Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​
ಸಾಂಕೇತಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jan 06, 2021 | 4:23 PM

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ