AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Jan 06, 2021 | 4:23 PM

Share

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ