ಮಾಡಿ.

Published On - 2:47 pm, Mon, 4 May 26

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ