AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದೊಂದಿಗೆ ರಾಜತಾಂತ್ರಿಕ ವಿವಾದ: ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆಯಲ್ಲಿ ಭಾಗವಹಿಸಲ್ಲ ಕೆನಡಾ

G20 Parliament Speakers' Summit: P20 ಶೃಂಗಸಭೆಯು ಅಕ್ಟೋಬರ್ 13-14 ರಂದು ನವದೆಹಲಿಯ ಯಶೋಭೂಮಿಯಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ನಲ್ಲಿ ನಡೆಯಲಿದೆ. ಭಾರತದ ಸಂಸತ್  G20 ಪ್ರೆಸಿಡೆನ್ಸಿಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಭಾರತದೊಂದಿಗೆ ರಾಜತಾಂತ್ರಿಕ ವಿವಾದ: ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆಯಲ್ಲಿ ಭಾಗವಹಿಸಲ್ಲ ಕೆನಡಾ
ಜಿ20 ಸಂಸತ್ ಸ್ಪೀಕರ್‌ಗಳ ಶೃಂಗಸಭೆ
ರಶ್ಮಿ ಕಲ್ಲಕಟ್ಟ
|

Updated on: Oct 12, 2023 | 7:23 PM

Share

ದೆಹಲಿ ಅಕ್ಟೋಬರ್ 12: ಜಿ20 ರಾಷ್ಟ್ರಗಳ ಸಂಸತ್ ಸ್ಪೀಕರ್​​ಗಳ ಶೃಂಗಸಭೆಯಿಂದ (G20 Parliament Speakers’ Summit) ಹೊರಗುಳಿಯಲು ಕೆನಡಾದ ಸೆನೆಟ್‌ನ ಸ್ಪೀಕರ್ ನಿರ್ಧರಿಸಿದ್ದಾರೆ. ಜೂನ್‌ನಲ್ಲಿ ಸರ್ರೆಯಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ (Hardeep Singh Nijjar) ಹತ್ಯೆಗೆ ಭಾರತ ಸರ್ಕಾರದ ಏಜೆಂಟರ “ಸಂಭಾವ್ಯ ಲಿಂಕ್” ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟ ನಂತರ ಈ ಬೆಳವಣಿಗೆ ನೆಡೆದಿದೆ.

ಇಂದು (ಗುರುವಾರ) ಕೆನಡಾದ ಸೆನೆಟ್‌ನ ಸ್ಪೀಕರ್ ರೇಮಂಡೆ ಗಗ್ನೆ ಅವರು ಜಿ20 ರಾಷ್ಟ್ರಗಳ ಪಿ20 ಸಭೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ. P20 ಸಭೆಯಲ್ಲಿ ಕೆನಡಾದಿಂದ ಯಾರೂ ಭಾಗವಹಿಸುವುದಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ. ನಾವು ಎಲ್ಲಾ ನಾಯಕರು ಮತ್ತು ಎಲ್ಲಾ ದೇಶಗಳನ್ನು ಭಾಗವಹಿಸಲು ಆಹ್ವಾನಿಸಿದ್ದೇವೆ. P20 ಶೃಂಗಸಭೆಗೆ ಹಾಜರಾಗಿರುವ ಬಗ್ಗೆ ಕೆನಡಾದವರಲ್ಲೇ ಕೇಳಲು ನಿಮ್ಮನ್ನು ವಿನಂತಿಸುತ್ತೇನೆ ಎಂದ ವಿದೇಶಾಂಗ ಸಚಿವಾಲಯ ಹೇಳಿದೆ.

P20 ಶೃಂಗಸಭೆಯು ಅಕ್ಟೋಬರ್ 13-14 ರಂದು ನವದೆಹಲಿಯ ಯಶೋಭೂಮಿಯಲ್ಲಿರುವ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ನಲ್ಲಿ ನಡೆಯಲಿದೆ. ಭಾರತದ ಸಂಸತ್  G20 ಪ್ರೆಸಿಡೆನ್ಸಿಯ ವಿಶಾಲ ಚೌಕಟ್ಟಿನ ಅಡಿಯಲ್ಲಿ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಇದನ್ನೂ ಓದಿ: ಭಾರತದಲ್ಲಿ ಖಲಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡಿರುವ ಆರೋಪ ಹೊತ್ತಿದ್ದ ಸಿಖ್ ವ್ಯಕ್ತಿಗೆ ಕೆನಡಾ ಬುಲಾವ್ 

ಭಾರತ-ಕೆನಡಾ ರಾಜತಾಂತ್ರಿಕ ಬಿಕ್ಕಟ್ಟು

ಕಳೆದ ತಿಂಗಳು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತ ಸರ್ಕಾರದ ಏಜೆಂಟರು “ಸಂಭಾವ್ಯ ಸಂಬಂಧ” ಹೊಂದಿದ್ದಾರೆ ಎಂಬುದಕ್ಕೆ ಕೆನಡಾದ ಭದ್ರತಾ ಏಜೆನ್ಸಿಗಳು “ವಿಶ್ವಾಸಾರ್ಹ ಪುರಾವೆಗಳು” ಎಂದು ಆರೋಪಿಸಿದ ನಂತರ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಗಲಾಟೆ ಪ್ರಾರಂಭವಾಯಿತು.

ಜೂನ್‌ನಲ್ಲಿ ಸರ್ರೆಯಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳಿಂದ ಗುರುದ್ವಾರದ ಹೊರಗೆ ಗುಂಡಿಕ್ಕಿ ಕೊಲ್ಲಲ್ಪಟ್ಟ ಹರ್ದೀಪ್ ಸಿಂಗ್ ನಿಜ್ಜಾರ್, ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದ. ಭಾರತ  ಕೆನಡಾ ಆರೋಪಗಳನ್ನು ನಿರಾಕರಿಸಿದ್ದು ಅದೆಲ್ಲ “ಅಸಂಬದ್ಧ” ಮತ್ತು “ಪ್ರಚೋದಿತ” ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ