AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರೊಂದಿಗೆ ವಿರೋಧ ಬೇಡ, ಅವರು ಹಿಂಸಾಚಾರಕ್ಕೂ ಹಿಂದೇಟು ಹಾಕುವುದಿಲ್ಲ: ಕೇಂದ್ರ ಸರ್ಕಾರಕ್ಕೆ ಸತ್ಯಪಾಲ್​ ಮಲಿಕ್​ ಎಚ್ಚರಿಕೆ

ಬಿಹಾರ, ಗೋವಾ ಮತ್ತು ಜಮ್ಮು-ಕಾಶ್ಮೀರಗಳ ರಾಜ್ಯಪಾಲರೂ ಆಗಿದ್ದ ಸತ್ಯಪಾಲ ಮಲಿಕ್ ಸದ್ಯ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ಹಿಂದೆ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ಕಟುವಾಗಿ ವಿರೋಧಿಸಿದವರಲ್ಲಿ ಇವರೂ ಒಬ್ಬರು.

ರೈತರೊಂದಿಗೆ ವಿರೋಧ ಬೇಡ, ಅವರು ಹಿಂಸಾಚಾರಕ್ಕೂ ಹಿಂದೇಟು ಹಾಕುವುದಿಲ್ಲ: ಕೇಂದ್ರ ಸರ್ಕಾರಕ್ಕೆ ಸತ್ಯಪಾಲ್​ ಮಲಿಕ್​ ಎಚ್ಚರಿಕೆ
ಸತ್ಯಪಾಲ್​ ಮಲಿಕ್​
TV9 Web
| Updated By: Lakshmi Hegde|

Updated on:Mar 12, 2022 | 9:35 AM

Share

ಕೇಂದ್ರದ ವಿರುದ್ಧ ಆಗಾಗ ಟೀಕೆ ಮಾಡುವ, ಅದರಲ್ಲೂ ಕೃಷಿ ಕಾಯ್ದೆ ಜಾರಿಗೆ ತಂದಿದ್ದನ್ನು ವ್ಯಾಪಕವಾಗಿ ವಿರೋಧಿಸುತ್ತಲೇ ಬಂದಿದ್ದ ಮೇಘಾಲಯ ರಾಜ್ಯಪಾಲ ಸತ್ಯಪಾಲ ಮಲಿಕ್​ (Satya Pal Malik) ಅವರು ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೊಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಯಾವ ಕಾರಣಕ್ಕೂ ರೈತರ ವಿರೋಧ ಕಟ್ಟಿಕೊಳ್ಳಬೇಡಿ, ಅವರು ತಮಗೆ ಬೇಕಾಗಿದ್ದನ್ನು ಪಡೆಯಲು ಯಾವಾಗ ಬೇಕಾದರೂ ಹಿಂಸಾಚಾರ ಮಾರ್ಗ ಅನುಸರಿಸಬಹುದು ಎಂದು ಹೇಳಿದ್ದಾರೆ.

ರಾಜಸ್ಥಾನದ ಜೋಧ್​ಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ರೈತರೊಂದಿಗೆ ಸರಿಯಾಗಿರಬೇಕು. ಅವರ ವಿರೋಧ ಕಟ್ಟಿಕೊಳ್ಳಬಾರದು ಎಂದು ನಾನು ದೆಹಲಿ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡುತ್ತೇನೆ. ಏಕೆಂದರೆ ರೈತರು ತುಂಬ ಅಪಾಯಕಾರಿ ಜನರು. ಅವರಿಗೇನು ಬೇಕೋ ಅದನ್ನು ಪಡೆದೇ ತೀರುತ್ತಾರೆ. ಮಾತುಕತೆಯ ಮೂಲಕವಾದರೂ ಸರಿ, ಹೋರಾಟದ ಮುಖಾಂತರವಾದರೂ ಸರಿ ಅವರಿಗೇನು ಬೇಕೋ ಅದನ್ನು ಪಡೆಯುತ್ತಾರೆ. ಅಗತ್ಯ ಕಂಡರೆ ರೈತರು ಹಿಂಸಾಚಾರ ನಡೆಸಲೂ ಹಿಂದೇಟು ಹಾಕುವವರಲ್ಲ  ಎಂದು ಹೇಳಿದ್ದಾರೆ.

ಬಿಹಾರ, ಗೋವಾ ಮತ್ತು ಜಮ್ಮು-ಕಾಶ್ಮೀರಗಳ ರಾಜ್ಯಪಾಲರೂ ಆಗಿದ್ದ ಸತ್ಯಪಾಲ ಮಲಿಕ್ ಸದ್ಯ ಮೇಘಾಲಯದ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಪ್ರಧಾನಿ ಮೋದಿ ಸರ್ಕಾರ ಹಿಂದೆ ಜಾರಿಗೆ ತಂದಿದ್ದ ಕೃಷಿ ಕಾಯ್ದೆಗಳನ್ನು ಕಟುವಾಗಿ ವಿರೋಧಿಸಿದವರಲ್ಲಿ ಇವರೂ ಒಬ್ಬರು. ಆ ಕೃಷಿ ಕಾಯ್ದೆಗಳನ್ನು ಕೇಂದ್ರ ವಾಪಸ್​ ಕೂಡ ಪಡೆದಿದೆ. ಆದರೆ  ಅದನ್ನು ವಿರೋಧಿಸುತ್ತಲೇ ಬಂದಿರುವ ಸತ್ಯಪಾಲ ಮಲಿಕ್​ ಈ ಕಾರ್ಯಕ್ರಮದಲ್ಲೂ ಹೀಗೇ ಹೇಳಿದ್ದಾರೆ. ಅದರಲ್ಲೂ ಪಂಜಾಬ್​​ನಲ್ಲಿ ಬಿಜೆಪಿ ನೆಲಕಚ್ಚಿದ ಬೆನ್ನಲ್ಲೇ ಸತ್ಯಪಾಲ್​ ಮಲಿಕ್ ಮತ್ತೆ ಕೃಷಿ ಕಾಯ್ದೆಗಳನ್ನು ಉಲ್ಲೇಖಿಸಿದ್ದಾರೆ. ಅಷ್ಟೇ ಅಲ್ಲ, ನಾನು ಪದೇಪದೆ ಈ ವಿಷಯ ಮಾತನಾಡುವುದರಿಂದ ನನ್ನ ಹುದ್ದೆಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಆದರೆ ನನಗೆ ಯಾವುದೇ ಭಯವೂ ಇಲ್ಲ ಎಂದು ಹೇಳಿಕೊಂಡಿದ್ದಾರೆ.

ಮುಂದುವರಿದು ಮಾತನಾಡಿದ ಸತ್ಯಪಾಲ್ ಮಲಿಕ್​, ಸಾಗುವಳಿದಾರರಿಗೆ ಮೂಗುದಾರ ಹಾಕಲು ಯಾರಿಂದಲೂ ಸಾಧ್ಯವಿಲ್ಲ. ತಮ್ಮ ಬೇಡಿಕೆಗಳನ್ನು ಹೇಗೆ ಈಡೇರಿಸಿಕೊಳ್ಳಬೇಕು ಎಂಬುದು ಅವರಿಗೆ ಗೊತ್ತು. ಸರ್ಕಾರಗಳು ಅವರಿಗೆ ಯಾವುದೇ ಭರವಸೆ ನೀಡಿದ್ದರೂ, ಅದನ್ನು ಆದಷ್ಟು ಬೇಗ ನೆರವೇರಿಸಬೇಕು ಎಂದೂ ಹೇಳಿದ್ದಾರೆ. ನನಗೆ ಕೇಂದ್ರ ಸರ್ಕಾರದ ಜತೆ ಶತ್ರುತ್ವ ಇಲ್ಲ ಎಂದೂ ಸ್ಪಷ್ಟಪಡಿಸಿದ್ದಾರೆ. ಜನವರಿಯಲ್ಲಿ ಕೂಡ ಸತ್ಯಪಾಲ್ ಮಲಿಕ್​ ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ರೈತರ ವಿಚಾರದಲ್ಲಿ ತುಂಬ ಅಹಂಕಾರದಿಂದ ವರ್ತಿಸುತ್ತಿದ್ದಾರೆ. ಪ್ರಧಾನಿ ಮೋದಿಯವರ ವರ್ತನೆಗೆ ಅಮಿತ್​ ಶಾ ಕಾರಣ ಎಂದು ಪ್ರತಿಪಾದಿಸಿದ್ದರು.

ಇದನ್ನೂ ಓದಿ: ಪ್ರೀತಿ ಜಿಂಟಾ ಮುಂದೆ ಸೈಫ್​ ಅಲಿ ಖಾನ್​ ಸ್ಟಂಟ್​ ಎಡವಟ್ಟು​; ಸತ್ತು ಹೋದ್ರು ಅಂತ ಭಾವಿಸಿದ್ದ ನಟಿ

Published On - 8:32 am, Sat, 12 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?