AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು

ದೆಹಲಿಯ ED ಕಚೇರಿಯಲ್ಲಿ ವಿಚಾರಣೆ ಎದುರಿಸಲು ಬಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ.

ಇಡಿ ವಿಚಾರಣೆ ವೇಳೆ ಡಿಕೆ ಶಿವಕುಮಾರ್​ಗೆ ಕೈಕೊಟ್ಟ ಆರೋಗ್ಯ, ವೈದ್ಯರ ನೆರವು
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ
TV9 Web
| Edited By: |

Updated on:Sep 19, 2022 | 12:59 PM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಮನ್ಸ್​ ನೀಡಿದ್ದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್(DK Shivakumar) ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್​ನಲ್ಲಿರುವ ED ಕಚೇರಿಗೆ ಡಿಕೆ ಶಿವಕುಮಾರ್ ಆಗಮಿಸಿದ್ದು ಅವರಿಗೆ ಆರೋಗ್ಯ ಸಮಸ್ಯೆ ಕಾಡಿದೆ.

ದೆಹಲಿಯ ED ಕಚೇರಿಯಲ್ಲಿ ವಿಚಾರಣೆ ಎದುರಿಸಲು ಬಂದಿದ್ದ ಡಿಕೆ ಶಿವಕುಮಾರ್ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ ಡಿಕೆ ಶಿವಕುಮಾರ್ ವಿಚಾರಣೆ ವೇಳೆ ವೈದ್ಯರ ನೆರವು ಕೋರಿದ್ದಾರೆ. ಅಲ್ಲದೆ ವಿಚಾರಣೆ ವೇಳೆಯೂ ಡಿಕೆಶಿ ಸಂಬಂಧಿ, ಕುಣಿಗಲ್ ಶಾಸಕ ಡಾ.ರಂಗನಾಥ್ ಜೊತೆ ಇದ್ದರು.

‘ಭಾರತ್ ಜೋಡೊ ಯಾತ್ರೆ’ ತಯಾರಿಯಲ್ಲಿರುವ ಡಿಕೆಶಿಗೆ ಇಡಿ ಶಾಕ್ ಕೊಟ್ಟಿದೆ. ವಿಧಾನಸಭೆ ಚುನಾವಣೆ ಸನಿಹವಾಗುತ್ತಿರುವ ಹೊತ್ತಲ್ಲೆ ಇಡಿ ಸಮನ್ಸ್ ನೀಡಿದೆ. ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಡಿಕೆ ಶಿವಕುಮಾರ್‌ಗೆ ಇಡಿ ಸಮನ್ಸ್ ಜಾರಿ ಮಾಡಲಾಗಿದ್ದು ಇಂದು ವಿಚಾರಣೆಗೆ ಡಿಕೆಶಿ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ.

ಈಗಾಗಲೇ ಒಂದು ಪ್ರಕರಣ ಇಡಿ ತನಿಖೆ ನಡೆಸಿದ್ದು ಅಧಿಕಾರಿಗಳು ಇಡಿ ವಿಶೇಷ ನ್ಯಾಯಲಯಕ್ಕೆ ಜಾರ್ಜ್ ಶೀಟ್ ಸಲ್ಲಿಸಿದ್ದಾರೆ. ಈ ಜಾರ್ಜ್ ಶೀಟ್ ಬೆನ್ನಲೆ ಡಿಕೆಶಿ ರೆಗ್ಯೂಲರ್ ಬೆಲ್ ಪಡೆದುಕೊಂಡಿದ್ದಾರೆ. ಈ ನಡುವೆ ಮತ್ತೊಮ್ಮೆ ಅಧಿಕಾರಿಗಳಿಂದ ಬುಲಾವ್ ಬಂದಿರುವುದರಿಂದ ಯಾವ ಪ್ರಕರಣಕ್ಕೆ ಸಮನ್ಸ್ ನೀಡಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನ ಆಗ್ತಿದೆ, ಅದು ಸಾಧ್ಯವಾಗಲ್ಲ

ಇಡಿ ಅಧಿಕಾರಿಗಳಿಂದ ಡಿಕೆ ಶಿವಕುಮಾರ್ ವಿಚಾರಣೆ ವಿಚಾರಕ್ಕೆ ಸಂಬಂಧಿಸಿ ನವದೆಹಲಿಯಲ್ಲಿ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಪ್ರತಿಕ್ರಿಯೆ ನೀಡಿದ್ರು. ಕಳೆದ 2 ವರ್ಷದ ಹಿಂದೆ ಸಂಪೂರ್ಣ ಆಸ್ತಿ ವಿವರ ನೀಡಲಾಗಿದೆ. ಡಿಕೆಶಿ ಕುಟುಂಬದ ಎಲ್ಲ ಸದಸ್ಯರ ಮಾಹಿತಿ ನೀಡಲಾಗಿದೆ. ಇದು ರಾಜಕೀಯ ಪ್ರಚೋದನೆಯಿಂದ ದಾಖಲಿಸಿದ ದೂರು. ಮತ್ತೊಮ್ಮೆ ದಾಖಲೆ ಕೇಳಿದ್ದಾರೆ, ನೀಡಲಿದ್ದೇವೆ. ಕೇಂದ್ರದಿಂದ ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆಯಾಗುತ್ತಿದೆ. ಕಾಂಗ್ರೆಸ್ ಕಟ್ಟಿಹಾಕಲು ಪ್ರಯತ್ನ ಆಗ್ತಿದೆ, ಅದು ಸಾಧ್ಯವಾಗಲ್ಲ. ಅರೆಸ್ಟ್ ಮಾಡಲಿ, ಜೈಲಿಗೆ ಹಾಕಲಿ, ನಾವು ಹೆದರಲ್ಲ. ಈಗಾಗಲೇ ಸೋನಿಯಾ, ರಾಹುಲ್​​ಗೂ ಕಿರುಕುಳ ನೀಡಿದ್ದಾರೆ. ಇಡಿ ಬಳಸಿಕೊಂಡು 240 ಶಾಸಕರನ್ನು ಪಕ್ಷಾಂತರ ಮಾಡಿದ್ದಾರೆ. ಜನಾಭಿಪ್ರಾಯ ಮೇಲೆ ವಿಪಕ್ಷ ಮಣಿಸಲು ಬಿಜೆಪಿಗೆ ಸಾಧ್ಯವಾಗ್ತಿಲ್ಲ. ಹೀಗಾಗಿ ಇಡಿ, ಸಿಬಿಐಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಇಡಿ, ಸಿಬಿಐ ಬಿಜೆಪಿಯ ಡ್ರಾಮಾ ಕಂಪನಿ ಎಂದು ಡಿಕೆ ಸುರೇಶ್​ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:43 pm, Mon, 19 September 22

ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್