AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಂಸತ್ ಭವನದ ಮಹಾದ್ವಾರದಲ್ಲಿ ಪ್ರಧಾನಿ ಮೋದಿಯವರ ಡಿಗ್ರಿ ಪ್ರದರ್ಶಿಸಿ: ಸಂಜಯ್ ರಾವುತ್

ಕೆಲವರು ಪ್ರಧಾನ ಮಂತ್ರಿಯವರ ಡಿಗ್ರಿಯನ್ನು ನಕಲಿ ಎಂದು ಕರೆಯುತ್ತಿದ್ದಾರೆ. ಸಂಪೂರ್ಣ ರಾಜಕೀಯ ವಿಜ್ಞಾನದ (Entire Political Science) ಪದವಿ ಎಂಬುದು ಐತಿಹಾಸಿಕ ಮತ್ತು ಕ್ರಾಂತಿಕಾರಿ ಎಂದು ನಾನು ಪ್ರಾಮಾಣಿಕವಾಗಿ ನಂಬುತ್ತೇನೆ. ಆದ್ದರಿಂದ ಅದನ್ನು ನಮ್ಮ ಹೊಸ ಸಂಸತ್ತಿನ ಮಹಾದ್ವಾರದಲ್ಲಿ ಪ್ರದರ್ಶಿಸಬೇಕು

ಹೊಸ ಸಂಸತ್ ಭವನದ ಮಹಾದ್ವಾರದಲ್ಲಿ ಪ್ರಧಾನಿ ಮೋದಿಯವರ ಡಿಗ್ರಿ ಪ್ರದರ್ಶಿಸಿ: ಸಂಜಯ್ ರಾವುತ್
ಸಂಜಯ್ ರಾವುತ್
ರಶ್ಮಿ ಕಲ್ಲಕಟ್ಟ
|

Updated on: Apr 03, 2023 | 5:08 PM

Share

ಹೊಸ ಸಂಸತ್ ಭವನದ  ಮಹಾದ್ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಶೈಕ್ಷಣಿಕ ಪದವಿಯನ್ನು ಪ್ರದರ್ಶಿಸಬೇಕು ಎಂದು ಶಿವಸೇನಾ (UBT) ಹೇಳಿದೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಸೇನಾ (ಯುಬಿಟಿ) ಸಂಸದ ಮತ್ತು ಮುಖ್ಯ ವಕ್ತಾರ ಸಂಜಯ್ ರಾವುತ್ (Sanjay Raut), ಜನರ ಮನಸ್ಸಿನಲ್ಲಿ ಅನುಮಾನಗಳನ್ನು ಸೃಷ್ಟಿಸುವ ಮೂಲಕ ಪ್ರಧಾನಿ ಪದವಿಯನ್ನು ‘ರಹಸ್ಯ’ ಎಂದು ಏಕೆ ಕಾಪಾಡಲಾಗುತ್ತಿದೆ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಕೆಲವರು ಪ್ರಧಾನ ಮಂತ್ರಿಯವರ ಡಿಗ್ರಿಯನ್ನು ನಕಲಿ ಎಂದು ಕರೆಯುತ್ತಿದ್ದಾರೆ. ಸಂಪೂರ್ಣ ರಾಜಕೀಯ ವಿಜ್ಞಾನದ (Entire Political Science) ಪದವಿ ಎಂಬುದು ಐತಿಹಾಸಿಕ ಮತ್ತು ಕ್ರಾಂತಿಕಾರಿ ಎಂದು ನಾನು ಪ್ರಾಮಾಣಿಕವಾಗಿ ನಂಬುತ್ತೇನೆ. ಆದ್ದರಿಂದ ಅದನ್ನು ನಮ್ಮ ಹೊಸ ಸಂಸತ್ತಿನ ಮಹಾದ್ವಾರದಲ್ಲಿ ಪ್ರದರ್ಶಿಸಬೇಕು. ಇದರಿಂದ ಜನರು ಅದರ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕುವುದನ್ನು ನಿಲ್ಲಿಸಬೇಕು ಎಂದಿದ್ದಾರೆ ರಾವುತ್.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಪ್ರಧಾನಿ ಪದವಿಯ ಬಗ್ಗೆ ವಿವರಗಳನ್ನು ಕೇಳಿದಾಗ, ಅವರು ಅದನ್ನು ನಿರಾಕರಿಸಿದ್ದು ರೂ 25,000 ದಂಡವನ್ನು ಸಹ ವಿಧಿಸಿದರು ಎಂದು ಸೇನಾ (ಯುಬಿಟಿ) ನಾಯಕ ಹೇಳಿದರು.  ಪ್ರಧಾನಿಯವರ ಡಿಗ್ರಿ ಕೇಳುವಾಗ ಮುಚ್ಚಿಡಲು ಏನಿದೆ? ಈಗ ಮೋದಿ ಅವರೇ ಮುಂದೆ ಬಂದು ಅವರ ಶೈಕ್ಷಣಿಕ ಪದವಿಯ ಊಹಾಪೋಹಗಳನ್ನು ತೆರವುಗೊಳಿಸಬೇಕು ಎಂದಿದ್ದಾರೆ ರಾವುತ್. ಪ್ರಧಾನಿ ಡಿಗ್ರಿ ‘ನಕಲಿ’ ಎಂದು ಪ್ರತಿಪಾದಿಸಿರುವ ಪಕ್ಷದ ಪತ್ರಿಕೆಗಳು, ಸಾಮ್ನಾ ಮತ್ತು ದೋಪಹರ್ ಕಾ ಸಾಮ್ನಾ ಸಂಪಾದಕೀಯವಾಗಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜಕೀಯ ವಲಯದಲ್ಲಿ ಡಿಗ್ರಿವಿಷಯ ಮತ್ತೊಮ್ಮೆ ಪ್ರಸ್ತಾಪವಾಗುತ್ತಿದೆ.

ಭಾನುವಾರ ರಾತ್ರಿ ಶಿವಸೇನಾ (ಯುಬಿಟಿ) ಅಧ್ಯಕ್ಷ ಮತ್ತು ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಛತ್ರಪತಿ ಸಂಭಾಜಿನಗರದ ಮಹಾ ವಿಕಾಸ್ ಅಘಾಡಿಯಲ್ಲಿ (ಎಂವಿಎ) ವಿರುದ್ಧ ಗುಡುಗಿದ್ದು ರಾಜ್ಯ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ಇತ್ತೀಚೆಗೆ ನೀಡಲಾದ ಡಾಕ್ಟರೇಟ್‌ ವಿಚಾರವನ್ನೂ ಎತ್ತಿದ್ದಾರೆ.

ಇದನ್ನೂ ಓದಿRahul Gandhi: ಮೋದಿ ಉಪನಾಮ ಹೇಳಿಕೆ; ರಾಹುಲ್​ ಗಾಂಧಿ ಮೇಲ್ಮನವಿ ವಿಚಾರಣೆಗೆ ಸಮ್ಮತಿ, ಜಾಮೀನು ವಿಸ್ತರಣೆ

ಕೆಲವರು ಪದವಿಗಳನ್ನು ಪಡೆಯುತ್ತಾರೆ, ಇತರರು ಅದನ್ನು ಗಳಿಸುತ್ತಾರೆ. ಈಗ ಪಿಎಚ್‌ಡಿಗಳು ಸಹ ಮಾರಾಟಕ್ಕೆ ಬಂದಿವೆ ಎಂದು ತೋರುತ್ತದೆ.ಅದನ್ನು ಅಬ್ಬರಿಸುತ್ತಿರುವವರು ಮತ್ತು ಅದನ್ನು ಮರೆಮಾಡುವವರು ಇನ್ನೊಬ್ಬರು ಮರೆಮಾಚಲು ಏನಿದೆ, ಪದವಿಯನ್ನು ನೀಡುವ ಕಾಲೇಜು ತಮ್ಮ ಗೌರವಾನ್ವಿತ ಹಳೆಯ ವಿದ್ಯಾರ್ಥಿಗಳ ಬಗ್ಗೆ ಹೆಮ್ಮೆ ಪಡಬೇಕು ಆದರೆ ಬದಲಿಗೆ, ಪ್ರಶ್ನಿಸುವವರಿಗೆ (ಪ್ರಧಾನಿ ಪದವಿ) ಮತ್ತು ಅದನ್ನು ನೋಡಲು ಕೇಳುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಠಾಕ್ರೆ ಹೇಳಿದರು. ಬಿಜೆಪಿಯ ಎಷ್ಟು ನಾಯಕರು ಸಹ ಇಂಥಾ ಸಂಶಯಾಸ್ಪದ ಪದವಿಗಳನ್ನು ಪಡೆದುಕೊಂಡಿದ್ದಾರೆ ಎಂದು ಪ್ರಶ್ನಿಸಿದ ರಾವುತ್,ದೇಶಕ್ಕೆ ಗಂಭೀರ ಕಾಳಜಿಯ ವಿಷಯ ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!