AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ಅಂತಿಮ ತೀರ್ಪು ಬರುವವರೆಗೆ ವೇದ ನಿಲಯವನ್ನು ಸ್ಮಾರಕವನ್ನಾಗಿ ಬದಲಾಯಿಸಬೇಡಿ: ಮದ್ರಾಸ್​ ಹೈಕೋರ್ಟ್​
ಸಾಂಕೇತಿಕ ಚಿತ್ರ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Jan 06, 2021 | 4:23 PM

Share

ಚೆನ್ನೈ: ದಿವಂಗತ ಜಯಲಲಿತಾ ಅವರ ನಿವಾಸ ವೇದ ನಿಲಯಂ ಅನ್ನು ಸ್ಮಾರಕವನ್ನಾಗಿ ಬದಲಾಯಿಸುವ ಬಗ್ಗೆ ಅಂತಿಮ ತೀರ್ಪು ಬರುವವರೆಗೂ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಮದ್ರಾಸ್​ ಹೈಕೋರ್ಟ್​ ನ್ಯಾಯಮೂರ್ತಿ ಎನ್​. ಸೇಷಸಾಯಿ ತಮಿಳುನಾಡು ಸರ್ಕಾರಕ್ಕೆ ನಿರ್ದೇಶಿಸಿದ್ದಾರೆ.

ಜಯಲಲಿತಾ ಮೃತಪಟ್ಟ ನಂತರ ಅವರ ಮನೆ ವೇದ ನಿಯಯಂ ಅನ್ನು ಸ್ಮಾರಕವನ್ನಾಗಿ ಮಾಡಲು ತಮಿಳುನಾಡು ಸರ್ಕಾರ ಮುಂದಾಗಿತ್ತು. ಇದಕ್ಕಾಗಿ ಸರ್ಕಾರ 67.9 ಕೋಟಿ ರೂಪಾಯಿ ವೆಚ್ಚ ಮಾಡಲು ಮುಂದಾಗಿತ್ತು. ಆದರೆ, ಸರ್ಕಾರದ ಈ ನಿರ್ಧಾರವನ್ನು ಜಯಲಲಿತಾ ಸೋದರಳಿಯ ದೀಪಕ್​ ಹಾಗೂ ಸೋದರ ಸೊಸೆ ಜೆ. ದೀಪಾ ವಿರೋಧಿಸಿದ್ದರು. ಅಲ್ಲದೆ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಇವರು ಮದ್ರಾಸ್​ ಹೈಕೋರ್ಟ್​ ಮೆಟ್ಟಿಲೇರಿತ್ತು.

ಸದ್ಯ, ಈ ಅರ್ಜಿ ವಿಚಾರಣೆ ಹೈಕೋರ್ಟ್​ನಲ್ಲಿದೆ. ಆದರೆ, ಸಂಕ್ರಾಂತಿ ಹಬ್ಬದ ಮರುದಿನವೇ ಈ ಸ್ಮಾರಕ ಉದ್ಘಾಟನೆಗೆ ಸರ್ಕಾರ ನಿರ್ಧರಿಸಿದೆ ಎನ್ನುವ ಸುದ್ದಿ ಬಿತ್ತರವಾಗಿತ್ತು. ಈ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​, ಜನವರಿ 27ರಂದು ನಾವು ಕೊನೆಯ ವಿಚಾರಣೆ ನಡೆಸುತ್ತೇವೆ. ಹೀಗಾಗಿ, ಅಲ್ಲಿಯವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಬಾರದು ಎಂದಿದೆ.

ಈ ವರ್ಷ ತಮಿಳುನಾಡಿನಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಮನೆಯನ್ನು ಸ್ಮಾರಕ ಮಾಡಲು ಆತುರ ತೋರುತ್ತಿದೆ ಎನ್ನಲಾಗುತ್ತಿದೆ.

ತಲೈವಿ ಸಿನಿಮಾ: ಜಯಲಲಿತಾ ಆಪ್ತೆ ಶಶಿಕಲಾ ಗೆಟಪ್​ನಲ್ಲಿ ನಟಿ ಪೂರ್ಣ ದರ್ಶನ!

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್