AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಲಖಿಂಪುರ ಖೇರಿ ಪ್ರಕರಣ ಗಂಭೀರ ಸ್ವರೂಪದ್ದು ಎಂದ ಕೋರ್ಟ್​, ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ನಿರಾಕರಣೆ

ಲಖಿಂಪುರ ಖೇರಿಯಲ್ಲಿ ಅಕ್ಟೋಬರ್​ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಸಾವನ್ನಪ್ಪಿದ್ದರು. 

Lakhimpur Kheri Violence: ಲಖಿಂಪುರ ಖೇರಿ ಪ್ರಕರಣ ಗಂಭೀರ ಸ್ವರೂಪದ್ದು ಎಂದ ಕೋರ್ಟ್​, ಕೇಂದ್ರ ಸಚಿವರ ಪುತ್ರನಿಗೆ  ಜಾಮೀನು ನಿರಾಕರಣೆ
ಆಶೀಶ್​ ಮಿಶ್ರಾ
TV9 Web
| Edited By: |

Updated on: Nov 16, 2021 | 9:13 AM

Share

ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ(Lakhimpur Kheri )ಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ ಹಿಂಸಾಚಾರಕ್ಕೆ ಕಾರಣವಾದ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ (Ashish Mishra) ಅವರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಅಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಸಾವನ್ನಪ್ಪಿದ್ದರು.  ಪ್ರಕರಣದಲ್ಲಿ ಆಶಿಶ್​ ಮಿಶ್ರಾ, ಲವ್​ ಕುಶ್​ ರಾಣಾ ಮತ್ತು ಆಶಿಶ್​ ಪಾಂಡೆ ಪ್ರಮುಖ ಆರೋಪಿಗಳಾಗಿದ್ದು ಈ ಮೂವರನ್ನು ಬಂಧಿಸಲಾಗಿದೆ. ಇದೀಗ ಈ ಮೂವರ ಜಾಮೀನು ಅರ್ಜಿಯನ್ನೂ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.  

ಈ ಹಿಂಸಾಚಾರ ಪ್ರಕರಣ ತುಂಬ ಗಂಭೀರ ಸ್ವರೂಪದ್ದಾಗಿದೆ ಮತ್ತು ಕೇಸ್​ಗೆ ಸಂಬಂಧಪಟ್ಟ ತನಿಖೆ ನಡೆಯುತ್ತಲೇ ಇದೆ. ಘಟನೆಗೆ ಸಂಬಂಧಪಟ್ಟಂತೆ ಕೆಲವು ಸಾಕ್ಷಿಗಳ ಹೇಳಿಕೆಗಳನ್ನು ಎಸ್​ಐಟಿ ತಂಡ ನಮ್ಮೆದುರು ಸಲ್ಲಿಸಿದೆ. ಅದರಲ್ಲಿ ಬಹುತೇಕರು ಹೇಳಿದ್ದು ಆಶಿಶ್​ ಮಿಶ್ರಾ ಹೆಸರನ್ನು. ರೈತರಿಗೆ ಡಿಕ್ಕಿ ಹೊಡೆದ ಮಹೀಂದ್ರಾ ಥಾರ್​ ವಾಹನದಿಂದ ಆಶಿಶ್​ ಮಿಶ್ರಾ ಮತ್ತು ಇತರ ಆರೋಪಿಗಳು ಕೆಳಗೆ ಇಳಿದಿದ್ದನ್ನು ಮತ್ತು ಅಲ್ಲಿಂದ ಓಡಿಹೋಗುವಾಗ ಅವರು ರೈತರೆಡೆಗೆ ಗುಂಡು ಹಾರಿಸಿದ್ದನ್ನು ನೋಡಿದ್ದೇವೆ ಎಂದೇ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಅಕ್ಟೋಬರ್​ 3ರಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಅಜಯ್​ ಮಿಶ್ರಾ ಲಖಿಂಪುರ ಖೇರಿಗೆ ಭೇಟಿ ನೀಡುವವರಿದ್ದರು. ಆದರೆ ಅವರಿಬ್ಬರ ಭೇಟಿಯನ್ನು ವಿರೋಧಿಸಿ ರೈತರು ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ರಭಸದಿಂದ ಮುನ್ನುಗ್ಗಿದ ಎಸ್​ಯುವಿ ಮತ್ತು ಮಹೀಂದ್ರಾ ಥಾರ್​​ಗಳು ರೈತರೆಡೆಗೆ ನುಗ್ಗಿದ್ದವು. ಅದರಿಂದಾಗಿ ಒಬ್ಬ ರೈತ ಮೃತಪಟ್ಟಿದ್ದ. ಈ ವಾಹನಗಳು ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ  ಬೆಂಗಾವಲು ಪಡೆಯದ್ದು ಎಂದು ಹೇಳಲಾಗಿತ್ತು. ವಾಹನದಿಂದ ಆಶಿಶ್​ ಮಿಶ್ರಾ ಓಡಿಹೋಗಿದ್ದನ್ನು ನೋಡಿದ್ದೇವೆ ಎಂದೂ ಹಲವರು ಪ್ರತಿಪಾದಿಸಿದ್ದಾರೆ. ಅಪಘಾತ ನಡೆದ ತಕ್ಷಣ ಅಲ್ಲಿ ದೊಡ್ಡ ಹಿಂಸಾಚಾರವೇ ನಡೆದುಹೋಗಿತ್ತು. ಈ ದುರ್ಘಟನೆಯಲ್ಲಿ ಮತ್ತೆ 8 ಜನರು ಮೃತಪಟ್ಟಿದ್ದರು.

ಇದನ್ನೂ ಓದಿ: ‘ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ಚೆಕ್ ಮಾಡಬೇಕು, ಆತ ಸಂಸದನಾಗೋದಕ್ಕೆ ಲಾಯಕ್ಕಿಲ್ಲ: ಇಕ್ಬಾಲ್ ಅನ್ಸಾರಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ