AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಮೃಗಾಲಯದಲ್ಲಿ ಚಿತ್ರಿಸಿದ ಕೊಕ್ಕರೆಗಳು; 140 ವಿವಿಧ ಬಣ್ಣದ ಪಕ್ಷಿಗಳ ಚಿತ್ರ ಸೆರೆ

Delhi Zoo: ಪಕ್ಷಿಗಳು ಗೂಡುಕಟ್ಟಿ ಸಂತಾನೋತ್ಪತ್ತಿ ಮಾಡುವ ಕೆಲವೇ ತಾಣಗಳಲ್ಲಿ ದೆಹಲಿಯ ಮೃಗಾಲಯ ಕೂಡಾ ಒಂದು ಎಂದು ಮೃಗಾಲಯದ ನಿರ್ದೇಶಕರಾದ ರಮೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ದೆಹಲಿ ಮೃಗಾಲಯದಲ್ಲಿ ಚಿತ್ರಿಸಿದ ಕೊಕ್ಕರೆಗಳು; 140 ವಿವಿಧ ಬಣ್ಣದ ಪಕ್ಷಿಗಳ ಚಿತ್ರ ಸೆರೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 16, 2021 | 11:38 AM

Share

ದೆಹಲಿ: ರಾಷ್ಟ್ರ ರಾಜಧಾನಿಯ ಮೃಗಾಲಯದಲ್ಲಿ ಬಣ್ಣ ಬಣ್ಣದ ಕೊಕ್ಕರೆಗಳು ಕಂಡು ಬಂದಿವೆ. ವಲಸೆ ಹಕ್ಕಿಗಳು ಆಗಸ್ಟ್ ಮಧ್ಯದಲ್ಲಿ ಪೂರ್ವ ಭಾಗಗಳಿಂದ ದೆಹಲಿಗೆ ಹಾರಿ ಬರುತ್ತಿದ್ದವು. ಈ ವರ್ಷ ಪಕ್ಷಿಗಳು ಮುಂಚಿತವಾಗಿ ಬಂದು ನೆಲೆಸಿವೆ. 140 ವಿವಿಧ ಬಣ್ಣದ ಕೊಕ್ಕರೆಗಳ ಚಿತ್ರ ಸೆರೆ ಹಿಡಿಯಲಾಗಿದ್ದು ಸುಂದರ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಆಗಸ್ಟ್ 6ರಂದು ಬಣ್ಣ ಬಣ್ಣದ ಕೊಕ್ಕರೆಗಳು ಮೃಗಾಲಯದಲ್ಲಿ ಕಂಡು ಬಂದವು. ಇವುಗಳ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯಲಾಯಿತು. ದಿನ ಸಾಗುತ್ತಿದ್ದಂತೆಯೇ ಪಕ್ಷಿಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಪಕ್ಷಿಗಳು ಗೂಡುಕಟ್ಟಿ ಸಂತಾನೋತ್ಪತ್ತಿ ಮಾಡುವ ಕೆಲವೇ ತಾಣಗಳಲ್ಲಿ ದೆಹಲಿಯ ಮೃಗಾಲಯ ಕೂಡಾ ಒಂದು ಎಂದು ಮೃಗಾಲಯದ ನಿರ್ದೇಶಕರಾದ ರಮೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗಾಗಿ ಪಕ್ಷಿ ವೀಕ್ಷಣೆ ಆಗಸ್ಟ್ ಕೊನೆಯ ವೇಳೆಗೆ ಪಕ್ಷಿಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುತ್ತವೆ. ಸುಮಾರು 500 ಪಕ್ಷಿಗಳಿಗಿಂತಲೂ ಹೆಚ್ಚಿನ ಪಕ್ಷಿಗಳು ಕಾಣಿಸಿಕೊಳ್ಳುತ್ತವೆ. ಸುಂದರವಾಗಿ ಕಾಣಿಸುವ ತಾಣಗಳ ಭೇಟಿಗೆ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಯೋಜನೆ ನಡೆಯುತ್ತಿದೆ. ಪಕ್ಷಿಗಳ ಮಾರ್ಗದರ್ಶನದ ಜತೆಗೆ ವಿದ್ಯಾರ್ಥಿಗಳು ಪಕ್ಷಿ ವೀಕ್ಷಣೆ ಮಾಡಲಿದ್ದಾರೆ ಎಂದು ರಮೇಶ್ ಕುಮಾರ್ ಪಾಂಡೆ ಮಾಹಿತಿ ಹಂಚಿಕೊಂಡಿದ್ದಾರೆ.

ಮುಂಬರುವ ವಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷಿಗಳಿರುವ ಜಾಗಕ್ಕೆ ಪ್ರವಾಸ ಕೈಗೊಳ್ಳಲು ಯೋಜನೆ ನಡೆಯುತ್ತಿದೆ. 20 ಪಕ್ಷಿವೀಕ್ಷಕರ ಜತೆ ವೀಕ್ಷಣೆ ನಡೆಯಲಿದೆ. ಬಣ್ಣಬಣ್ಣದ ಕೊಕ್ಕರೆಗಳು ಆಗಸ್ಟ್​ನಿಂದ ಅಕ್ಟೋಬರ್​ವರೆಗೆ ಸಂತಾನೋತ್ಪತ್ತಿ ಮಾಡುತ್ತವೆ. ಮಾರ್ಚ್​ವರೆಗೆ ದೆಹಲಿಯ ಮೃಗಾಲಯದಲ್ಲಿ ವಾಸಿಸುತ್ತವೆ. ಪಕ್ಷಿ ವೀಕ್ಷಣೆಯು ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ನೀಡಬಲ್ಲದು ಎಂದು ಪಕ್ಷಿತಜ್ಞೆ ಪಂಕಜ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ದೆಹಲಿ ಮೃಗಾಲಯ ಹೆರಾನ್​ಗಳು, ಕಿಂಗ್​ಫಿಶರ್​, ಗ್ರೇ ಹಾರ್ನ್ ಬಿಲ್, ಜಂಗಲ್ ಬಾಬ್ಲರ್, ಕಾರ್ಮೊರಂಟ್ಸ್, ಪ್ಯಾರಕೀಟ್ಸ್, ಹಸಿರು ಬಣ್ಣದ ಪಾರಿವಾಳ., ಕಂದು ತಲೆಯ ಬಾರ್ಬೆಟ್, ಸ್ಪಾಟ್-ಬಿಲ್ ಬಾತುಕೋಳಿ ಸೇರಿದಂತೆ ಸುಮಾರು 50 ವಿವಿಧ ಜಾತಿಯ ಪ್ರಬೇಧಗಳ ನೆಲೆಯಾಗಿದೆ.

ಇದನ್ನೂ ಓದಿ:

Covid Diary : ಕವಲಕ್ಕಿ ಮೇಲ್ ; ಪ್ರಾಣಿ ಪಕ್ಷಿಗಳಿಗೆ ತಾಯ್ತನ ತೋರಿಸುವವಳು ತಾನು ತಾಯಿ ಆಗಲಾರೆ ಎನ್ನುವಳಲ್ಲ?

ಆಸ್ಪತ್ರೆಯಲ್ಲಿ ಬೆಡ್​ ಇಲ್ಲದೇ ಪರದಾಟ; ಬೇರೆಡೆಗೆ ಕರೆದೊಯ್ದು ಕಾಪಾಡುವಷ್ಟರಲ್ಲಿ ಹಾರಿ ಹೋದ ಪ್ರಾಣಪಕ್ಷಿ

Published On - 11:35 am, Mon, 16 August 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!