AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Gope Arrested: ಜಾರ್ಖಂಡ್​ನ ಮೋಸ್ಟ್​ ವಾಂಟೆಡ್​ ನಕ್ಸಲ್ ದಿನೇಶ್​ ಗೋಪ್​ ಬಗ್ಗೆ ತಿಳಿಯಿರಿ

ಜಾರ್ಖಂಡ್​ನಲ್ಲಿ ಭಯೋತ್ಪಾದನೆಗೆ ಸಮನಾರ್ಥಕವಾಗಿರುವ ಪೀಪಲ್ಸ್​ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ ಮುಖ್ಯಸ್ಥ ದಿನೇಶ್ ಗೋಪ್​ನನ್ನು ಎನ್​ಐಎ ಬಂಧಿಸಿದೆ. ಜಾರ್ಖಂಡ್​ ಪೊಲೀಸರು ದಿನೇಶ್​ ಗೋಪೆ ಹುಡುಕಿಕೊಟ್ಟವರಿಗೆ 25 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು.

Dinesh Gope Arrested: ಜಾರ್ಖಂಡ್​ನ ಮೋಸ್ಟ್​ ವಾಂಟೆಡ್​ ನಕ್ಸಲ್ ದಿನೇಶ್​ ಗೋಪ್​ ಬಗ್ಗೆ ತಿಳಿಯಿರಿ
ದಿನೇಶ್​ ಗೋಪೆ
ನಯನಾ ರಾಜೀವ್
|

Updated on: May 22, 2023 | 1:02 PM

Share

ಜಾರ್ಖಂಡ್​ನಲ್ಲಿ ಭಯೋತ್ಪಾದನೆಗೆ ಸಮನಾರ್ಥಕವಾಗಿರುವ ಪೀಪಲ್ಸ್​ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ ಮುಖ್ಯಸ್ಥ ದಿನೇಶ್ ಗೋಪ್​ನನ್ನು ಎನ್​ಐಎ ಬಂಧಿಸಿದೆ. ಜಾರ್ಖಂಡ್​ ಪೊಲೀಸರು ದಿನೇಶ್​ ಗೋಪ್​ ಹುಡುಕಿಕೊಟ್ಟವರಿಗೆ 25 ಲಕ್ಷ ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಎನ್​ಐಎ ಕೂಡ 5 ಲಕ್ಷ ರೂ ಬಹುಮಾನ ಘೋಷಿಸಿತ್ತು. ಗೋಪೆಯನ್ನು ನೇಪಾಳದಲ್ಲಿ ಬಂಧಿಸಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ ಆತನನ್ನು ಬಂಧಿಸಿದೆ. ಇದೀಗ ದೆಹಲಿಯಿಂದ ರಾಂಛಿಗೆ ಕರೆತರಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಾರ್ಖಂಡ್ ಪೊಲೀಸರು ಹಾಗೂ ಎನ್​ಐಎ ಜಂಟಿ ಕಾರ್ಯಾಚರಣೆ ನಡೆಸುವ ಮೂಲಕ ನಿಷೇಧಿತ ನಕ್ಸಲೀಯ ಸಂಘಟನೆ ಪಿಎಲ್​ಎಫ್​ಐ ಮುಖ್ಯಸ್ಥ ದಿನೇಶ್ ಗೋಪ್​ನನ್ನು ಬಂಧಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಜಾರ್ಖಂಡ್​ನ ವಿವಿಧ ರಾಜ್ಯಗಳಲ್ಲಿ ಈತನ ವಿರುದ್ಧ 150ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ.ದಿನೇಶ್​ ಗೋಪ್​ ವೇಷ ಬದಲಿಸಿ ನೇಪಾಳದಲ್ಲಿ ಓಡಾಡಿಕೊಂಡಿದ್ದ, ಕಳೆದ ವರ್ಷ ನೇಪಾಳದಲ್ಲಿ ತಲೆಮರೆಸಿಕೊಂಡಿದ್ದ, ಅಂತಿಮವಾಗಿ ಎನ್​ಐಎ ವಿಶೇಷ ತಂಡ ಜಾರ್ಖಂಡ್ ಪೊಲೀಸರ ಸಹಾಯದಿಂದ ಆತನನ್ನು ಬಂಧಿಸಿದೆ.

ಮತ್ತಷ್ಟು ಓದಿ: ಉಗ್ರರು, ದೇಶಭಕ್ತರನ್ನ ಒಂದೇ ತಕ್ಕಡಿಯಲ್ಲಿ ನೋಡುತ್ತಿದ್ದಾರೆ; ಕಾಂಗ್ರೆಸ್​ ವಿರುದ್ದ ಸಿಟಿ ರವಿ ವಾಗ್ದಾಳಿ

ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗುದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಕಳೆದ ವರ್ಷ ನಡೆದ ಎನ್‌ಕೌಂಟರ್‌ನಿಂದ ಗೋಪೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.

ಉದ್ಯಮಿಗಳು ಮತ್ತು ಗುತ್ತಿಗೆದಾರರನ್ನು ಭಯಭೀತರನ್ನಾಗಿಸಲು ಅವರಿಂದ ಹಣ ವಸೂಲಿ ಮಾಡುವಲ್ಲಿ ಗೋಪ್​ ಭಾಗಿಯಾಗಿದ್ದರು ಎಂದು ಎನ್‌ಐಎ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

ದಿನೇಶ್ ಗೋಪ್​ ಮೇಲೆ ಹಲವು ಗಂಭೀರ ಆರೋಪಗಳಿವೆ. ಭದ್ರತಾ ಪಡೆಗಳ ಮೇಲೆ ದಾಳಿ ಮಾಡಿದ್ದಷ್ಟೇ ಅಲ್ಲದೆ ಸಾಲ ವಸೂಲಿ, ಗುತ್ತಿಗೆದಾರರು-ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು ಅಷ್ಟೇ ಅಲ್ಲದೆ ಉಗ್ರಗಾಮಿಗಳಿಗೆ ಧನಸಹಾಯ ಮಾಡಿರುವ ಆರೋಪವು ಆತನ ಮೇಲಿದೆ.

ಆತನ ಪಿಎಲ್‌ಎಫ್‌ಐ ಜಾರ್ಖಂಡ್‌ನಲ್ಲಿ ನೂರಾರು ಭಯೋತ್ಪಾದಕ ಘಟನೆಗಳಲ್ಲಿ ಭಾಗಿಯಾಗಿದೆ ಮತ್ತು ನಿಷೇಧಿತ ನಕ್ಸಲ್ ಸಂಘಟನೆಗೆ ಸುಲಿಗೆಯೇ ಮುಖ್ಯ ಆದಾಯದ ಮೂಲವಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಮರಳಿ ಶಾಸಕ ಸ್ಥಾನ ಸಿಕ್ಕಿದಕ್ಕೆ ಕಾಂಗ್ರೆಸ್​​ನ ರಾಜೇಗೌಡ ಫುಲ್ ಖುಷ್
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!