AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ವಿರುದ್ಧ ಇಡಿ ವಿಚಾರಣೆ: ವಿದೇಶ ಪ್ರವಾಸಕ್ಕೆ ಅನುಮತಿ ಕೋರಿದ್ದ ಡಿಕೆಶಿ ಪರವಾಗಿ ದೆಹಲಿ ಹೈಕೋರ್ಟ್​ನಲ್ಲಿ ಕಪಿಲ್ ಸಿಬಲ್ ವಾದ

2ನೇ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧನದಿಂದ ರಕ್ಷಣೆ ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನ್ಯಾಯಾಲಯವು ಡಿ 26ಕ್ಕೆ ಮುಂದೂಡಿತು.

ಡಿಕೆ ಶಿವಕುಮಾರ್ ವಿರುದ್ಧ ಇಡಿ ವಿಚಾರಣೆ: ವಿದೇಶ ಪ್ರವಾಸಕ್ಕೆ ಅನುಮತಿ ಕೋರಿದ್ದ ಡಿಕೆಶಿ ಪರವಾಗಿ ದೆಹಲಿ ಹೈಕೋರ್ಟ್​ನಲ್ಲಿ ಕಪಿಲ್ ಸಿಬಲ್ ವಾದ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Nov 23, 2022 | 2:18 PM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ದೆಹಲಿ ಹೈಕೋರ್ಟ್​ಗೆ ಹಾಜರಾದರು. ಡಿಕೆಶಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದರು. ‘ಮೊದಲ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಹೀಗಾಗಿ ಎರಡನೇ ಪ್ರಕರಣ​​ ದಾಖಲಿಸಿ ವಿಚಾರಣೆ ನಡೆಸುವ ಅಗತ್ಯವಿಲ್ಲ. ಆದಾಯ ಮೀರಿ ಆಸ್ತಿ ಸಂಪಾದನೆ ಪ್ರಕರಣದ ತನಿಖೆಯನ್ನು ಸಿಬಿಐ ನಿರ್ವಹಿಸುತ್ತಿದೆ. ಈ ನಡುವೆ ಜಾರಿ ನಿರ್ದೇಶನಾಲಯವು (ಇಡಿ) 2ನೇ ಪ್ರಕರಣ​ ದಾಖಲಿಸಿ ವಿಚಾರಣೆಗೆ ಕರೆದಿದೆ. ಇಡಿ ದಾಖಲಿಸಿರುವ ಇಸಿಐಆರ್​ ರದ್ದು ಮಾಡಬೇಕು’ ಎಂದು ಅವರು ವಾದಿಸಿದರು.

ಪ್ರಕರಣದ ಬಗ್ಗೆ ದೆಹಲಿ ಹೈಕೋರ್ಟ್​ಗೆ ಮಾಹಿತಿ ನೀಡಿದ ಇಡಿ ಅಧಿಕಾರಿಗಳು, ‘ಸದ್ಯಕ್ಕೆ ಡಿ.ಕೆ.ಶಿವಕುಮಾರ್​ ವಿರುದ್ಧ ಕ್ರಮ ತೆಗೆದುಕೊಳ್ಳುವುದಿಲ್ಲ’ ಎಂದು ದೆಹಲಿ ಹೈಕೋರ್ಟ್​​ಗೆ ಇಡಿ ತನಿಖಾಧಿಕಾರಿಗಳು ಮಾಹಿತಿ ನೀಡಿದರು. ತಮ್ಮ ವಿರುದ್ಧ 2ನೇ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಬಂಧನದಿಂದ ರಕ್ಷಣೆ ಕೋರಿ ಡಿ.ಕೆ.ಶಿವಕುಮಾರ್ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯನ್ನು ನ್ಯಾಯಾಲಯವು ಡಿ 26ಕ್ಕೆ ಮುಂದೂಡಿತು.

ನ್ಯಾಯಾಲಯ ವಿಚಾರಣೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಡಿಕೆಶಿ, ‘ಇಡಿ ವಿಚಾರಣೆ ಕುರಿತು ನಾನು ಮಾತನಾಡುವುದಿಲ್ಲ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಖಲೆಗಳನ್ನು ಕೊಡುತ್ತಿಲ್ಲ. ದುಬೈಗೆ ತೆರಳಲು ಅನುಮತಿ ನೀಡುವಂತೆ ಕೋರ್ಟ್​ಗೆ ಮನವಿ ಸಲ್ಲಿಸುತ್ತಿದ್ದೇನೆ. ದುಬೈನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾನು ಭಾಗವಹಿಸಬೇಕಿದೆ’ ಎಂದು ಹೇಳಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ನಿಲ್ಲಬೇಕೆನ್ನುವ ಆಸೆ, ಆಸಕ್ತಿ ಇದ್ದವರೆಲ್ಲರೂ ಅರ್ಜಿ ಹಾಕಿಕೊಂಡಿದ್ದಾರೆ. ಅರ್ಜಿ ಹಾಕಿರುವ ಎಲ್ಲರಿಗೂ ಪಕ್ಷದ ಜವಾಬ್ದಾರಿ ಕೊಡುತ್ತೇವೆ. ಎಲ್ಲರೂ ಪಕ್ಷದ ಕೆಲಸ ಮಾಡಲಿ. ಅರ್ಜಿ ಹಾಕುವುದರಲ್ಲಿ ತಪ್ಪೇನಿದೆ’ ಎಂದು ಪ್ರಶ್ನಿಸಿದರು. ಕೋರ್ಟ್​ಗೆ ಅರ್ಜಿ ಹಾಕಿದ ಮೇಲೆ ನ್ಯಾಯಾಧೀಶರು ಹೇಳಿದರೂ ಪ್ರಸಾದವೇ. ಜಡ್ಜ್ ಹೇಳಿದ್ದನ್ನು ನಾವೆಲ್ಲರೂ ಕೇಳಬೇಕು ಎಂದರು.

ಡಿಕೆಶಿ ರಾಜೀನಾಮೆ ನೀಡಬೇಕೆನ್ನುವ ಈಶ್ವರಪ್ಪ ಹೇಳಿಕೆ ಕುರಿತು ಪ್ರಸ್ತಾಪಿಸಿದ ಅವರು, ಈಶ್ವರಪ್ಪ ಮೊದಲು ಅವರ ಸ್ಥಾನ ಉಳಿಸಿಕೊಳ್ಳಲಿ. ಮುಂದಿನ ಚುನಾವಣೆಗೆ ಅವರಿಗೆ ಟಿಕೆಟ್ ಸಿಗಲಿ ಎಂದು ವ್ಯಂಗ್ಯವಾಡಿದರು.

ಬೆಂಗಳೂರಿನ ವೋಟರ್​ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜೆ 4 ಗಂಟೆಗೆ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ. ನನ್ನೊಂದಿಗೆ ರಂದೀಪ್ ಸುರ್ಜೇವಾಲ, ಎಂ.ಬಿ.ಪಾಟೀಲ್​ ಸಹ ಚುನಾವಣಾ ಆಯೋಗಕ್ಕೆ ಬರಲಿದ್ದಾರೆ. ಬಹಳಷ್ಟು ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಅಲ್ಪಸಂಖ್ಯಾತರ ಹೆಸರುಗಳನ್ನು ತೆಗೆದು ಹಾಕಿದ್ದಾರೆ. ಚಿಲುಮೆ ಸಂಸ್ಥೆಯೊಂದೇ ಅಲ್ಲ, ಹಲವು ದೊಡ್ಡದೊಡ್ಡ ಕುಳಗಳಿವೆ. ಸಿದ್ದರಾಮಯ್ಯ ಸರ್ಕಾರ ಅನುಮತಿ ನೀಡಿದ್ದರೆ, ಅದರ ಬಗ್ಗೆಯೂ ತನಿಖೆ ಆಗಲಿ ಎಂದು ಹೇಳಿದರು.

ಇದನ್ನೂ ಓದಿ: ಅಭ್ಯರ್ಥಿಗಳನ್ನು ಘೋಷಿಸುವ ಹಕ್ಕು ಸಿದ್ದರಾಮಯ್ಯಗೆ ಇಲ್ಲ, ಮಲ್ಲಿಕಾರ್ಜುನ ಖರ್ಗೆ ಘೋಷಿಸಬಹುದು: ಡಿಕೆ ಶಿವಕುಮಾರ್

Published On - 2:14 pm, Wed, 23 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ