AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಬಾರಿ ಗೆದ್ದ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆಗಿಳಿಯಲಿದ್ದಾರೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್​; ತಾತ ಕರುಣಾನಿಧಿ ಕ್ಷೇತ್ರದಿಂದ ಟಿಕೆಟ್​ ಬಯಸಿರುವ ಉದಯನಿಧಿ

Tamil Nadu Assembly Election 2021: ಕಳೆದ 2ದಿನಗಳ ಹಿಂದೆ ಸ್ಟಾಲಿನ್ ಪುತ್ರ, ಡಿಎಂಕೆ ಯುವ ಮೋರ್ಚಾ ಕಾರ್ಯದರ್ಶಿ ಉದಯನಿಧಿ, ಚೆಪಾಕ್​ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ ಬಯಸಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಚೆಪಾಕ್​ ಕ್ಷೇತ್ರ ಡಿಎಂಕೆಯ ಭದ್ರಕೋಟೆ.

2 ಬಾರಿ ಗೆದ್ದ ಕ್ಷೇತ್ರದಿಂದಲೇ ಮತ್ತೆ ಸ್ಪರ್ಧೆಗಿಳಿಯಲಿದ್ದಾರೆ ಡಿಎಂಕೆ ಅಧ್ಯಕ್ಷ ಸ್ಟಾಲಿನ್​; ತಾತ ಕರುಣಾನಿಧಿ ಕ್ಷೇತ್ರದಿಂದ ಟಿಕೆಟ್​ ಬಯಸಿರುವ ಉದಯನಿಧಿ
ಎಂ.ಕೆ.ಸ್ಟಾಲಿನ್​ ಹಾಗೂ ಉದಯನಿಧಿ
Lakshmi Hegde
|

Updated on: Feb 28, 2021 | 3:48 PM

Share

ಚೆನ್ನೈ: ಏಪ್ರಿಲ್​ 6ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಪ್ರತಿಪಕ್ಷ ಡಿಎಂಕೆ ( ದ್ರಾವಿಡ ಮುನ್ನೇತ್ರ ಕಳಗಂ) ಅಧ್ಯಕ್ಷ ಎಂ.ಕೆ.ಸ್ಟಾಲಿನ್​ ಕೊಲಾಥೂರ್​ ಕ್ಷೇತ್ರದಿಂದ ಸ್ಪರ್ಧಿಸಲು ಒಪ್ಪಿಕೊಂಡಿದ್ದಾರೆ. ಅರಿವಲಯಂನಲ್ಲಿರುವ ಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ, ಪಕ್ಷದ ಚುನಾವಣಾ ಸಮಿತಿಗೆ ಈ ಬಗ್ಗೆ ಅಧಿಕೃತವಾಗಿ ಲಿಖಿತ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಸತತವಾಗಿ ಎರಡು ಬಾರಿ ಇದೇ ಕ್ಷೇತ್ರದಿಂದ ಗೆದ್ದಿರುವ ಸ್ಟಾಲಿನ್​ ಈಗ ಮೂರನೇ ಬಾರಿಗೆ ಕೊಲಾಥೂರ್​ನಿಂದ ಸ್ಪರ್ಧಿಸುತ್ತಿದ್ದು, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

2011ಕ್ಕೂ ಮೊದಲು ಥೌಸಂಡ್​ ಲೈಟ್ಸ್​ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದ ಸ್ಟಾಲಿನ್​ 2011ರ ಚುನಾವಣೆಯಿಂದ ಕೊಲಾಥೂರ್​ ಕ್ಷೇತ್ರದಲ್ಲಿ ಸ್ಪರ್ಧೆಗೆ ಇಳಿದಿದ್ದಾರೆ. ಕಳೆದ 2ದಿನಗಳ ಹಿಂದೆ ಸ್ಟಾಲಿನ್ ಪುತ್ರ, ಡಿಎಂಕೆ ಯುವ ಮೋರ್ಚಾ ಕಾರ್ಯದರ್ಶಿ ಉದಯನಿಧಿ, ಚೆಪಾಕ್​ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್​ ಬಯಸಿ ಪಕ್ಷಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಚೆಪಾಕ್​ ಕ್ಷೇತ್ರ ಡಿಎಂಕೆಯ ಭದ್ರಕೋಟೆಯೆಂದೇ ಪ್ರಸಿದ್ಧಿ. ಯಾಕೆಂದರೆ ಅತ್ಯಂತ ಪ್ರಭಾವಿ ರಾಜಕಾರಣಿ, ಡಿಎಂಕೆ ಸಂಸ್ಥಾಪಕ, ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರು ಮೂರು ಬಾರಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.

ತಮಿಳುನಾಡಿನಲ್ಲಿ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ, ಡಿಎಂಕೆ ಜತೆ ಕಾಂಗ್ರೆಸ್​ ಕೈಜೋಡಿಸಿದೆ. ಏಪ್ರಿಲ್​ 6ರಂದು 234 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯಿದ್ದು, ಮೇ 2ರಂದು ಮತಎಣಿಕೆ ನಡೆಯಲಿದೆ.

ಇದನ್ನೂ ಓದಿ: Assembly Election 2021 Date LIVE: ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ, ಮೇ 2ಕ್ಕೆ ಮತ ಎಣಿಕೆ

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!
ಜಿದ್ದಿಗೆ ಬಿದ್ದ ಸಿದ್ದರಾಮಯ್ಯ-ಡಿಕೆಶಿ:ಅಪೆಕ್ಸ್ ಬ್ಯಾಂಕ್ ಚುನಾವಣೆ ರದ್ದು!