AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಯುಎಇ ಅಧ್ಯಕ್ಷರ ನಡುವೆ ಮಹತ್ವದ ದೂರವಾಣಿ ಸಂಭಾಷಣೆ; ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಇಂದು ದೂರವಾಣಿ ಕರೆ ಮೂಲಕ ಸಂಭಾಷಣೆ ನಡೆಸಿದರು. ಈ ವೇಳೆ ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ಎದುರಾಗಿರುವ ಬಿಕ್ಕಟ್ಟು, ತೈಲ ಭದ್ರತೆ ಹಾಗೂ ಭಾರತ-ಯುಎಇ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಕುರಿತು ಉಭಯ ನಾಯಕರು ವಿಚಾರ ವಿನಿಮಯ ಮಾಡಿಕೊಂಡರು. ಪ್ರಧಾನಿ ನರೇಂದ್ರ ಮೋದಿ ಅವರ 76ನೇ ಜನ್ಮದಿನದ ಮರುದಿನವೇ ಈ ಕರೆ ನಡೆದಿದ್ದು, ಯುಎಇ ಅಧ್ಯಕ್ಷರು ಪ್ರಧಾನಿ ಮೋದಿಯವರಿಗೆ ಜನ್ಮದಿನದ ಹೃದಯಪೂರ್ವಕ ಶುಭಾಶಯ ಕೋರಿದರು.

ಪ್ರಧಾನಿ ಮೋದಿ, ಯುಎಇ ಅಧ್ಯಕ್ಷರ ನಡುವೆ ಮಹತ್ವದ ದೂರವಾಣಿ ಸಂಭಾಷಣೆ; ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಕುರಿತು ಚರ್ಚೆ
Uae President And Pm Modi
ಸುಷ್ಮಾ ಚಕ್ರೆ
|

Updated on: Sep 18, 2026 | 9:14 PM

Share

ನವದೆಹಲಿ, ಸೆಪ್ಟೆಂಬರ್ 18: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಅವರು ಇಂದು ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಕುರಿತು ವಿಸ್ತೃತ ಚರ್ಚೆ ನಡೆಸಿದರು. ದೂರವಾಣಿ ಸಂಭಾಷಣೆಯ ವೇಳೆ, ನವದೆಹಲಿಯಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡ ಭಾರತದ ಬ್ರಿಕ್ಸ್ ಅಧ್ಯಕ್ಷತೆಗಾಗಿ ಯುಎಇ ಅಧ್ಯಕ್ಷರು ಪ್ರಧಾನಿ ಮೋದಿಯವರನ್ನು ಅಭಿನಂದಿಸಿದರು. ಅಲ್ಲದೆ, ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಅವರಿಗೆ ಶುಭಾಶಯ ಕೋರಿದರು.

ಸೆಪ್ಟೆಂಬರ್ 11 ಮತ್ತು 12ರಂದು ನವದೆಹಲಿಯಲ್ಲಿ ನಡೆದ 2 ದಿನಗಳ ಬ್ರಿಕ್ಸ್ ಶೃಂಗಸಭೆಯಲ್ಲಿ ಯುಎಇ ಕ್ರೌನ್ ಪ್ರಿನ್ಸ್​ ಖಾಲಿದ್ ಅವರು ಭಾಗವಹಿಸಿದ್ದಕ್ಕಾಗಿ ಪ್ರಧಾನಿ ಮೋದಿ ಯುಎಇ ಅಧ್ಯಕ್ಷರಿಗೆ ಧನ್ಯವಾದ ಸಲ್ಲಿಸಿದರು.

ಇದನ್ನೂ ಓದಿ: ಇರಾನ್ ಜತೆಗಿನ ಎಲ್ಲಾ ವ್ಯಾಪಾರ, ಹಣಕಾಸು ವಹಿವಾಟು ಸ್ಥಗಿತಗೊಳಿಸಿದ ಯುಎಇ

ಈ ದೂರವಾಣಿ ಸಂಭಾಷಣೆಯ ನಂತರ ಪೋಸ್ಟ್ ಹಂಚಿಕೊಂಡ ಪ್ರಧಾನಿ ಮೋದಿ, “ನನ್ನ ಸಹೋದರ, ಯುಎಇ ಅಧ್ಯಕ್ಷ ಶೇಕ್ ಮೊಹಮ್ಮದ್ ಬಿನ್ ಝಾಯೆದ್ ಅಲ್ ನಹ್ಯಾನ್ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದರು. ಅದಕ್ಕಾಗಿ ಅವರಿಗೆ ಧನ್ಯವಾದಗಳು. ನಮ್ಮ ದ್ವಿಪಕ್ಷೀಯ ಸಹಭಾಗಿತ್ವವನ್ನು ಮತ್ತಷ್ಟು ಗಟ್ಟಿಗೊಳಿಸುವ ಕ್ರಮಗಳ ಕುರಿತು ನಾವು ಚರ್ಚಿಸಿದೆವು. ಪ್ರಾದೇಶಿಕ ಶಾಂತಿ, ಭದ್ರತೆ ಮತ್ತು ಸ್ಥಿರತೆಯನ್ನು ಉತ್ತೇಜಿಸುವ ಪ್ರಯತ್ನಗಳ ಬಗ್ಗೆ ವಿಚಾರ ವಿನಿಮಯ ಮಾಡಿಕೊಂಡೆವು” ಎಂದು ಬರೆದುಕೊಂಡಿದ್ದಾರೆ.

ಉಭಯ ನಾಯಕರು ಪಶ್ಚಿಮ ಏಷ್ಯಾದಲ್ಲಿ ಪ್ರಸ್ತುತ ಎದುರಾಗಿರುವ ಪರಿಸ್ಥಿತಿಯ ಕುರಿತು ಚರ್ಚಿಸಿದರು. ಪ್ರಾದೇಶಿಕ ಹಾಗೂ ಜಾಗತಿಕ ಮಟ್ಟದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಉತ್ತೇಜಿಸಲು ಪರಸ್ಪರ ಸಹಕಾರ ಮತ್ತು ಸಮನ್ವಯವನ್ನು ಮುಂದುವರಿಸಲು ಎರಡೂ ದೇಶಗಳು ಬದ್ಧವಾಗಿವೆ ಎಂದು ಪುನರುಚ್ಚರಿಸಿದವು.

ಇದನ್ನೂ ಓದಿ: ಮೋದಿ ಹುಟ್ಟುಹಬ್ಬಕ್ಕೆ ಇತಿಹಾಸ ನಿರ್ಮಾಣ; ಉಜ್ಜಯಿನಿಯಲ್ಲಿ ಬೆಳಗಿದ 33 ಲಕ್ಷ ದೀಪ, ಮಧ್ಯಪ್ರದೇಶದಲ್ಲಿ 3.55 ಕೋಟಿ ದೀಪ!

ಇತ್ತೀಚಿನ ಬ್ರಿಕ್ಸ್ ಶೃಂಗಸಭೆಯ ವೇಳೆ ಯುಎಇ ಪ್ರಿನ್ಸ್​ ಖಾಲಿದ್ ಅವರೊಂದಿಗಿನ ದ್ವಿಪಕ್ಷೀಯ ಸಭೆಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ರಕ್ಷಣೆ, ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಪ್ರಮುಖ ಖನಿಜಗಳು, ಇಂಧನ, ಆಹಾರ ಭದ್ರತೆ, ಬಂಡವಾಳ ಹೂಡಿಕೆ ಹಾಗೂ ‘ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್’ ಸಂಪರ್ಕ ಜಾಲದಂತಹ ಆಯಕಟ್ಟಿನ ಕ್ಷೇತ್ರಗಳಲ್ಲಿ ಭವಿಷ್ಯದ ಭಾರಿ ಸಾಧ್ಯತೆಗಳ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ತಮ್ಮದೇ ನಟನೆ ಸಿನಿಮಾ ನೋಡಿ ಕಣ್ಣೀರು ಹಾಕಿದ ನಟಿ ಮೋನಿಷಾ: ವಿಡಿಯೋ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ದಕ್ಷಿಣ ಕನ್ನಡ ಜಿಲ್ಲೆ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ತುಳು 2ನೇ ಭಾಷೆಯನ್ನಾಗಿ ಘೋಷಣೆ: ಕುಣಿದು ಕುಪ್ಪಳಿಸಿದ ಶಾಸಕ ಅಶೋಕ್ ರೈ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಆ ಕಾಲದಲ್ಲೇ ಹಿಂದಿಯವರು ಅನಂತ್ ನಾಗ್ ಬಗ್ಗೆ ಮಾತಾಡುತ್ತಿದ್ದರು: ಉಪೇಂದ್ರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ಟಿ. ನರಸಿಪುರದಲ್ಲಿ ಗಣೇಶ ಮೂರ್ತಿ ಶೋಭಾಯಾತ್ರೆ ನೇರಪ್ರಸಾರ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ತುಳು ರಾಜ್ಯದ 2ನೇ ಭಾಷೆ:ಮಂಗಳೂರಿನಲ್ಲಿ ಮುಗಿಲು ಮುಟ್ಟಿದ ಸಂಭ್ರಮ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಉಪೇಂದ್ರ ಹುಟ್ಟುಹಬ್ಬದ ಸಂಭ್ರಮ; ಹೊಸ ಸಿನಿಮಾ ಪೋಸ್ಟರ್ ಬಿಡುಗಡೆ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಸಚಿವ ಸಂಪುಟ ಸಭೆ ಅಂತ್ಯ: ಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿ ನೇರಪ್ರಸಾರ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಮೋಸ ಮಾಡಿ ರೆಡ್ ಹ್ಯಾಂಡ್​ ಆಗಿ ಸಿಕ್ಕಿಬಿದ್ದ ಗಗನ್ ಚಿನ್ನಪ್ಪ
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!
ಲೂಟಿ ಹಣದಲ್ಲಿ ಗೆಳತಿಗ ಲಕ್ಷಾಂತರ ರೂ. ಚಿನ್ನಾಭರಣ ಕೊಡಿಸಿದ್ದ ಜ್ಞಾನೇಂದ್ರ!