AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 4:23 PM

Share

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಓಡ್ತಿರೋದು ನೋಡಿ... ಸುಂದರ್-ಮಿಲ್ಲರ್ ನಡುವೆ ಮಾತಿನ ಚಕಮಕಿ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
ಶಿವಾಜಿ ಜಯಂತಿ ವೇಳೆ ಕಲ್ಲು ತೂರಾಟ ಪ್ರಕರಣ: ಫೆ. 26 ರಂದು ಬೃಹತ್ ಹೋರಾಟ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಕೇಸ್! ಏನಿದು ಹೊಸ ಕೇಸ್?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ