AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿಗಾಗಿ 2 ಕಿ.ಮೀ ತೆವಳುತ್ತಾ ಪಂಚಾಯತ್ ಕಚೇರಿಗೆ ಬಂದ 70 ವರ್ಷದ ದಿವ್ಯಾಂಗ ಮಹಿಳೆ

ಪಿಂಚಣಿಗಾಗಿ 70 ವರ್ಷದ ಮಹಿಳೆಯೊಬ್ಬರು ಪಂಚಾಯತ್ ಕಚೇರಿಗೆ ತೆವಳುತ್ತಾ ಬಂದಿರುವ ವಿಡಿಯೋ ಎಲ್ಲೆಡೆ ವೈರ್ಲ ಆಗಿದೆ. ಒಡಿಶಾದಲ್ಲಿ ಘಟನೆ ನಡೆದಿದೆ. ಮಹಿಳೆ ಅಪಘಾತವೊಂದರಲ್ಲಿ ಕಾಲಿನ ಸ್ವಾಧೀನ ಕಳೆದುಕೊಂಡಿದ್ದು ನಿಂತುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ, ಮನೆಯಿಂದ 2ಕಿ.ಮೀ ದೂರದಲ್ಲಿರುವ ಪಂಚಾಯತ್ ಕಚೇರಿಗೆ ತೆವಳಿಕೊಂಡೇ ಹೋಗಿದ್ದಾರೆ

ಪಿಂಚಣಿಗಾಗಿ 2 ಕಿ.ಮೀ ತೆವಳುತ್ತಾ ಪಂಚಾಯತ್ ಕಚೇರಿಗೆ ಬಂದ 70 ವರ್ಷದ ದಿವ್ಯಾಂಗ ಮಹಿಳೆ
ಮಹಿಳೆ
ನಯನಾ ರಾಜೀವ್
|

Updated on: Sep 26, 2024 | 9:09 AM

Share

ವೃದ್ಧಾಪ್ಯವೇತನಕ್ಕಾಗಿ 70 ವರ್ಷದ ದಿವ್ಯಾಂಗ ಮಹಿಳೆಯೊಬ್ಬರು ತೆವಳುತ್ತಾ 2ಕಿ.ಮೀ ದೂರವಿರುವ ಪಂಚಾಯತ್ ಕಚೇರಿಗೆ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಕಣ್ಣೀರು ತರಿಸುವಂತಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೋವಿನಿಂದ ತೆವಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಪಥೂರಿ ದೆಹುರಿ ಎಂಬ ಹಿರಿಯ ಮಹಿಳೆ ಜೀವನೋಪಾಯಕ್ಕಾಗಿ ಪಿಂಚಣಿಯನ್ನೇ ಅವಲಂಬಿಸಿದ್ದಾರೆ ಮತ್ತು ಅವರ ಸಹಾಯಕ್ಕೆ ಯಾರೂ ಇಲ್ಲ. ಪಥೂರಿ ಅವರ ವಯಸ್ಸು ಮತ್ತು ಹಿಂದಿನ ಅಪಘಾತದಿಂದ ನಡೆಯಲು ಸಾಧ್ಯವಿಲ್ಲ.

ಸರ್ಕಾರವು ಫಲಾನುಭವಿಗಳ ಬಾಗಿಲಿಗೇ ಕಲ್ಯಾಣ ಪಿಂಚಣಿಗಳನ್ನು ತಲುಪಿಸಬೇಕೆಂಬ ನಿಯಮವಿದ್ದರೂ ಈ ಮಹಿಳೆ ಪಂಚಾಯತ್ ಕಚೇರಿಗೆ ಅಲೆಯುವಂತಾಗಿದೆ. ಇದು ಆಕೆಯ ಕೈ ಹಾಗೂ ಕಾಲಿನಲ್ಲಿ ಗುಳ್ಳೆಗಳು ಬರುವಂತೆ ಮಾಡಿದೆ. ಪಂಚಾಯತ್​ನ ಕಾರ್ಯನಿರ್ವಾಹಕ ಅಧಿಕಾರಿ ಪಿಂಚಣಿ ಪಡೆಯಲು ಕಚೇರಿಗೆ ಬರುವಂತೆ ಹೇಳಿದ್ದರು. ಬೇರೆ ದಾರಿ ಇಲ್ಲದೆ ಸಹಾಯ ಮಾಡುವವರು ಯಾರೂ ಇಲ್ಲದೆ 2 ಕಿ.ಮೀ ದೂರ ತೆವಳುತ್ತಾ ಬಂದಿದ್ದಾರೆ.

ಮತ್ತಷ್ಟು ಓದಿ: Dani Tribe: ವಿಚಿತ್ರ ಸಂಪ್ರದಾಯ; ಸಂಬಂಧಿ ಸತ್ತರೆ, ಆ ಕುಟುಂಬದ ಮಹಿಳೆ ತನ್ನ ಬೆರಳನ್ನು ಕತ್ತರಿಸಬೇಕು

ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನಿಸಿದಾಗ ಘಟನೆಯನ್ನು ಒಪ್ಪಿಕೊಂಡರೂ ಮಹಿಳೆಯ ಕಷ್ಟದ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳಿದರು. ಈ ಹಿಂದೆ ಪಿಂಚಣಿ ಪಡೆಯಲು ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದರು, ಆದರೆ ಅಪಘಾತದಲ್ಲಿ ಆಕೆಯ ಕಾಲಿಗೆ ಹಾನಿಯಾದ ನಂತರ ಅವರ ಮನೆಯವರು ಅಥವಾ ನಮ್ಮ ಕಚೇರಿಯ ಪ್ಯೂನ್ ಅವರ ಪಿಂಚಣಿಯನ್ನು ಅವರ ಮನೆಗೆ ತಲುಪಿಸುತ್ತಿದ್ದರು ಎಂದು ಅಧಿಕಾರಿ ಹೇಳಿದರು.

ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ, ಮುಂದಿನ ತಿಂಗಳಿನಿಂದ ಆಕೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಪಂಚಾಯಿತಿ ಅಧ್ಯಕ್ಷ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!