ಮೆಟ್ರೋದಲ್ಲಿ ಬೀಡಿ ಸೇದಿದ ವ್ಯಕ್ತಿಯ ವಿಡಿಯೋ ವೈರಲ್

ದೆಹಲಿ ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ದೆಹಲಿ ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ, ತಿಂಡಿಗಳನ್ನು ಕೂಡ ಅಲ್ಲಿ ತಿನ್ನುವಂತಿಲ್ಲ, ಸ್ವಚ್ಛತೆ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಮಾಡಲಾಗಿದೆ. ಒಂದೊಮ್ಮೆ ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದರೆ ಬೀಡಿ, ಸಿಗರೇಟ್​ ಜಪ್ತಿ ಮಾಡುವುದಲ್ಲದೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

ಮೆಟ್ರೋದಲ್ಲಿ ಬೀಡಿ ಸೇದಿದ ವ್ಯಕ್ತಿಯ ವಿಡಿಯೋ ವೈರಲ್
ಧೂಮಪಾನ ಆರೋಗ್ಯಕ್ಕೆ ಹಾನಿಕರImage Credit source: India Today
Follow us
|

Updated on:Sep 26, 2023 | 8:23 AM

ದೆಹಲಿ ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ದೆಹಲಿ ಸೇರಿದಂತೆ ಯಾವುದೇ ಮೆಟ್ರೋದಲ್ಲಿ ಧೂಮಪಾನಕ್ಕೆ ಅವಕಾಶವಿಲ್ಲ, ತಿಂಡಿಗಳನ್ನು ಕೂಡ ಅಲ್ಲಿ ತಿನ್ನುವಂತಿಲ್ಲ, ಸ್ವಚ್ಛತೆ ಹಿತದೃಷ್ಟಿಯಿಂದ ಕೆಲವು ನಿಯಮಗಳನ್ನು ಮಾಡಲಾಗಿದೆ. ಒಂದೊಮ್ಮೆ ಮೆಟ್ರೋ ನಿಲ್ದಾಣದಲ್ಲಿ ತಪಾಸಣೆ ಮಾಡುವಾಗ ಸಿಕ್ಕಿಬಿದ್ದರೆ ಬೀಡಿ, ಸಿಗರೇಟ್​ ಜಪ್ತಿ ಮಾಡುವುದಲ್ಲದೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ವೃದ್ಧರೊಬ್ಬರು ಮೆಟ್ರೋದೊಳಗೆ ಕೂತು ಬೀಡಿ ಸೇದುತ್ತಿದ್ದಾರೆ. ಮೆಟ್ರೋಗಳಲ್ಲಿ ಬಲೂನ್​ಗಳು, ಚಾಕು ಚೂರಿ, ಕತ್ತರಿಯಂತಹ ಮೊನಚಾದ ವಸ್ತುಗಳನ್ನು ಕೂಡ ಕೊಂಡೊಯ್ಯುವಂತಿಲ್ಲ. ಬೆಂಕಿಕಡ್ಡಿಯನ್ನು ಗೀರಿ ಬೀಡಿಗೆ ಬೆಂಕಿ ಹೊತ್ತಿಸಿಕೊಳ್ಳುವಾಗ ಪಕ್ಕದಲ್ಲಿ ಕುಳಿತಿದ್ದವರು ಎದ್ದು ಹೋಗಿದ್ದಾರೆ, ಅಲ್ಲಿಯೇ ನಿಂತವರು ಬೀಡಿ ಸೇದದಂತೆ ತಡೆದಿದ್ದಾರೆ.

ಸಾರ್ವಜನಿಕ ಸಾರಿಗೆಯಾಗಿರಲಿ, ಸಾರ್ವಜನಿಕ ಸ್ಥಳಗಳಿರಲಿ ಧೂಮಪಾನ ಮಾಡುವಂತಿಲ್ಲ, ಆದರೆ ಈ ವ್ಯಕ್ತಿ ರಾಜಾರೋಷವಾಗಿ ನೂರಾರು ಮಂದಿ ಇರುವ ಮೆಟ್ರೋದಲ್ಲಿ ಧೂಮಪಾನ ಮಾಡಿದ್ದು, ಪ್ರಯಾಣಿಕರು ಹಾಗೂ ನೆಟ್ಟಿಗರನ್ನು ಕೆರಳಿಸಿತ್ತು. ಧೂಮಪಾನ ಮಾಡಲು ಆರಂಭಿಸುತ್ತಿದ್ದಂತೆಯೇ ಅಲ್ಲಿದ್ದವರು ತಡೆದಿದ್ದಾರೆ, ಆಗ ಆ ವೃದ್ಧ ನಿಮ್ಮಂತೆ ನಾನೂ ಕೂಡ ಟಿಕೆಟ್ ತೆಗೆದುಕೊಂಡಿದ್ದೇನೆ ಎಂದು ದರ್ಪದಿಂದ ಮಾತನಾಡಿದ್ದಾರೆ.

ಮತ್ತಷ್ಟು ಓದಿ: Viral Video: ಗಣೇಶೋತ್ಸವ ಮೆರವಣಿಗೆಯಲ್ಲಿ ಬುರ್ಖಾ ಧರಿಸಿ ನೃತ್ಯ; ತಮಿಳುನಾಡಿನ ವ್ಯಕ್ತಿಯ ಬಂಧನ

ಇದೀಗ ವಿಡಿಯೋ ವೈರಲ್ ಆಗಿದ್ದು, ಆ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಹಲವು ಮಂದಿ ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್​ಗೆ ಕೇಳಿಕೊಂಡಿದೆ. ಮೆಟ್ರೋದೊಳಗೆ ಯಾರೋ ಸ್ನಾನ ಮಾಡಿದ್ದು, ಬ್ರಷ್ ಮಾಡಿದ್ದು, ನೃತ್ಯ ಮಾಡಿದ್ದು ಸೇರಿದಂತೆ ಹಲವು ಘಟನೆಗಳು ನಿತ್ಯ ಮುನ್ನೆಲೆಗೆ ಬರುತ್ತಲೇ ಇರುತ್ತದೆ.

ಡಿಎಂಆರ್​ಸಿ ಹೇಳಿದ್ದೇನು?

ನಾವು ಯಾವುದೇ ಆಕ್ಷೇಪಾರ್ಹ ನಡವಳಿಕೆಗಳನ್ನು ಪತ್ತೆಹಚ್ಚಲು ಫ್ಲೈಯಿಂಗ್ ಸ್ಕ್ವಾಡ್​ಗಳನ್ನು ನೇಮಿಸಿದ್ದೇವೆ, ಇಂತಹ ಘಟನೆಗಳು ನಡೆದಾಗ ತಕ್ಷಣವೇ ನಮ್ಮ ಗಮನಕ್ಕೆ ತನ್ನಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇವೆ ಇದರಿಂದ ತುರ್ತು ಕ್ರಮಗಳನ್ನು ತೆಗೆದುಕೊಳ್ಳಬಹುದು. ದೆಹಲಿ ಮೆಟ್ರೋದಲ್ಲಿ ಧೂಮಪಾನ ಮಾಡುವಂತಿಲ್ಲ, ಆ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೆಟ್ರೋ ನಿಗಮ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:23 am, Tue, 26 September 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ