Sign In

By signing in or creating an account, you agree with Associated Broadcasting Company's Terms & Conditions and Privacy Policy.

Discount On Tomatoes: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್

Tomatoes Price: ಇಂದಿನಿಂದ ದೇಶದ ವಿವಿಧ ಸ್ಥಳಗಳಲ್ಲಿ ಟೊಮೆಟೊಗಳನ್ನು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ.

Discount On Tomatoes: ಇಂದಿನಿಂದ ರಿಯಾಯಿತಿ ದರದಲ್ಲಿ ಟೊಮೆಟೊ ಮಾರಾಟ ಪ್ರಾರಂಭ, ಕರ್ನಾಟಕದ ಮಾರುಕಟ್ಟೆಗೆ ಡಿಮ್ಯಾಂಡ್
ಟೊಮೆಟೊ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jul 15, 2023 | 12:21 PM

ದೆಹಲಿ, ಜುಲೈ 15: ಟೊಮೆಟೊ… ಟೊಮೆಟೊ.. (Tomatoes) ಎಲ್ಲ ಕಡೆ ಟೊಮೆಟೊ ಬೆಲೆ ಏರಿಕೆಯ ಮಾತು, ಟೊಮೆಟೊಗೆ ಚಿನ್ನ ಬೆಲೆ ಆಗಿದೆ ಎಂದು ಎಲ್ಲರೂ ಚಿಂತೆ ಪಡುತ್ತಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ಟೊಮೆಟೊದ್ದೇ ಟ್ರೆಂಡಿಂಗ್, ಯಾವಾಗ ಈ ಟೊಮೆಟೊ ಬೆಲೆ ಕಡಿಮೆ ಆಗುತ್ತದೆ ಎಂಬ ನಿರೀಕ್ಷೆಯಲ್ಲಿರುವ ಗ್ರಾಹಕರೇ ಇಲ್ಲೊಮ್ಮೆ ನೋಡಿ, ಟೊಮೆಟೊವನ್ನು ರಿಯಾಯಿತಿ ಬೆಲೆಯಲ್ಲಿ ಮಾರಾಟ ಮಾಡಲು ಸರ್ಕಾರ ಮುಂದಾಗಿದೆ. ಇನ್ನೂ ರಿಯಾಯಿತಿ ಬೆಲೆಯಲ್ಲಿ ಟೊಮೆಟೊ ಎಲ್ಲೆಲ್ಲಿ ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ. ಇಂದಿನಿಂದ ದೆಹಲಿ, ಗುರುಗ್ರಾಮ್ ಮತ್ತು ಫರಿದಾಬಾದ್‌ನ ವಿವಿಧ ಸ್ಥಳಗಳಲ್ಲಿ ಟೊಮೆಟೊಗಳನ್ನು ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುವುದು ಎಂದು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ರೋಹಿತ್ ಕುಮಾರ್ ಸಿಂಗ್ ಹೇಳಿದ್ದಾರೆ. ಲಕ್ನೋ ಮತ್ತು ಕಾನ್ಪುರದಲ್ಲಿ ತಲಾ 15 ಮೊಬೈಲ್ ವ್ಯಾನ್‌ಗಳಲ್ಲಿ ಬೆಳಿಗ್ಗೆ 11 ರಿಂದ ಮಾರಾಟ ಪ್ರಾರಂಭವಾಗಲಿದೆ ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸರ್ಕಾರಿ ಸಂಸ್ಥೆಯಾದ ನ್ಯಾಷನಲ್ ಕೋಆಪರೇಟಿವ್ ಕನ್ಸ್ಯೂಮರ್ಸ್ ಫೆಡರೇಶನ್ ಆಫ್ ಇಂಡಿಯಾ (ಎನ್‌ಸಿಸಿಎಫ್) ಚಿಲ್ಲರೆ ಮಾರುಕಟ್ಟೆಗಳಲ್ಲಿ ಮಾರಾಟ ಮಾಡಲಿದೆ. ಗ್ರಾಹಕ ವ್ಯವಹಾರಗಳ ಇಲಾಖೆ ಹೇಳಿರುವಂತೆ ಪ್ರತಿ ಕಿಲೋಗ್ರಾಂಗೆ ₹ 90 ದರದಲ್ಲಿ ಲಭ್ಯವಿರುತ್ತದೆ .

ಹೆಚ್ಚುತ್ತಿರುವ ಟೊಮೆಟೊ ಬೆಲೆಯನ್ನು ತಡೆಗಟ್ಟಲು ಪ್ರಮುಖ ಬಳಕೆ ಕೇಂದ್ರಗಳಲ್ಲಿ ವಿತರಿಸಲು ಆಂಧ್ರಪ್ರದೇಶ, ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ತಕ್ಷಣ ಟೊಮೆಟೊ ಖರೀದಿಸಲು ಕೇಂದ್ರವು ಸೂಚಿಸಿದೆ. ಕಳೆದ ಒಂದು ತಿಂಗಳಲ್ಲಿ ಚಿಲ್ಲರೆ ಬೆಲೆಗಳು ಗರಿಷ್ಠ ಏರಿಕೆಯಾಗಿರುವುದರಿಂದ ಪ್ರಮುಖ ಬಳಕೆ ಕೇಂದ್ರಗಳಲ್ಲಿ ಏಕಕಾಲದಲ್ಲಿ ವಿತರಿಸಲು ಮೂರು ರಾಜ್ಯಗಳ ಮಂಡಿಗಳಿಂದ ಟೊಮ್ಯಾಟೊವನ್ನು ತಕ್ಷಣವೇ ಖರೀದಿಸುವಂತೆ ಗ್ರಾಹಕ ವ್ಯವಹಾರಗಳ ಇಲಾಖೆಯು ರಾಷ್ಟ್ರೀಯ ಕೃಷಿ ಸಹಕಾರಿ ಮಾರುಕಟ್ಟೆ ಒಕ್ಕೂಟ ಮತ್ತು ರಾಷ್ಟ್ರೀಯ ಸಹಕಾರಿ ಗ್ರಾಹಕರ ಒಕ್ಕೂಟಕ್ಕೆ ಸೂಚನೆ ನೀಡಿದೆ.

ಇದನ್ನೂ ಓದಿ:T ಬೆಲೆ ಏರಿಕೆ ಪರಿಣಾಮ; ಭೇಲ್ ಪುರಿಯಿಂದ ಮಾಯವಾಯ್ತು ಟೊಮೆಟೊ! 

ಗ್ರಾಹಕ ವ್ಯವಹಾರಗಳ ಸಚಿವಾಲಯವು, ಮುಂಗಾರು ಮತ್ತು ವಾತಾವರಣದ ಕಾರಣದಿಂದ ಟೊಮೆಟೊಗಳ ಬೆಲೆ ನಾಶವಾಗಿದೆ, ಜತೆಗೆ ಟೊಮೆಟೊಗಳ ಬೆಳೆಗಳಲ್ಲಿ ಹಿಂಜರಿತ ಕಂಡಿದ್ದು ಮತ್ತು ಅದನ್ನು ಸಮರ್ಪಕವಾಗಿ ಬೆಳೆಯಲು ಸರಿಯಾದ ಸಮಯದಲ್ಲಿ ಮಾನ್ಸೂನ್​​ ಆಗದ ಕಾರಣದಿಂದ ಟೊಮೆಟೊ ಬೆಲೆ ಹೆಚ್ಚಾಗಲು ಕಾರಣವಾಗಿದೆ ಎಂದು ಹೇಳಿದ್ದಾರೆ. ಸಾಮಾನ್ಯ ಈ ಸಮಯದಲ್ಲಿ ಟೊಮೆಟೊ ಬೆಲೆ ಕಡಿಮೆಯಾಗಬೇಕಿತ್ತು. ಆದರೆ ತಾತ್ಕಾಲಿಕ ಪೂರೈಕೆಗಳಿಗೆ ಅಡೆತಡೆಗಳು ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ಮತ್ತು ಇತರ ಅಂಶಗಳಿಂದಾಗಿ ಬೆಳೆ ಹಾನಿ ಹೆಚ್ಚಾಗಿ ಟೊಮೆಟೊ ಬೆಲೆಗಳಲ್ಲಿ ಹಠಾತ್ ಏರಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ