AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 4:23 PM

Share

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?