AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಂಚಣಿಗಾಗಿ 2 ಕಿ.ಮೀ ತೆವಳುತ್ತಾ ಪಂಚಾಯತ್ ಕಚೇರಿಗೆ ಬಂದ 70 ವರ್ಷದ ದಿವ್ಯಾಂಗ ಮಹಿಳೆ

ಪಿಂಚಣಿಗಾಗಿ 70 ವರ್ಷದ ಮಹಿಳೆಯೊಬ್ಬರು ಪಂಚಾಯತ್ ಕಚೇರಿಗೆ ತೆವಳುತ್ತಾ ಬಂದಿರುವ ವಿಡಿಯೋ ಎಲ್ಲೆಡೆ ವೈರ್ಲ ಆಗಿದೆ. ಒಡಿಶಾದಲ್ಲಿ ಘಟನೆ ನಡೆದಿದೆ. ಮಹಿಳೆ ಅಪಘಾತವೊಂದರಲ್ಲಿ ಕಾಲಿನ ಸ್ವಾಧೀನ ಕಳೆದುಕೊಂಡಿದ್ದು ನಿಂತುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ, ಮನೆಯಿಂದ 2ಕಿ.ಮೀ ದೂರದಲ್ಲಿರುವ ಪಂಚಾಯತ್ ಕಚೇರಿಗೆ ತೆವಳಿಕೊಂಡೇ ಹೋಗಿದ್ದಾರೆ

ಪಿಂಚಣಿಗಾಗಿ 2 ಕಿ.ಮೀ ತೆವಳುತ್ತಾ ಪಂಚಾಯತ್ ಕಚೇರಿಗೆ ಬಂದ 70 ವರ್ಷದ ದಿವ್ಯಾಂಗ ಮಹಿಳೆ
ಮಹಿಳೆ
ನಯನಾ ರಾಜೀವ್
|

Updated on: Sep 26, 2024 | 9:09 AM

Share

ವೃದ್ಧಾಪ್ಯವೇತನಕ್ಕಾಗಿ 70 ವರ್ಷದ ದಿವ್ಯಾಂಗ ಮಹಿಳೆಯೊಬ್ಬರು ತೆವಳುತ್ತಾ 2ಕಿ.ಮೀ ದೂರವಿರುವ ಪಂಚಾಯತ್ ಕಚೇರಿಗೆ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಕಣ್ಣೀರು ತರಿಸುವಂತಿದೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಹಿಳೆ ನೋವಿನಿಂದ ತೆವಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಟೀಕೆಗಳು ವ್ಯಕ್ತವಾಗಿವೆ.

ಪಥೂರಿ ದೆಹುರಿ ಎಂಬ ಹಿರಿಯ ಮಹಿಳೆ ಜೀವನೋಪಾಯಕ್ಕಾಗಿ ಪಿಂಚಣಿಯನ್ನೇ ಅವಲಂಬಿಸಿದ್ದಾರೆ ಮತ್ತು ಅವರ ಸಹಾಯಕ್ಕೆ ಯಾರೂ ಇಲ್ಲ. ಪಥೂರಿ ಅವರ ವಯಸ್ಸು ಮತ್ತು ಹಿಂದಿನ ಅಪಘಾತದಿಂದ ನಡೆಯಲು ಸಾಧ್ಯವಿಲ್ಲ.

ಸರ್ಕಾರವು ಫಲಾನುಭವಿಗಳ ಬಾಗಿಲಿಗೇ ಕಲ್ಯಾಣ ಪಿಂಚಣಿಗಳನ್ನು ತಲುಪಿಸಬೇಕೆಂಬ ನಿಯಮವಿದ್ದರೂ ಈ ಮಹಿಳೆ ಪಂಚಾಯತ್ ಕಚೇರಿಗೆ ಅಲೆಯುವಂತಾಗಿದೆ. ಇದು ಆಕೆಯ ಕೈ ಹಾಗೂ ಕಾಲಿನಲ್ಲಿ ಗುಳ್ಳೆಗಳು ಬರುವಂತೆ ಮಾಡಿದೆ. ಪಂಚಾಯತ್​ನ ಕಾರ್ಯನಿರ್ವಾಹಕ ಅಧಿಕಾರಿ ಪಿಂಚಣಿ ಪಡೆಯಲು ಕಚೇರಿಗೆ ಬರುವಂತೆ ಹೇಳಿದ್ದರು. ಬೇರೆ ದಾರಿ ಇಲ್ಲದೆ ಸಹಾಯ ಮಾಡುವವರು ಯಾರೂ ಇಲ್ಲದೆ 2 ಕಿ.ಮೀ ದೂರ ತೆವಳುತ್ತಾ ಬಂದಿದ್ದಾರೆ.

ಮತ್ತಷ್ಟು ಓದಿ: Dani Tribe: ವಿಚಿತ್ರ ಸಂಪ್ರದಾಯ; ಸಂಬಂಧಿ ಸತ್ತರೆ, ಆ ಕುಟುಂಬದ ಮಹಿಳೆ ತನ್ನ ಬೆರಳನ್ನು ಕತ್ತರಿಸಬೇಕು

ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯನ್ನು ಪ್ರಶ್ನಿಸಿದಾಗ ಘಟನೆಯನ್ನು ಒಪ್ಪಿಕೊಂಡರೂ ಮಹಿಳೆಯ ಕಷ್ಟದ ಬಗ್ಗೆ ತನಗೆ ತಿಳಿದಿರಲಿಲ್ಲ ಎಂದು ಹೇಳಿದರು. ಈ ಹಿಂದೆ ಪಿಂಚಣಿ ಪಡೆಯಲು ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದರು, ಆದರೆ ಅಪಘಾತದಲ್ಲಿ ಆಕೆಯ ಕಾಲಿಗೆ ಹಾನಿಯಾದ ನಂತರ ಅವರ ಮನೆಯವರು ಅಥವಾ ನಮ್ಮ ಕಚೇರಿಯ ಪ್ಯೂನ್ ಅವರ ಪಿಂಚಣಿಯನ್ನು ಅವರ ಮನೆಗೆ ತಲುಪಿಸುತ್ತಿದ್ದರು ಎಂದು ಅಧಿಕಾರಿ ಹೇಳಿದರು.

ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುತ್ತೇವೆ, ಮುಂದಿನ ತಿಂಗಳಿನಿಂದ ಆಕೆಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಮಾಡುತ್ತೇವೆ ಎಂದು ಪಂಚಾಯಿತಿ ಅಧ್ಯಕ್ಷ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?