AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗ್ವಿಜಯ್ ಸಿಂಗ್ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಎಳೆದಿದ್ದು ಸರಿಯೇ?: ಶಿವರಾಜ್ ಸಿಂಗ್ ಚೌಹಾಣ್

ದಿಗ್ವಿಜಯ ಸಿಂಗ್ ಸೋಲನ್ನು ಹೇಗೆ ಒಪ್ಪಿಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಸೋತ ನಂತರ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಮತದಾರರೊಂದಿಗೆ ಅನುಚಿತವಾಗಿ ವರ್ತಿಸಿದರು. ಮತದಾರರನ್ನು ತಳ್ಳಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸಿಂಗ್ ಅವರಂತಹ ಹಿರಿಯ ಕಾಂಗ್ರೆಸ್ ನಾಯಕ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಎಳೆಯುವುದು ಸರಿಯೇ .

ದಿಗ್ವಿಜಯ್ ಸಿಂಗ್ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಎಳೆದಿದ್ದು ಸರಿಯೇ?: ಶಿವರಾಜ್ ಸಿಂಗ್ ಚೌಹಾಣ್
Digvijaya Singh
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Jul 30, 2022 | 4:32 PM

Share

ಮಧ್ಯಪ್ರದೇಶ: ಮಧ್ಯಪ್ರದೇಶದ 40 ಜಿಲ್ಲಾ ಪಂಚಾಯತ್‌ಗಳಲ್ಲಿ ಅಧ್ಯಕ್ಷರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಪಕ್ಷದ ಬೆಂಬಲಿಗರು ಗೆದ್ದಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಹೇಳಿಕೊಂಡಿದೆ ಮತ್ತು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು 10 ಸ್ಥಾನಗಳನ್ನು ಗೆದ್ದಿದ್ದಾರೆ ಮತ್ತು ಇತರೆ ಪಕ್ಷದ ಬೆಂಬಲಿತ ಅಭ್ಯರ್ಥಿಗಳು 1 ಸ್ಥಾನವನ್ನು ಗೆದ್ದಿದ್ದಾರೆ. ಆದರೆ ಸಿಧಿ ಜಿಲ್ಲಾ ಪಂಚಾಯಿತಿ ಚುನಾವಣೆಗೆ ನ್ಯಾಯಾಲಯ ತಡೆ ನೀಡಿದೆ.

ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ, ಸ್ಥಳೀಯ ಆಡಳಿತ ಮತ್ತು ಪೊಲೀಸರು ಭಾರಿ ಅಕ್ರಮಗಳನ್ನು ನಡೆಸಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಚುನಾವಣಾ ಆಯೋಗಕ್ಕೆ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದೆ. ಭೋಪಾಲ್ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ನವ್ರಂಗ್ ಗುರ್ಜರ್ ಅವರ ಪತ್ನಿ ರಾಮ್ಕುನ್ವರ್ ಗುರ್ಜರ್ ಅವರ ಹೆಸರನ್ನು ಬಿಜೆಪಿ ಪ್ರಸ್ತಾಪಿಸಿದ ನಂತರ ಶುಕ್ರವಾರ ಮಧ್ಯಾಹ್ನ ಭೋಪಾಲ್‌ನಲ್ಲಿ ಕಾಂಗ್ರೆಸ್ ನಾಯಕರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿತ್ತು. ರಾಮ್‌ಕುನ್ವರ್ ಗುರ್ಜರ್ ಸೇರಿದಂತೆ ಮೂವರು ಪಕ್ಷೇತರ ಜಿಲ್ಲಾ ಪಂಚಾಯಿತಿ ಸದಸ್ಯರೊಂದಿಗೆ ಅಧ್ಯಕ್ಷರ ಮತಕ್ಕಾಗಿ ಕಲೆಕ್ಟರೇಟ್‌ ಜೊತೆಗೆ ಆಗಮಿಸಿದ ನಗರಾಭಿವೃದ್ಧಿ ಸಚಿವ ಭೂಪೇಂದ್ರ ಸಿಂಗ್ ಅವರನ್ನು ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಮತ್ತು ಕಾಂಗ್ರೆಸ್ ಶಾಸಕರಾದ ಪಿಸಿ ಶರ್ಮಾ ಮತ್ತು ಆರಿಫ್ ಮಸೂದ್ ತಡೆಯಲು ಯತ್ನಿಸಿದ್ದು, ಪೊಲೀಸರ ನಡುವೆ ಘರ್ಷಣೆಗೆ ಕಾರಣವಾಯಿತು.

ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗದೆ ದಿಗ್ವಿಜಯ ಸಿಂಗ್ ಪೊಲೀಸರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ದಿಗ್ವಿಜಯ ಸಿಂಗ್ ಸೋಲನ್ನು ಹೇಗೆ ಒಪ್ಪಿಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಸೋತ ನಂತರ ಅವರು ತಾಳ್ಮೆ ಕಳೆದುಕೊಂಡಿದ್ದಾರೆ. ಮತದಾರರೊಂದಿಗೆ ಅನುಚಿತವಾಗಿ ವರ್ತಿಸಿದರು. ಮತದಾರರನ್ನು ತಳ್ಳಿ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಸಿಂಗ್ ಅವರಂತಹ ಹಿರಿಯ ಕಾಂಗ್ರೆಸ್ ನಾಯಕ ಪೊಲೀಸ್ ಅಧಿಕಾರಿಯ ಕೊರಳಪಟ್ಟಿ ಎಳೆಯುವುದು ಸರಿಯೇ . ಸೋನಿಯಾ ಗಾಂಧಿ ಮತ್ತು ಕಮಲನಾಥ್ ಅವರು ಹಾಗೆ ವರ್ತಿಸಲು ಕೇಳಿದ್ದೀರಾ ಎಂದು ಉತ್ತರಿಸಬೇಕು. ಈ ಕೃತ್ಯವನ್ನು ನಾನು ಖಂಡಿಸಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು. ಮಹಿಳಾ ಮತದಾರರೊಂದಿಗೆ ಬಿಜೆಪಿ ಶಾಸಕ ರಾಮೇಶ್ವರ್ ಶರ್ಮಾ ಅವರು ಆವರಣಕ್ಕೆ ಪ್ರವೇಶಿಸುವುದನ್ನು ಆಕ್ಷೇಪಿಸಿದರೆ ನಮ್ಮ ಕರ್ತವ್ಯದಲ್ಲಿದ್ದ ಪೊಲೀಸರು ತಳ್ಳಿದ್ದರೆ ಎಂದು ದಿಗ್ವಿಜಯ ಸಿಂಗ್ ಹೇಳಿದ್ದಾರೆ. ಪೊಲೀಸರು ನನ್ನನ್ನು ತಳ್ಳುವುದನ್ನು ತಡೆಯಲು ಪ್ರಯತ್ನಿಸುತ್ತಿದ್ದೆ ಮತ್ತು ಮುಖ್ಯಮಂತ್ರಿ ಚೌಹಾಣ್ ಆರೋಪಿಸಿದಂತೆ ಯಾವುದೇ ಪೊಲೀಸರ ಕಾಲರ್​ನ್ನು ಹಿಡಿದಿಲ್ಲ ಎಂದು ಹೇಳಿದರು.

ಇದನ್ನೂ ಓದಿ
Image
Indian book of Record: ಚಂದ್ರಹಾಸ ಅವರ ಕೃತಿಗೆ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಗೌರವ
Image
Gallstone: ಶಸ್ತ್ರಚಿಕಿತ್ಸೆಯಿಲ್ಲದೆ ಪಿತ್ತಕೋಶದ ಕಲ್ಲುಗಳನ್ನು ತೆಗೆಯಲು ಸಾಧ್ಯವೆ! ಇಲ್ಲಿದೆ ಮನೆಮದ್ದು

ಕಾಂಗ್ರೆಸ್ ಬೆಂಬಲಿತ ಸದಸ್ಯರ ಎರಡು ಮತಗಳು ರದ್ದಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸ್ಥಳೀಯ ಕಾಂಗ್ರೆಸ್ ಶಾಸಕ ಸನಜಿ ಯಾದವ್, ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಕೇವಲ ಎಂಟು ಮತಗಳು ಬಂದರೂ ಕಾಂಗ್ರೆಸ್ ಸದಸ್ಯ ಒಂಬತ್ತು ಮತಗಳನ್ನು ಪಡೆದಿದ್ದರಿಂದ ಅವರನ್ನು ಗೆಲ್ಲಿಸಲು ಜಿಲ್ಲಾಡಳಿತವು ಮತಗಳನ್ನು ರದ್ದುಗೊಳಿಸಿದೆ ಎಂದು ಹೇಳಿದರು. ಮೊರೆನಾದಲ್ಲಿ ಕಾಂಗ್ರೆಸ್ ನಾಯಕರು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಕಚೇರಿಯ ಪ್ರತಿಭಟನೆ ಮಾಡಬೇಕಾದರೆ, ಇಬ್ಬರು ಕಾಂಗ್ರೆಸ್ ಬೆಂಬಲಿತ ಸದಸ್ಯರನ್ನು ಪೊಲೀಸರು ಬಂಧಿಸಿದ್ದರೆ ಎಂದು ಆರೋಪಿಸಿದರು. ಇಬ್ಬರು ಸದಸ್ಯರಾದ ಸಂದೀಪ್ ಶಾಕ್ಯಾ ಮತ್ತು ಗಿರ್ಧಾರಿ ಲಾಲ್ ಬೈರ್ವಾ ಅವರನ್ನು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ ರಾಮನಿವಾಸ್ ರಾವತ್ ಅವರು ಶಾಸಕರೊಂದಿಗೆ ಗುರುವಾರ ರಾತ್ರಿ ಎಸ್‌ಪಿ ಕಚೇರಿಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮತ ಚಲಾಯಿಸಿದ್ದಕ್ಕಾಗಿ ಜನರಿಗೆ ಧನ್ಯವಾದ ಅರ್ಪಿಸಿದರು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕಲ್ಯಾಣ ಯೋಜನೆ ಸಾಮಾನ್ಯ ಜನರ ಹೃದಯವನ್ನು ಗೆದ್ದಿದ್ದರಿಂದ ಬಿಜೆಪಿ ಬೆಂಬಲಿಗರು ಗೆದ್ದಿದ್ದಾರೆ ಎಂದು ಹೇಳಿದರು.

Published On - 4:26 pm, Sat, 30 July 22