AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಡಿಶಾ ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಚಿತ್ರಹಿಂಸೆ ನೀಡಿದ್ದ ಪ್ರಕರಣ; ತನಿಖೆಗೆ ಮುಂದಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ

Odisha woman home guard torture case; ಒಡಿಶಾ ಮಾನವ ಹಕ್ಕುಗಳ ಆಯೋಗವು ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರಿಂದ ವರದಿಯನ್ನು ಕೇಳಿದೆ. ಮಹಿಳಾ ಹೋಮ್​ ಗಾರ್ಡ್ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನದಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ಸದ್ಯ ಅವರಿಗೆ ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಡಿಶಾ ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಚಿತ್ರಹಿಂಸೆ ನೀಡಿದ್ದ ಪ್ರಕರಣ; ತನಿಖೆಗೆ ಮುಂದಾದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ಚಿತ್ರಹಿಂಸೆ ನೀಡಿದ ಪ್ರಕರಣದ ತನಿಖೆ ನಡೆಸುವಂತೆ ಬಿಜೆಪಿಯ ನಿಯೋಗ ಎನ್​ಎಚ್​ಆರ್​ಸಿಗೆ ಮನಸಿ ಸಲ್ಲಿಸಿದೆ.
ಗಣಪತಿ ಶರ್ಮಾ
|

Updated on: Aug 24, 2023 | 10:41 PM

Share

ಭುವನೇಶ್ವರ, ಆಗಸ್ಟ್ 24: ಒಡಿಶಾದಲ್ಲಿ (Odisha) ಮಹಿಳಾ ಹೋಮ್​ ಗಾರ್ಡ್​​ಗೆ (Woman Home Guard) ‘ಚಿತ್ರಹಿಂಸೆ’ ನೀಡಿದ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ತನಿಖೆ ನಡೆಸಲಿದೆ. ಮಹಿಳಾ ಹೋಮ್​ ಗಾರ್ಡ್​​ಗೆ ಡಿಐಜಿ ಮತ್ತು ಅವರ ಪತ್ನಿ ಚಿತ್ರಹಿಂಸೆ ನೀಡಿದ ಪ್ರಕರಣದ ತನಿಖೆ ನಡೆಸುವಂತೆ ಬಿಜೆಪಿಯ ರಾಜ್ಯ ಘಟಕದ ಉಪಾಧ್ಯಕ್ಷರಾದ ಲೇಖಾಶ್ರೀ ಸಮಂತಸಿಂಗರ್ ನೇತೃತ್ವದ ನಿಯೋಗ ದೆಹಲಿಯ ಎನ್‌ಎಚ್‌ಆರ್‌ಸಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿತ್ತು. ಬಿಜೆಪಿ ನಾಯಕರು ಲಿಖಿತ ದೂರನ್ನೂ ಸಲ್ಲಿಸಿದ್ದರು. ಆಯೋಗವು ತನಿಖೆಯ ಭರವಸೆ ನೀಡಿದೆ ಎಂದು ಸಮಂತಸಿಂಗರ್ ಹೇಳಿದ್ದಾರೆ.

ಏತನ್ಮಧ್ಯೆ, ಒಡಿಶಾ ರಾಜ್ಯ ಮಹಿಳಾ ಆಯೋಗವು ಈಗಾಗಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದೆ. ಅಲ್ಲದೆ, ಇಡೀ ಪ್ರಕರಣಕ್ಕೆ ಸಂಬಂಧಿಸಿ ಅಪರಾಧ ವಿಭಾಗದ ಪೊಲೀಸರಿಂದ ಈಗಾಗಲೇ ವರದಿ ಕೇಳಿದೆ. 15 ದಿನಗಳೊಳಗೆ ವರದಿ ಸಲ್ಲಿಸುವಂತೆ ರಾಜ್ಯ ಮಹಿಳಾ ಆಯೋಗ ಅಪರಾಧ ವಿಭಾಗದ ಎಡಿಜಿಗೆ ಸೂಚಿಸಿದೆ. ‘ಮಹಿಳಾ ಹೋಮ್​ ಗಾರ್ಡ್ ಚೇತರಿಸಿಕೊಂಡ ನಂತರ ಆಕೆಯನ್ನು ಭೇಟಿಯಾಗಿ ವಿವರ ಪಡೆಯುವುದಾಗಿ ಆಯೋಗದ ಅಧ್ಯಕ್ಷೆ ಮಿನಾತಿ ಬೆಹೆರಾ ತಿಳಿಸಿದ್ದಾರೆ.

ಒಡಿಶಾ ಮಾನವ ಹಕ್ಕುಗಳ ಆಯೋಗವು ಈಗಾಗಲೇ ಈ ಪ್ರಕರಣದಲ್ಲಿ ಪೊಲೀಸರಿಂದ ವರದಿಯನ್ನು ಕೇಳಿದೆ. ಮಹಿಳಾ ಹೋಮ್​ ಗಾರ್ಡ್ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳುವ ಯತ್ನದಲ್ಲಿ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದರು. ಸದ್ಯ ಅವರಿಗೆ ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಯು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ಉತ್ತರ ಕೇಂದ್ರ ವಿಭಾಗದ ಪ್ರಭಾರ ಡಿಐಜಿ ಬ್ರಿಜೇಶ್ ರೈ ಅವರನ್ನು ರಾಜ್ಯ ಪೊಲೀಸ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.

ಸಂತ್ರಸ್ತೆಯ ದೂರಿನಲ್ಲೇನಿದೆ?

ಡಿಐಜಿ ಪತ್ನಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಡಿಐಜಿ ಪತ್ನಿಯ ಬಟ್ಟೆ ಒಗೆಯುವಂತೆ ಕೇಳಿದ್ದು, ಒಪ್ಪದಿದ್ದಾಗ ಥಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. ಇಷ್ಟೇ ಅಲ್ಲದೆ, ಸೇವೆಯಿಂದ ವಜಾಗೊಳಿಸುವ ಬೆದರಿಕೆಯನ್ನೂ ಒಡ್ಡಲಾಗಿತ್ತು ಎನ್ನಲಾಗಿದೆ. ಆಗಸ್ಟ್ 4 ರಂದು ಕೃತ್ಯ ಎಸಗಲಾಗಿತ್ತು.

ಇದನ್ನೂ ಓದಿ: ಬಡತನದಲ್ಲಿ ಬೆಳೆದ ಬಾಲಕ ಈಗ ಚಂದ್ರಯಾನ-3 ತಂಡದಲ್ಲಿರುವ ಯುವ ವಿಜ್ಞಾನಿ; ಜಾರ್ಖಂಡ್​​ನ ಯುವಕನ ಸಾಧನೆಗೆ ಚಪ್ಪಾಳೆ

ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ನಾನು ಹತ್ತಿರದ ರೈಲು ಹಳಿಗಳಿಗೆ ಹೋಗಿ ಅಲ್ಲಿ ಆತ್ಮಹತ್ಯೆಗೆ ಯತ್ನಿಸಿದೆ. ಹಳಿಗಳ ಮೇಲೆ ನಿಂತಿದ್ದಾಗ ರೈಲು ಬರುತ್ತಿದ್ದುದರಿಂದ ಉಂಟಾದ ಕಂಪನದಿಂದಾಗಿ ನಾನು ಹೊರಗೆ ಬಿದ್ದೆ. ಆದರೆ, ಕಾಲುಗಳು ರೈಲಿನಡಿ ಸಿಲುಕಿ ನಜ್ಜುಗುಜ್ಜಾಗಿದ್ದವು. ಪ್ರಜ್ಞೆ ಮರಳಿ ಬರುವಾಗ, ನಾನು ಕಟಕ್‌ನ ಖಾಸಗಿ ಆಸ್ಪತ್ರೆಯಲ್ಲಿದ್ದೆ ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಬೆಂಗಳೂರು: ಗ್ರಾಹಕರಿಟ್ಟಿದ್ದ ಚಿನ್ನ ಎಗರಿಸಿದ ಮ್ಯಾನೇಜರ್
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ