AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ

ಟಿಕರಿ ಮತ್ತು ಸಿಂಘು ಗಡಿಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವಾಗ ಮಹಿಳೆಯರು ಮನೆ ಮತ್ತು ಹೊಲಗಳನ್ನು ಸಂಭಾಳಿಸುವ ಜತೆಗೆ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಬೆಂಬಲ ನೀಡುತ್ತಿದ್ದಾರೆ.

Delhi Chalo | ರೈತರ ಪ್ರತಿಭಟನೆಗೆ ಪಂಜಾಬ್, ಹರ್ಯಾಣದ ಗೃಹಿಣಿಯರ ಬೆಂಬಲ
ರಶ್ಮಿ ಕಲ್ಲಕಟ್ಟ
| Edited By: |

Updated on:Dec 14, 2020 | 11:20 AM

Share

ನವದೆಹಲಿ: ಹರ್ಯಾಣ ಮತ್ತು ಪಂಜಾಬ್​​ನಿಂದ ನೂರಾರು ಮಹಿಳೆಯರು ದೆಹಲಿಗೆ ಬಂದಿದ್ದು ರೈತರ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದಾರೆ.

ಕೇಂದ್ರ ಸರ್ಕಾರದ ನೂತನ ಕೃಷಿ ಕಾನೂನು ವಿರುದ್ಧ ತಮ್ಮ ಕುಟುಂಬದ ಸದಸ್ಯರು ಪ್ರತಿಭಟನೆ ನಡೆಸುತ್ತಿರುವಾಗ ಅವರಿಗೆ ಬೆಂಬಲ ನೀಡಲು ಮಹಿಳೆಯರು ದೆಹಲಿಗೆ ಬಂದಿದ್ದಾರೆ. ಗೃಹಿಣಿಯರು, ರೈತ ಮಹಿಳೆಯರು ತಮ್ಮ ಗ್ರಾಮಗಳಿಂದ ದೆಹಲಿಗೆ ಬಂದಿದ್ದು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ಕೃಷಿಕರನ್ನು ಲಿಂಗದ ಆಧಾರದ ಮೇಲೆ ವ್ಯಾಖ್ಯಾನಿಸಲು ಆಗುವುದಿಲ್ಲ. ಗಂಡಸು ಅಥವಾ ಹೆಂಗಸು ಹೊಲದಲ್ಲಿ ದುಡಿದರೆ ಲಿಂಗದ ಆಧಾರದ ಮೇಲೆ ಬೆಳೆ ಬೆಳೆಯುವುದಿಲ್ಲ. ಹಲವಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಹೀಗಿರುವಾಗ ನಾವು ಯಾಕೆ ಮನೆಯಲ್ಲಿ ಕುಳಿತಿರಬೇಕು ಎಂದು ಲುಧಿಯಾನದಿಂದ ಬಂದ 53ರ ಹರೆಯದ ರೈತ ಮಹಿಳೆ ಪ್ರಶ್ನಿಸುತ್ತಾರೆ.

ಮನ್​​ದೀಪ್ ಅವರು ಸಿಂಘು ಗಡಿಭಾಗಕ್ಕೆ ಬಸ್ ಮೂಲಕ ಬಂದಿದ್ದಾರೆ. ಕಳೆದ ಎರಡು ವಾರಗಳಿಂದ ರೈತರು ಇಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಆ ಪ್ರತಿಭಟನೆಯಲ್ಲಿ ಒಂದು ರಾತ್ರಿ ಭಾಗಿಯಾಗಿ ಮನೆಗೆ ಮರಳಿದ್ದಾರೆ. ನಾವು ನಮ್ಮ ಮನೆ ಮತ್ತು ಪ್ರತಿಭಟನೆ ಎರಡನ್ನೂ ಸಂಭಾಳಿಸಬೇಕು. ನಾನು ಇಲ್ಲಿಗೆ ಬರುವ ಮುನ್ನ ಗಿಡಗಳಿಗೆ ನೀರುಣಿಸಿ ಬಂದಿದ್ದೆ. ನಾನು ಹಿಂತಿರುಗುವವರೆಗೆ ಅದು ಸಾಕಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ: Delhi Chalo: 6ನೇ ಸುತ್ತಿನ ಸಭೆ ರದ್ದು, ಸಂಜೆ ಮುಂದಿನ ನಡೆ ಪ್ರಕಟಿಸಲಿರುವ ಪಂಜಾಬ್ ರೈತರು

ಟಿಕರಿ ಮತ್ತು ಸಿಂಘು ಗಡಿಭಾಗದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವಾಗ ಮಹಿಳೆಯರು ಮನೆ ಮತ್ತು ಹೊಲಗಳನ್ನು ಸಂಭಾಳಿಸುವ ಜತೆಗೆ ಪ್ರತಿಭಟನೆಗಳಲ್ಲಿ ಭಾಗಿಯಾಗಿ ಬೆಂಬಲ ನೀಡುತ್ತಿದ್ದಾರೆ.

ಮನ್​​ದೀಪ್ ಅವರೊಂದಿಗೆ ಲುಧಿಯಾನದಿಂದ ಸಿಂಘು ಗಡಿಭಾಗಕ್ಕೆ ಬರಲು ಐದು ಗಂಟೆಗಳ ಬಸ್ ಪ್ರಯಾಣದಲ್ಲಿ ಜತೆಯಾದವರು ಸುಖ್ವಿಂದರ್ ಕೌರ್.

ನಮ್ಮ ಕುಟುಂಬದವರು ಪ್ರತಿಭಟನೆ ನಡೆಸುತ್ತಿರುವಾಗ ಮನೆಯಲ್ಲಿ ಕುಳಿತುಕೊಳ್ಳಲು ನನ್ನಿಂದಾಗದು. ರಾತ್ರಿ ನನಗೆ ಸರಿಯಾಗಿ ನಿದ್ದೆ ಮಾಡಲು ಸಾಧ್ಯವಾಗುವುದಿಲ್ಲ. ನನ್ನ ಸಹೋದರು ಇಲ್ಲಿ ಹೋರಾಡುತ್ತಿರುವಾಗ ನಾನು ಮನೆಯಲ್ಲಿ ಹೇಗೆ ಕುಳಿತುಕೊಳ್ಳಲಿ? ನಾನು ಇಲ್ಲಿಗೆ ಬಂದ ನಂತರವೇ ಸರಿಯಾಗಿ ನಿದ್ದೆ ಮಾಡಿದ್ದು ಅಂತಾರೆ 68ರ ಹರೆಯದ ಸುಖ್ವಿಂದರ್ ಕೌರ್.

ಸುಖ್ವಿಂದರ್, ಮನ್​​ದೀಪ್ ಸೇರಿದಂತೆ ಹಲವಾರು ಮಹಿಳೆಯರು ಸರ್ಕಾರೇತರ ಸಂಸ್ಥೆ ಖಾಲ್ಸಾ ಏಡ್ ಸಿದ್ಧಪಡಿಸಿರುವ ವಾಟರ್ ಪ್ರೂಫ್ ಟೆಂಟ್​ನಲ್ಲಿ ಮಲಗಿದ್ದಾರೆ.

ನಾವು ಹಳ್ಳಿಯ ಗೃಹಿಣಿಯರು. ಜಗತ್ತಿನ ಬಗ್ಗೆ ನಮಗೆ ಜಾಸ್ತಿ ಗೊತ್ತಿಲ್ಲ. ಆದರೆ ಇಲ್ಲಿಗೆ ಬಂದ ನಂತರ ಈ ಹೋರಾಟ ಎಷ್ಟು ದೊಡ್ಡದು ಎಂಬುದು ತಿಳಿಯಿತು. ಅದೆಷ್ಟೇ ದಿನ ಮುಂದುವರಿಯಲಿ ನಾವು ಅದಕ್ಕೆ ಸಿದ್ಧರಾಗಿಯೇ ಬಂದಿದ್ದೇವೆ. ನಮಗೆ ಇಲ್ಲಿ ದೊರಕುವ ಸಹಾಯ ನೋಡಿದರೆ ಇಡೀ ದೇಶವೇ ನಮ್ಮ ಜತೆ ಇದೆ ಎಂದು ಅನಿಸುತ್ತಿದೆ. ಆಸ್ಟ್ರೇಲಿಯಾ, ಕೆನಡಾ ಮತ್ತು ಅಮೆರಿಕದವರು ಕೂಡಾ ನಮ್ಮ ಜತೆ ಇದ್ದಾರೆ ತಿಳಿಯಿತು. ಇಲ್ಲಿ ವೈದ್ಯಕೀಯ ಸವಲತ್ತು ಇದೆ. ಆದರೆ ಶೌಚಾಲಯಕ್ಕೆ ಹೋಗಬೇಕಾದರೆ ಸ್ವಲ್ಪ ದೂರ ಹೋಗಬೇಕು. ಇದರಿಂದಾಗಿಯೇ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮತ್ತೆ ಮನೆಗೆ ಮರಳುತ್ತಿದ್ದಾರೆ ಎಂದು ಸುಖ್ವಿಂದರ್ ಹೇಳಿದ್ದಾರೆ.

Delhi Chalo: ಕೇಂದ್ರ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಪಂಜಾಬ್ ರೈತರು

Published On - 3:12 pm, Sun, 13 December 20

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ