AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DMK Files: ಅಣ್ಣಾಮಲೈ ವಿರುದ್ಧ ಡಿಎಂಕೆ ಕಿಡಿ; ಡಿಎಂಕೆ ಫೈಲ್ಸ್ ಕುರಿತ ದಾಖಲೆ ಬಿಡುಗಡೆ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ

ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ.

DMK Files: ಅಣ್ಣಾಮಲೈ ವಿರುದ್ಧ ಡಿಎಂಕೆ ಕಿಡಿ; ಡಿಎಂಕೆ ಫೈಲ್ಸ್ ಕುರಿತ ದಾಖಲೆ ಬಿಡುಗಡೆ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆಯ ಎಚ್ಚರಿಕೆ
ಅಣ್ಣಾಮಲೈ
Ganapathi Sharma
|

Updated on: Apr 14, 2023 | 3:15 PM

Share

ಚೆನ್ನೈ: ತಮಿಳುನಾಡಿನ ಆಡಳಿತಾರೂಢ ಡಿಎಂಕೆ (DMK) ಪಕ್ಷದ ವಿರುದ್ಧ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ (Annamalai) ಬಿಡುಗಡೆ ಮಾಡಿರುವ ‘ಡಿಎಂಕೆ ಫೈಲ್ಸ್’ ಈಗ ರಾಜ್ಯದಲ್ಲಿ ರಾಜಕೀಯ ಕಿಡಿ ಹೊತ್ತಿಸಿದೆ. ಅಣ್ಣಾಮಲೈ ಅವರು ನಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ದಾಖಲೆ ಬಿಡುಗಡೆ ಮಾಡದಿದ್ದರೆ ಎಲ್ಲ ಶಾಸಕರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಿದ್ದೇವೆ ಎಂದು ಡಿಎಂಕೆ ಎಚ್ಚರಿಕೆ ನೀಡಿದೆ. ‘ಡಿಎಂಕೆ ಫೈಲ್ಸ್’ ಬಿಡುಗಡೆ ಮಾಡಿದ ಕೆಲವೇ ಗಂಅಟೆಗಳಲ್ಲಿ ಆ ಕುರಿತು ಪ್ರತಿಕ್ರಿಯಿಸಿರುವ ಡಿಎಂಕೆ, ತಾಕತ್ತಿದ್ದರೆ ದಾಖಲೆಗಳನ್ನು ಬಿಡುಗಡೆ ಮಾಡಿ. ದಾಖಲೆ ಸಮೇತ ಆರೋಪ ಸಾಬೀತುಪಡಿಸಿ ಎಂದು ಸವಾಲೆಸೆದಿದೆ. ಡಿಎಂಕೆ ನಾಯಕರ ಮತ್ತು ಸಚಿವರ ವಿರುದ್ಧ ಮಾಡಿರುವ ಆರೋಪಕ್ಕೆ ಅಣ್ಣಾಮಲೈ 15 ದಿನಗಳ ಒಳಗೆ ಸಾಕ್ಷ್ಯ ಒದಗಿಸಬೇಕು. ಅದಕ್ಕೆ ಸಂಬಂಧಪಟ್ಟವರು ಕಾನೂನಾತ್ಮಕವಾಗಿ ಪ್ರತಿಕ್ರಿಯೆ ನೀಡುತ್ತಾರೆ. ಇಲ್ಲವಾದಲ್ಲಿ ಕ್ರಿಮಿನಲ್ ಪ್ರಕರಣ ಎದುರಿಸಲು ಅವರು (ಅಣ್ಣಾಮಲೈ) ಸಿದ್ಧರಾಗಿರಲಿ ಎಂದು ಡಿಎಂಕೆ ಸಂಘಟನಾ ಕಾರ್ಯದರ್ಶಿ ಆರ್​ಎಸ್​​ ಭಾರತಿ ತಿಳಿಸಿದ್ದಾರೆ.

ಅಣ್ಣಾಮಲೈ ಈ ಹಿಂದೆ ಘೋಷಿಸಿದ್ದಂತೆ ಡಿಎಂಕೆ ನಾಯಕರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಒಂದೇ ಒಂದು ದಾಖಲೆಯನ್ನೂ ಬಹಿರಂಗಪಡಿಸಿಲ್ಲ. ಅಣ್ಣಾಮಲೈ ಅವರ ಈ ಆರೋಪಗಳು (ಡಿಎಂಕೆ ಫೈಲ್ಸ್) ನಗು ಬರಿಸುವ ಸಂಗತಿಗಳಾಗಿವೆ. ಅಣ್ಣಾಮಲೈ ಅವರು ಈ ಹಿಂದೆ ಅಷ್ಟೊಂದು ದಿನ ಪೊಲೀಸ್ ಇಲಾಖೆಯಲ್ಲಿ ಹೇಗೆ ಇದ್ದರು ಎಂಬುದೇ ಆಶ್ಚರ್ಯ ಎಂದು ಅವರು ಟೀಕಿಸಿದ್ದಾರೆ.

ಅಣ್ಣಾಮಲೈ ಅವರಿಗೆ 15 ದಿನಗಳ ಕಾಲಾವಕಾಶ ನೀಡುತ್ತೇವೆ. ಅವರು ಮಾಡಿರು ಆರೋಪಗಳಿಗೆ ಸಾಕ್ಷ್ಯಗಳನ್ನು ಒದಗಿಸದಿದ್ದಲ್ಲಿ ತಮಿಳುನಾಡಿನಾದ್ಯಂತ ಕೋರ್ಟ್​​ಗಳನ್ನು ಅಲೆಯಬೇಕಾಗಲಿದೆ ಎಂದು ಭಾರತಿ ಹೇಳಿದ್ದಾರೆ.

ಏನಿದು ಡಿಎಂಕೆ ಫೈಲ್ಸ್? ಅದರಲ್ಲೇನಿತ್ತು?

ಶುಕ್ರವಾರ ಬೆಳಿಗ್ಗೆ ಅಣ್ಣಾಮಲೈ ಅವರು ಡಿಎಂಕೆಯ ಉನ್ನತ ನಾಯಕರ ಸಂಪತ್ತಿನ ವಿವರ ಒಳಗೊಂಡ ಡಿಎಂಕೆ ಫೈಲ್ಸ್ ಬಿಡುಗಡೆ ಮಾಡಿದ್ದರು. ಕೇವಲ 27 ಮಂದಿ ಡಿಎಂಕೆ ನಾಯಕರು 2.24 ಲಕ್ಷ ಕೋಟಿ ರೂ. ಸಂಪತ್ತು ಹೊಂದಿದ್ದಾರೆ. ಇದು ತಮಿಳುನಾಡಿನ ಜಿಡಿಪಿಯ ಶೇ 10ರಷ್ಟಾಗಿದೆ ಎಂದು ಡಿಎಂಕೆ ಫೈಲ್ಸ್​​ನಲ್ಲಿ ಅವರು ಪ್ರತಿಪಾದಿಸಿದ್ದರು. ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರಾಗಿರುವ ಎಂಕೆ ಸ್ಟಾಲಿನ್ ವಿರುದ್ಧ ಅಣ್ಣಾಮಲೈ 200 ಕೋಟಿ ರೂಪಾಯಿ ಭ್ರಷ್ಟಾಚಾರದ ಆರೋಪವನ್ನೂ ಮಾಡಿದ್ದರು. ಸಿಎಂಆರ್​ಎಲ್​​ಗೆ ಟೆಂಡರ್​ ನೀಡುವುದಕ್ಕಾಗಿ 2011ರಲ್ಲಿ ಶೆಲ್ ಕಂಪನಿಗಳ ಮೂಲಕ ಸ್ಟಾಲಿನ್ ಅವರು ಚುನಾವಣಾ ನಿಧಿ ಪಡೆದಿದ್ದರು ಎಂದೂ ಅಣ್ಣಾಮಲೈ ಆರೋಪ ಮಾಡಿದ್ದರು. ಈ ಬಗ್ಗೆ ಸಿಬಿಐಗೆ ದೂರು ನೀಡುವುದಾಗಿಯೂ ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ