AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ದೆಹಲಿಯ ED ಕಚೇರಿಯಲ್ಲಿ ವಿಚಾರಣೆ ಎದುರಿಸಲು ಬಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ.

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ
TV9 Web
| Updated By: ಆಯೇಷಾ ಬಾನು|

Updated on:Sep 19, 2022 | 12:59 PM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಮನ್ಸ್​ ನೀಡಿದ್ದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್​ನಲ್ಲಿರುವ ED ಕಚೇರಿಗೆ ಡಿಕೆ ಶಿವಕುಮಾರ್ ಆಗಮಿಸಿದ್ದು ಅವರಿಗೆ ಆರೋಗ್ಯ ಸಮಸ್ಯೆ ಕಾಡಿದೆ.

ದೆಹಲಿಯ ED ಕಚೇರಿಯಲ್ಲಿ ವಿಚಾರಣೆ ಎದುರಿಸಲು ಬಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ. ಅಲ್ಲದೆ ವಿಚಾರಣೆ ವೇಳೆಯೂ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಜೊತೆ ಇದ್ದರು.

‘ಭಾರತ್ ಜೋಡೊ ಯಾತ್ರೆ’ ತಯಾರಿಯಲ್ಲಿರುವ ಡಿಕೆಶಿಗೆ ಇಡಿ ಶಾಕ್ ಕೊಟ್ಟಿದೆ. ವಿಧಾನಸಭೆ ಚುನಾವಣೆ ಸನಿಹವಾಗುತ್ತಿರುವ ಹೊತ್ತಲ್ಲೆ ಇಡಿ ಸಮನ್ಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಡಿಕೆ ಶಿವಕುಮಾರ್‌ಗೆ ಇಡಿ ಸಮನ್ಸ್ ಜಾರಿ ಮಾಡಲಾಗಿದ್ದು ಇಂದು ವಿಚಾರಣೆಗೆ ಡಿಕೆಶಿ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಈಗಾಗಲೇ ಒಂದು ಪ್ರಕರಣ ಇಡಿ ತನಿಖೆ ನಡೆಸಿದ್ದು ಅಧಿಕಾರಿಗಳು ಇಡಿ ವಿಶೇಷ ನ್ಯಾಯಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಜಾರ್ಜ್ ಶೀಟ್ ಬೆನ್ನಲೆ ಡಿಕೆಶಿ ರೆಗ್ಯೂಲರ್ ಬೆಲ್ ಪಡೆದುಕೊಂಡಿದ್ದಾರೆ. ಈ ನಡುವೆ ಮತ್ತೊಮ್ಮೆ ಅಧಿಕಾರಿಗಳಿಂದ ಬುಲಾವ್ ಬಂದಿರುವುದರಿಂದ ಯಾವ ಪ್ರಕರಣಕ್ಕೆ ಸಮನ್ಸ್ ನೀಡಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನ ಆಗ್ತಿದೆ, ಅದು ಸಾಧ್ಯವಾಗಲ್ಲ

ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ವಿಚಾರಣೆ ವಿಚಾರಕ್ಕೆ ಸಂಬಂಧಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ರು. ಕಳೆದ 2 ವರ್ಷದ ಹಿಂದೆ ಸಂಪೂರ್ಣ ಆಸ್ತಿ ವಿವರ ನೀಡಲಾಗಿದೆ. ಡಿಕೆಶಿ ಕುಟುಂಬದ ಎಲ್ಲ ಸದಸ್ಯರ ಮಾಹಿತಿ ನೀಡಲಾಗಿದೆ. ಇದು ರಾಜಕೀಯ ಪ್ರಚೋದನೆಯಿಂದ ದಾಖಲಿಸಿದ ದೂರು. ಮತ್ತೊಮ್ಮೆ ದಾಖಲೆ ಕೇಳಿದ್ದಾರೆ, ನೀಡಲಿದ್ದೇವೆ. ಕೇಂದ್ರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನ ಆಗ್ತಿದೆ, ಅದು ಸಾಧ್ಯವಾಗಲ್ಲ. ಅರೆಸ್ಟ್ ಮಾಡಲಿ, ಜೈಲಿಗೆ ಹಾಕಲಿ, ನಾವು ಹೆದರಲ್ಲ. ಈಗಾಗಲೇ ಸೋನಿಯಾ, ರಾಹುಲ್​​ಗೂ ಕಿರುಕುಳ ನೀಡಿದ್ದಾರೆ. ಇಡಿ ಬಳಸಿಕೊಂಡು 240 ಶಾಸಕರನ್ನು ಪಕ್ಷಾಂತರ ಮಾಡಿದ್ದಾರೆ. ಜನಾಭಿಪ್ರಾಯ ಮೇಲೆ ವಿಪಕ್ಷ ಮಣಿಸಲು ಬಿಜೆಪಿಗೆ ಸಾಧ್ಯವಾಗ್ತಿಲ್ಲ. ಹೀಗಾಗಿ ಇಡಿ, ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಡಿ, ಸಿಬಿಐ ಬಿಜೆಪಿಯ ಡ್ರಾಮಾ ಕಂಪನಿ ಎಂದು ಡಿಕೆ ಸುರೇಶ್​ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:43 pm, Mon, 19 September 22

ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
ಆರ್​ಟಿಒ ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಟ್ರಕ್ ಚಾಲಕ
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
Daily Devotional: ನೀರು ಹೇಗೆ ಉಪಯೋಗಿಸಿದ್ರೆ ದುಡ್ಡು ಹಾಗೆ ಖರ್ಚಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಮನ್ನಣೆ ಸಿಗುತ್ತದೆ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ
ಹಾವುಗಳಿಗೆ ಹೇಗೆ ಆಹಾರ ನೀಡುತ್ತಾರೆಂದು ನೋಡಿದ್ದೀರಾ? ಇಲ್ಲಿದೆ ವಿಡಿಯೋ