AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ

Tamilan Prasanna’s wife Suicide: ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದರು

ಡಿಎಂಕೆ ಪಕ್ಷದ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ಆತ್ಮಹತ್ಯೆ
ತಮಿಳನ್ ಪ್ರಸನ್ನ
TV9 Web
| Edited By: |

Updated on: Jun 08, 2021 | 6:15 PM

Share

ಚೆನ್ನೈ: ಡಿಎಂಕೆ ವಕ್ತಾರ ತಮಿಳನ್ ಪ್ರಸನ್ನ ಅವರ ಪತ್ನಿ ನಾಧಿಯಾ (35) ಸೋಮವಾರ ರಾತ್ರಿ ಚೆನ್ನೈನ ಕೊಡುಂಗೈಯೂರ್ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದಲೇ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ವಕೀಲರಾದ ಪ್ರಸನ್ನ ಅವರು ಡಿಎಂಕೆ ಸಾರ್ವಜನಿಕ ಸಂಪರ್ಕ ವಿಭಾಗದ ರಾಜ್ಯ ಜಂಟಿ ಕಾರ್ಯದರ್ಶಿಯಾಗಿದ್ದಾರೆ. ಮಂಗಳವಾರ ಆಕೆಯ ಹುಟ್ಟುಹಬ್ಬ ಆಗಿದ್ದು ತನ್ನ ಪತಿ ಅದ್ದೂರಿಯಾಗಿ  ಹುಟ್ಟುಹಬ್ಬವನ್ನು ಆಚರಿಸಬೇಕೆಂದು ನಾಧಿಯಾ ಬಯಸಿದ್ದಳು. ಆದರೆ ಕೊವಿಡ್ -19 ಪರಿಸ್ಥಿತಿಯಿಂದಾಗಿ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ಪ್ರಸನ್ನ ವಿರೋಧ ವ್ಯಕ್ತಪಡಿಸಿದ್ದು, ಮುಂದಿನ ವರ್ಷ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸೋಣ ಎಂದಿದ್ದರು . ಈ ವಿಷಯದ ಬಗ್ಗೆ ಸೋಮವಾರ ರಾತ್ರಿ ದಂಪತಿಗಳ ನಡುವೆ ಜಗಳವಾಯಿತು.

ನಾಧಿಯಾ ತನ್ನ ಮಲಗುವ ಕೋಣೆಗೆ ಹೋಗಿ ಅದನ್ನು ಒಳಗಿನಿಂದ ಲಾಕ್ ಮಾಡಿದಳು . ಬೆಳಿಗ್ಗೆ ತನಕ ಅವಳ ಮಲಗುವ ಕೋಣೆ ಲಾಕ್ ಆಗಿದ್ದರಿಂದ ಪ್ರಸನ್ನ ಬಾಗಿಲು ಬಡಿದಿದ್ದಾರೆ.ಆದರೂ ಗಿಲು ತೆರೆದಾಗ ಅವಳು ನೇಣು ಬಿಗಿದ ಸ್ಥಿತಿಯಲ್ಲಿದ್ದಳು ಎಂದು ಎಂದು ಪ್ರಸನ್ನ ಅವರ ಹೇಳಿಕೆ ಉಲ್ಲೇಖಿಸಿ ಪೊಲೀಸರು ಹೇಳಿದ್ದಾರೆ . ಪ್ರಸನ್ನ ತನ್ನ ಹೆಂಡತಿಯನ್ನು ಸರ್ಕಾರಿ ಸ್ಟಾನ್ಲಿ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿ ವೈದ್ಯರು ತಪಾಸಣೆ ನಡೆಸಿ ಅವರ ಸಾವನ್ನು ದೃಢಪಡಿಸಿದರು. ನಾಧಿಯಾ ಅವರ ತಂದೆ ರವಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಕೊಡುಂಗೈಯೂರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಸನ್ನ ಅವರನ್ನು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಕೊವಿಡ್ ನಿರ್ವಹಣೆಯಲ್ಲಿ ನ್ಯಾಯಾಲಯದ ಪಾತ್ರಕ್ಕೆ ಶಾಲಾ ಬಾಲಕಿಯ ಮೆಚ್ಚುಗೆ ಪತ್ರ; ಮುಖ್ಯ ನ್ಯಾಯಮೂರ್ತಿಯ ಮನಮುಟ್ಟುವ ಉತ್ತರ

ಇದನ್ನೂ ಓದಿ:  ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳ ಶಿಕ್ಷಣಕ್ಕೆ ತೊಡಕುಂಟಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಸುಪ್ರೀಂಕೋರ್ಟ್ ನಿರ್ದೇಶನ

(DMK spokesman Tamilan Prasanna’s wife Nadhiya ended her life by hanging in Chennai)

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು