AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಲಖಿಂಪುರ ಖೇರಿ ಪ್ರಕರಣ ಗಂಭೀರ ಸ್ವರೂಪದ್ದು ಎಂದ ಕೋರ್ಟ್​, ಕೇಂದ್ರ ಸಚಿವರ ಪುತ್ರನಿಗೆ ಜಾಮೀನು ನಿರಾಕರಣೆ

ಲಖಿಂಪುರ ಖೇರಿಯಲ್ಲಿ ಅಕ್ಟೋಬರ್​ 3ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಸಾವನ್ನಪ್ಪಿದ್ದರು. 

Lakhimpur Kheri Violence: ಲಖಿಂಪುರ ಖೇರಿ ಪ್ರಕರಣ ಗಂಭೀರ ಸ್ವರೂಪದ್ದು ಎಂದ ಕೋರ್ಟ್​, ಕೇಂದ್ರ ಸಚಿವರ ಪುತ್ರನಿಗೆ  ಜಾಮೀನು ನಿರಾಕರಣೆ
ಆಶೀಶ್​ ಮಿಶ್ರಾ
TV9 Web
| Edited By: |

Updated on: Nov 16, 2021 | 9:13 AM

Share

ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ(Lakhimpur Kheri )ಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿಸಿ ಹಿಂಸಾಚಾರಕ್ಕೆ ಕಾರಣವಾದ ಪ್ರಕರಣದಲ್ಲಿ ಬಂಧಿತರಾಗಿರುವ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ (Ashish Mishra) ಅವರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ. ಅಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು, ಮೂವರು ಬಿಜೆಪಿ ಕಾರ್ಯಕರ್ತರು ಮತ್ತು ಒಬ್ಬ ಪತ್ರಕರ್ತ ಸಾವನ್ನಪ್ಪಿದ್ದರು.  ಪ್ರಕರಣದಲ್ಲಿ ಆಶಿಶ್​ ಮಿಶ್ರಾ, ಲವ್​ ಕುಶ್​ ರಾಣಾ ಮತ್ತು ಆಶಿಶ್​ ಪಾಂಡೆ ಪ್ರಮುಖ ಆರೋಪಿಗಳಾಗಿದ್ದು ಈ ಮೂವರನ್ನು ಬಂಧಿಸಲಾಗಿದೆ. ಇದೀಗ ಈ ಮೂವರ ಜಾಮೀನು ಅರ್ಜಿಯನ್ನೂ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿದೆ.  

ಈ ಹಿಂಸಾಚಾರ ಪ್ರಕರಣ ತುಂಬ ಗಂಭೀರ ಸ್ವರೂಪದ್ದಾಗಿದೆ ಮತ್ತು ಕೇಸ್​ಗೆ ಸಂಬಂಧಪಟ್ಟ ತನಿಖೆ ನಡೆಯುತ್ತಲೇ ಇದೆ. ಘಟನೆಗೆ ಸಂಬಂಧಪಟ್ಟಂತೆ ಕೆಲವು ಸಾಕ್ಷಿಗಳ ಹೇಳಿಕೆಗಳನ್ನು ಎಸ್​ಐಟಿ ತಂಡ ನಮ್ಮೆದುರು ಸಲ್ಲಿಸಿದೆ. ಅದರಲ್ಲಿ ಬಹುತೇಕರು ಹೇಳಿದ್ದು ಆಶಿಶ್​ ಮಿಶ್ರಾ ಹೆಸರನ್ನು. ರೈತರಿಗೆ ಡಿಕ್ಕಿ ಹೊಡೆದ ಮಹೀಂದ್ರಾ ಥಾರ್​ ವಾಹನದಿಂದ ಆಶಿಶ್​ ಮಿಶ್ರಾ ಮತ್ತು ಇತರ ಆರೋಪಿಗಳು ಕೆಳಗೆ ಇಳಿದಿದ್ದನ್ನು ಮತ್ತು ಅಲ್ಲಿಂದ ಓಡಿಹೋಗುವಾಗ ಅವರು ರೈತರೆಡೆಗೆ ಗುಂಡು ಹಾರಿಸಿದ್ದನ್ನು ನೋಡಿದ್ದೇವೆ ಎಂದೇ ಪ್ರತ್ಯಕ್ಷದರ್ಶಿಗಳು ಹೇಳಿಕೆ ನೀಡಿದ್ದಾರೆ. ಹೀಗಾಗಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್ ಹೇಳಿದೆ.

ಅಕ್ಟೋಬರ್​ 3ರಂದು ಉತ್ತರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಅಜಯ್​ ಮಿಶ್ರಾ ಲಖಿಂಪುರ ಖೇರಿಗೆ ಭೇಟಿ ನೀಡುವವರಿದ್ದರು. ಆದರೆ ಅವರಿಬ್ಬರ ಭೇಟಿಯನ್ನು ವಿರೋಧಿಸಿ ರೈತರು ಮೌನವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಲ್ಲಿ ರಭಸದಿಂದ ಮುನ್ನುಗ್ಗಿದ ಎಸ್​ಯುವಿ ಮತ್ತು ಮಹೀಂದ್ರಾ ಥಾರ್​​ಗಳು ರೈತರೆಡೆಗೆ ನುಗ್ಗಿದ್ದವು. ಅದರಿಂದಾಗಿ ಒಬ್ಬ ರೈತ ಮೃತಪಟ್ಟಿದ್ದ. ಈ ವಾಹನಗಳು ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ  ಬೆಂಗಾವಲು ಪಡೆಯದ್ದು ಎಂದು ಹೇಳಲಾಗಿತ್ತು. ವಾಹನದಿಂದ ಆಶಿಶ್​ ಮಿಶ್ರಾ ಓಡಿಹೋಗಿದ್ದನ್ನು ನೋಡಿದ್ದೇವೆ ಎಂದೂ ಹಲವರು ಪ್ರತಿಪಾದಿಸಿದ್ದಾರೆ. ಅಪಘಾತ ನಡೆದ ತಕ್ಷಣ ಅಲ್ಲಿ ದೊಡ್ಡ ಹಿಂಸಾಚಾರವೇ ನಡೆದುಹೋಗಿತ್ತು. ಈ ದುರ್ಘಟನೆಯಲ್ಲಿ ಮತ್ತೆ 8 ಜನರು ಮೃತಪಟ್ಟಿದ್ದರು.

ಇದನ್ನೂ ಓದಿ: ‘ಪ್ರತಾಪ್ ಸಿಂಹ ಗಂಡೋ, ಹೆಣ್ಣೋ ಚೆಕ್ ಮಾಡಬೇಕು, ಆತ ಸಂಸದನಾಗೋದಕ್ಕೆ ಲಾಯಕ್ಕಿಲ್ಲ: ಇಕ್ಬಾಲ್ ಅನ್ಸಾರಿ

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ