AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಬಿಜೆಪಿಗಾಗಿ ಕೆಲಸ ಮಾಡಲು ಬಯಸಿದರೆ ಬಿಜೆಪಿ ಬ್ಯಾಡ್ಜ್ ಧರಿಸಿ, ಮಾಧ್ಯಮದವರಂತೆ ನಟಿಸಬೇಡಿ: ಪತ್ರಕರ್ತರೊಬ್ಬರ ಪ್ರಶ್ನೆಗೆ ರಾಹುಲ್ ಗಾಂಧಿ ತರಾಟೆ

ನೀವು ಬಿಜೆಪಿಗಾಗಿ ಕೆಲಸ ಮಾಡಲು ಬಯಸಿದರೆ ನಿಮ್ಮ ಎದೆಯ ಮೇಲೆ ಬಿಜೆಪಿ ಬ್ಯಾಡ್ಜ್  ಹಾಕಿಕೊಳ್ಳಿ. ನಂತರ ನಾನು ಅವರಿಗೆ (ಇತರ ಪತ್ರಕರ್ತರಿಗೆ) ಉತ್ತರಿಸಿದ ರೀತಿಯಲ್ಲಿಯೇ ನಾನು ನಿಮಗೆ ಉತ್ತರಿಸುತ್ತೇನೆ. ಪತ್ರಕರ್ತರಂತೆ ನಟಿಸಬೇಡಿ ಎಂದಿದ್ದಾರೆ ರಾಹುಲ್.

ನೀವು ಬಿಜೆಪಿಗಾಗಿ ಕೆಲಸ ಮಾಡಲು ಬಯಸಿದರೆ ಬಿಜೆಪಿ ಬ್ಯಾಡ್ಜ್ ಧರಿಸಿ, ಮಾಧ್ಯಮದವರಂತೆ ನಟಿಸಬೇಡಿ: ಪತ್ರಕರ್ತರೊಬ್ಬರ ಪ್ರಶ್ನೆಗೆ ರಾಹುಲ್ ಗಾಂಧಿ ತರಾಟೆ
ರಾಹುಲ್ ಗಾಂಧಿ
ರಶ್ಮಿ ಕಲ್ಲಕಟ್ಟ
|

Updated on: Mar 25, 2023 | 5:05 PM

Share

‘ಮೋದಿ ಸರ್​​ನೇಮ್’ (Modi Surname) ಟೀಕೆಗೆ ಸಂಬಂಧಿಸಿದಂತೆ ಸೂರತ್ ನ್ಯಾಯಾಲಯದ ತೀರ್ಪು ವಿಚಾರದಲ್ಲಿ ಪ್ರಶ್ನೆಯನ್ನು ಕೇಳಿದ್ದ ಪತ್ರಕರ್ತರನ್ನು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ತರಾಟೆಗೆ ತೆಗೆದುಕೊಂಡಿದ್ದಾರೆ. ಮಾರ್ಚ್ 24 ರಂದು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ರಾಹುಲ್ ಗಾಂಧಿ ಶನಿವಾರ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮೋದಿ ಉಪನಾಮದ ವಿರುದ್ಧ ರಾಹುಲ್ ಗಾಂಧಿಯವರ ಹೇಳಿಕೆಯು ‘ಒಬಿಸಿ (ಇತರ ಹಿಂದುಳಿದ ವರ್ಗಗಳು) ಸಮುದಾಯಕ್ಕೆ ಮಾಡಿದ ಅವಮಾನ’ ಎಂದು ಬಿಜೆಪಿ ಹೇಳುತ್ತಿದೆ. ಇದಕ್ಕೆ ಏನಂತೀರಿ ಎಂದು ಪತ್ರಕರ್ತರೊಬ್ಬರು ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ರಾಹುಲ್, ನೀವು ನೇರವಾಗಿ ಬಿಜೆಪಿಯವರಿಗೆ ಕೆಲಸ ಮಾಡುತ್ತಿದ್ದೀರಿ, ‘ಸ್ವಲ್ಪ ವಿವೇಚನೆ ತೋರಿ’ ಎಂದಿದ್ದಾರೆ.

ನೀವು ಬಿಜೆಪಿಗಾಗಿ ಕೆಲಸ ಮಾಡಲು ಬಯಸಿದರೆ ನಿಮ್ಮ ಎದೆಯ ಮೇಲೆ ಬಿಜೆಪಿ ಬ್ಯಾಡ್ಜ್  ಹಾಕಿಕೊಳ್ಳಿ. ನಂತರ ನಾನು ಅವರಿಗೆ (ಇತರ ಪತ್ರಕರ್ತರಿಗೆ) ಉತ್ತರಿಸಿದ ರೀತಿಯಲ್ಲಿಯೇ ನಾನು ನಿಮಗೆ ಉತ್ತರಿಸುತ್ತೇನೆ. ಪತ್ರಕರ್ತರಂತೆ ನಟಿಸಬೇಡಿ ಎಂದಿದ್ದಾರೆ ರಾಹುಲ್.

ಭಾಷಣದ ವೇಳೆ, ಲೋಕಸಭೆಗೆ ಶಾಶ್ವತವಾಗಿ ಅನರ್ಹಗೊಂಡರೂ ನಾನು ಹೆದರುವುದಿಲ್ಲ ಎಂದು ಹೇಳಿದ ಗಾಂಧಿ ಮತ್ತು ‘ಅದಾನಿ ಕುರಿತು ನನ್ನ ಮುಂದಿನ ಭಾಷಣಕ್ಕೆ ಪ್ರಧಾನಿ ಹೆದರುತ್ತಾರೆ’ ಎಂಬ ಕಾರಣದಿಂದ ನನ್ನನ್ನು  ಅನರ್ಹಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಹಿಂದುತ್ವ ಸಿದ್ಧಾಂತವಾದಿ ವಿಡಿ ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸಿದ  ರಾಹುಲ್ ಗಾಂಧಿ, ‘ಗಾಂಧಿಗಳು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ’ ಎಂದು ಹೇಳಿದ್ದಾರೆ. 2019 ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಮೋದಿ ಉಪನಾಮಗಳ ವಿರುದ್ಧ ಮಾಡಿದ ಹೇಳಿಕೆಗೆ ಗುಜರಾತ್‌ನ ಸ್ಥಳೀಯ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಕಾಂಗ್ರೆಸ್ ನಾಯಕನನ್ನು ಅನರ್ಹಗೊಳಿಸಲಾಯಿತು.

ಇದನ್ನೂ ಓದಿ: Rahul Gandhi Press Conference: ಅದಾನಿ ಜತೆ ಮೋದಿಗಿರುವ ಸಂಬಂಧ ಏನು? ನಾನು ಒಂದೇ ಪ್ರಶ್ನೆ ಕೇಳುತ್ತಿದ್ದೇನೆ, ಉತ್ತರಬೇಕು: ರಾಹುಲ್ ಗಾಂಧಿ

ಸಂವಿಧಾನದ 102 (1) (ಇ) ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 8 ರೊಂದಿಗೆ  ಪ್ರಕಾರ ಅಪರಾಧ ಸಾಬೀತಾದ ದಿನದಿಂದ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಲೋಕಸಭೆಯ ಸೆಕ್ರೆಟರಿಯೇಟ್ ಅಧಿಸೂಚನೆಯಲ್ಲಿ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್