AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗೋಮೂತ್ರ ರಾಜ್ಯಗಳಲ್ಲಿ’ ಮಾತ್ರ ಬಿಜೆಪಿ ಚುನಾವಣೆ ಗೆಲ್ಲುತ್ತದೆ: ವಿವಾದಕ್ಕೀಡಾದ ಡಿಎಂಕೆ ಸಂಸದರ ಹೇಳಿಕೆ

ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಮಾತನಾಡಿದ ಡಿಎಂಕೆ ಸಂಸದ ಬಿಜೆಪಿ ಶಕ್ತಿಯು ಮುಖ್ಯವಾಗಿ ಹಿಂದಿಯ ಹೃದಯಭಾಗದ ರಾಜ್ಯಗಳಲ್ಲಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಈ ದೇಶದ ಜನರು ಯೋಚಿಸಬೇಕು, ನಾವು ಸಾಮಾನ್ಯವಾಗಿ ಇವುಗಳನ್ನು 'ಗೋಮೂತ್ರ' ರಾಜ್ಯಗಳು ಎಂದು ಕರೆಯುತ್ತೇವೆ ಎಂದು ಹೇಳಿದ್ದು ವಿವಾದಕ್ಕೀಡಾಗಿದೆ.

‘ಗೋಮೂತ್ರ ರಾಜ್ಯಗಳಲ್ಲಿ’ ಮಾತ್ರ ಬಿಜೆಪಿ ಚುನಾವಣೆ ಗೆಲ್ಲುತ್ತದೆ: ವಿವಾದಕ್ಕೀಡಾದ ಡಿಎಂಕೆ ಸಂಸದರ ಹೇಳಿಕೆ
ಸೆಂಥಿಲ್ ಕುಮಾರ್
ರಶ್ಮಿ ಕಲ್ಲಕಟ್ಟ
|

Updated on: Dec 05, 2023 | 6:20 PM

Share

ದೆಹಲಿ ಡಿಸೆಂಬರ್ 05: ದ್ರಾವಿಡ ಮುನ್ನೇಟ್ರ ಕಳಗಂ (DMK) ಸಂಸದರೊಬ್ಬರು ಹಿಂದಿಯ ಹೃದಯಭಾಗದ ರಾಜ್ಯಗಳನ್ನು ‘ಗೋಮೂತ್ರ’ ರಾಜ್ಯಗಳು ಎಂದು ಕರೆದಿದ್ದು ವಿವಾದವಾಗಿದೆ. ಈ ಬಿಜೆಪಿಯ (BJP) ಶಕ್ತಿಯು ಮುಖ್ಯವಾಗಿ ಹಿಂದಿಯ ಹೃದಯಭಾಗದ ರಾಜ್ಯಗಳಲ್ಲಿ ಚುನಾವಣೆಗಳನ್ನು ಗೆಲ್ಲುತ್ತಿದೆ ಎಂದು ಈ ದೇಶದ ಜನರು ಯೋಚಿಸಬೇಕು, ನಾವು ಸಾಮಾನ್ಯವಾಗಿ ಇವುಗಳನ್ನು ‘ಗೋಮೂತ್ರ’ ರಾಜ್ಯಗಳು ಎಂದು ಕರೆಯುತ್ತೇವೆ ಎಂದು ಡಿಎನ್‌ವಿ ಸೆಂಥಿಲ್‌ಕುಮಾರ್ ಎಸ್ ಲೋಕಸಭೆಯಲ್ಲಿ ಹೇಳಿದ್ದಾರೆ.

ತಮಿಳುನಾಡಿನ ಧರ್ಮಪುರಿಯ ಲೋಕಸಭಾ ಸಂಸದರು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಮೂರು ಹಿಂದಿ ಹೃದಯ ಪ್ರದೇಶಗಳಾದ ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಬಿಜೆಪಿ ವಿಜಯವನ್ನು ಉಲ್ಲೇಖಿಸಿದ್ದಾರೆ.

ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, “”ಇದು ಸನಾತನಿ ಸಂಪ್ರದಾಯದ ಅಗೌರವ ಎಂದು ನಾನು ಭಾವಿಸುತ್ತೇನೆ. ಡಿಎಂಕೆ ಶೀಘ್ರದಲ್ಲೇ ‘ಗೋಮೂತ್ರ’ದ ಪ್ರಯೋಜನಗಳನ್ನು ತಿಳಿಯಲಿದೆ. ಇದನ್ನು ದೇಶದ ಜನರು ಸಹಿಸುವುದಿಲ್ಲ ಎಂದು ಅವರಿಗೆ ಚೆನ್ನಾಗಿ ತಿಳಿದಿದೆ.

ಭಾನುವಾರ ಮುಕ್ತಾಯವಾದ ವಿಧಾನಸಭಾ ಚುನಾವಣೆಯಲ್ಲಿ ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಬಿಜೆಪಿ ಅಧಿಕಾರದಿಂದ ಕಾಂಗ್ರೆಸ್ ಅನ್ನು ಕೆಳಗಿಳಿಸಿದರೆ, ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೇರಿತು.

ಇದನ್ನೂ ಓದಿ:ಪ್ರಮುಖ ನಾಯಕರಿಂದ ನೀರಸ ಪ್ರತಿಕ್ರಿಯೆ; ಡಿ.6ರಂದು ನಡೆಯಲಿದ್ದ ಇಂಡಿಯಾ ಒಕ್ಕೂಟ ಸಭೆ ಮುಂದೂಡಿಕೆ

ಆದಾಗ್ಯೂ ಇತ್ತೀಚಿನ ದಿನಗಳಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದವರಲ್ಲಿ ಡಿಎಂಕೆ ನಾಯಕ ಸೆಂಥಿಲ್‌ಕುಮಾರ್ ಒಬ್ಬರೇ ಅಲ್ಲ . ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸೆಪ್ಟೆಂಬರ್‌ನಲ್ಲಿ ಸನಾತನ ಧರ್ಮದ ಕುರಿತು ಮಾಡಿದ ಹೇಳಿಕೆಗೆ ಭಾರಿ ವಿವಾದವನ್ನು ಹುಟ್ಟುಹಾಕಿದ್ದರು.

ಕೆಲವು ವಿಷಯಗಳನ್ನು ವಿರೋಧಿಸಲು ಸಾಧ್ಯವಿಲ್ಲ, ಅದನ್ನು ರದ್ದುಗೊಳಿಸಬೇಕು. ನಾವು ಡೆಂಗ್ಯೂ, ಸೊಳ್ಳೆಗಳು, ಮಲೇರಿಯಾ ಅಥವಾ ಕೊರೊನಾವನ್ನು ವಿರೋಧಿಸಲು ಸಾಧ್ಯವಿಲ್ಲ. ಇದನ್ನು ನಿರ್ಮೂಲನೆ ಮಾಡಬೇಕು, ಸನಾತನವನ್ನು ಹಾಗೆ ನಿರ್ಮೂಲನೆ ಮಾಡಬೇಕು. ಸನಾತನವನ್ನು ವಿರೋಧಿಸುವ ಬದಲು ಅದನ್ನು ನಿರ್ಮೂಲನೆ ಮಾಡಬೇಕು” ಎಂದು ಉದಯನಿಧಿ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದು ವಿವಾದವಾಗಿತ್ತು.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!