Disha Encounter ದಿಶಾ ಎನ್‌ಕೌಂಟರ್ ನಕಲಿ, ಆರೋಪಿಗಳ ಹತ್ಯೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಸಿರ್ಪುರ್ಕರ್ ಆಯೋಗ ಶಿಫಾರಸು

ಪೊಲೀಸರ ಪ್ರಕಾರ, ಆರೋಪಿಗಳು ಬಂದೂಕುಗಳನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಆರೋಪಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸೈಬರಾಬಾದ್ ಪೊಲೀಸರು ತಿಳಿಸಿದ್ದಾರೆ

Disha Encounter  ದಿಶಾ ಎನ್‌ಕೌಂಟರ್ ನಕಲಿ, ಆರೋಪಿಗಳ ಹತ್ಯೆ ಮಾಡಿದ ಪೊಲೀಸರ ವಿರುದ್ಧ ಕ್ರಮಕ್ಕೆ ಸಿರ್ಪುರ್ಕರ್ ಆಯೋಗ ಶಿಫಾರಸು
ದಿಶಾ ಎನ್‌ಕೌಂಟರ್Image Credit source: PTI
Follow us
| Updated By: ರಶ್ಮಿ ಕಲ್ಲಕಟ್ಟ

Updated on: May 20, 2022 | 8:54 PM

ಹೈದರಾಬಾದ್‌ನಲ್ಲಿ(Hyderabad) 2019ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ (gang rape) ಪ್ರಕರಣದ ಆರೋಪಿಗಳನ್ನು ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದು ಈ ಎನ್‌ಕೌಂಟರ್ ನಕಲಿ ಎಂದು ಸುಪ್ರೀಂಕೋರ್ಟ್ ನೇಮಿಸಿದ ನ್ಯಾಯಮೂರ್ತಿ ಸಿರ್ಪುರ್ಕರ್ ಆಯೋಗ (Sirpurkar commission) ಶುಕ್ರವಾರ ಹೇಳಿದೆ. ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟ ನಾಲ್ವರು ಅತ್ಯಾಚಾರ ಮತ್ತು ಕೊಲೆ ಆರೋಪಿಗಳಲ್ಲಿ ಮೂವರು ಅಪ್ರಾಪ್ತರು ಎಂದು ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರ ನೇತೃತ್ವದ ಮೂವರು ಸದಸ್ಯರ ಸಮಿತಿ ಹೇಳಿದೆ. ಆರೋಪಿ ಪೊಲೀಸರನ್ನು ಕೊಲೆ ಆರೋಪದ ವಿಚಾರಣೆ ನಡೆಸುವಂತೆ ಸಮಿತಿಯು ವರದಿಯಲ್ಲಿ ಶಿಫಾರಸು ಮಾಡಿದೆ. 2019 ರ ನವೆಂಬರ್‌ನಲ್ಲಿ ಹೈದರಾಬಾದ್ ಬಳಿಯ ಶಂಶಾಬಾದ್‌ನಲ್ಲಿ 26 ವರ್ಷದ ಪಶುವೈದ್ಯೆಯನ್ನು ಅತ್ಯಾಚಾರವೆಸಗಿ ಹತ್ಯೆಮಾಡಿದ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಯಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿದ್ದ ನಾಲ್ವರು ಆರೋಪಿಗಳ ಹತ್ಯೆಯನ್ನು ‘ದಿಶಾ ಎನ್‌ಕೌಂಟರ್‘  (Disha encounter)ಎಂದು ಕರೆಯಲಾಗಿದೆ. ಅತ್ಯಾಚಾರಕ್ಕೀಡಾಗಿ ಕೊಲೆಯಾದ ಸಂತ್ರಸ್ತೆಯ ಹೆಸರು ಗೌಪ್ಯವಾಗಿರಿಸಲು ಪೊಲೀಸರು ಸಂತ್ರಸ್ತೆಗೆ ದಿಶಾ ಎಂಬ ಹೆಸರನ್ನು ಇಟ್ಟಿದ್ದಾರೆ.  ದಿಶಾ ಸರ್ಕಾರಿ ಆಸ್ಪತ್ರೆಯಲ್ಲಿ ಪಶುವೈದ್ಯಕೀಯ ಸಹಾಯಕ ಸರ್ಜನ್ ಆಗಿದ್ದು ಒಂದು ರಾತ್ರಿ ನಾಲ್ವರು ಪುರುಷರು ಆಕೆಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ್ದರು.ಹತ್ಯೆಗೈದ ನಂತರ ಆಕೆಯ ದೇಹವನ್ನು ಟ್ರಕ್‌ಗೆ ತುಂಬಿಸಿ ಸೇತುವೆಯ ಕೆಳಗೆ ಸುಟ್ಟು ಹಾಕಿದ್ದರು.

ಈ ಘಟನೆಯು ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗುತ್ತಿದ್ದಂತೆ, ತೆಲಂಗಾಣ ಪೊಲೀಸರು ತ್ವರಿತ ನ್ಯಾಯಾಲಯದ ವಿಚಾರಣೆಯ ಆಧಾರದ ಮೇಲೆ ವಿಳಂಬವಿಲ್ಲದೆ ಶಿಕ್ಷೆಯನ್ನು ನೀಡುವಂತೆ ಒತ್ತಡಕ್ಕೆ ಒಳಗಾದರು. ಎಲ್ಲಾ ಆರೋಪಿಗಳನ್ನು 2019 ರ ಡಿಸೆಂಬರ್ 6 ರಂದು ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯ ಸೇತುವೆಯ ಕೆಳಗೆ ಪೊಲೀಸ್ ಕಸ್ಟಡಿಯಲ್ಲಿ ಹತ್ಯೆ ಮಾಡಲಾಯಿತು.

ಪೊಲೀಸರ ಪ್ರಕಾರ, ಆರೋಪಿಗಳು ಬಂದೂಕುಗಳನ್ನು ಕಸಿದುಕೊಂಡು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಆರೋಪಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಸೈಬರಾಬಾದ್ ಪೊಲೀಸರು ತಿಳಿಸಿದ್ದಾರೆ. ‘ದಿಶಾ ಎನ್‌ಕೌಂಟರ್’ ಅನ್ನು ನ್ಯಾಯಬಾಹಿರ ಮರಣದಂಡನೆಯ ನಿದರ್ಶನವೆಂದು ಹಲವರು ಖಂಡಿಸಿದ್ದರೂ ದೇಶಾದ್ಯಂತ ಸಾವಿರಾರು ಜನರು ಆರೋಪಿಗಳಿಗೆ ತ್ವರಿತ ನ್ಯಾಯ ನೀಡಲಾಗಿದೆ ಎಂದು ಸಂಭ್ರಮಿಸಿದ್ದರು.

ಇದನ್ನೂ ಓದಿ
Image
Video: ಛತ್ರಪತಿ ಶಿವಾಜಿ ಪ್ರತಿಮೆ ವಿಚಾರವಾಗಿ ಸಂಘರ್ಷ; ತೆಲಂಗಾಣದ ಗಡಿ ಪಟ್ಟಣವೊಂದರಲ್ಲಿ ಸೆಕ್ಷನ್​ 144 ಜಾರಿ
Image
ದಿಶಾ ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​; ಇಂದು ಪುರಾವೆ ಸಲ್ಲಿಸುವಂತೆ ತೆಲಂಗಾಣ ಸರ್ಕಾರಕ್ಕೆ ಸುಪ್ರೀಂ ಆಯೋಗದ ಸೂಚನೆ

ಸೈಬರಾಬಾದ್ ಪೊಲೀಸರಿಂದ ಆರೋಪಿಗಳ ಕಾನೂನುಬಾಹಿರ ಹತ್ಯೆಗಳ ಆರೋಪಗಳನ್ನು ತನಿಖೆ ಮಾಡಲು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸಿರ್ಪುರ್ಕರ್ ಆಯೋಗವನ್ನು ರಚಿಸಿದೆ.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ