Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 09, 2020 | 4:45 PM

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಅಂಟಿಸುವ ಕ್ರಮವನ್ನು ತಕ್ಷಣ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ. ಇದಕ್ಕೆ, ಸುಪ್ರೀಂಕೋರ್ಟ್​ ಈಗ ಆಕ್ಷೇಪ ವ್ಯಕ್ತಪಡಿಸಿದ್ದು, ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ ಎಂದು ಕಳವಳ ಹೊರಹಾಕಿದೆ.

ಕೊರೊನಾ ಸೋಂಕಿತರ ಮನೆ ಎದುರು ಗೇಟ್​ ನಿಲ್ಲಿಸಿ, ಅದಕ್ಕೆ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಈ ಮೂಲಕ ಮನೆಯಲ್ಲಿ ಕೊರೊನಾ ಸೋಂಕಿತರಿದ್ದಾರೆ ಎನ್ನುವ ಎಚ್ಚರಿಕೆಯನ್ನು ಅಕ್ಕ-ಪಕ್ಕದ ಮನೆಯವರಿಗೆ ನೀಡುವುದು ಇದರ ಉದ್ದೇಶವಾಗಿತ್ತು. ಈ ಕ್ರಮದ ಉದ್ದೇಶ ಉತ್ತಮವಾಗಿದ್ದರೂ, ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬೇರೆ ಆಗಿದೆ ಎನ್ನುವ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದರು. ಈಗ ಸುಪ್ರೀಂಕೋರ್ಟ್​ ಕೂಡ ಇದೇ ರೀತಿಯ ಅಭಿಪ್ರಾಯ ಹೊರ ಹಾಕಿದೆ.

ಸುಪ್ರೀಂ ಹೇಳಿದ್ದೇನು: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​, ಕೊರೊನಾ ಸೊಂಕಿತರ ಮನೆಗೆ ಪೋಸ್ಟರ್ ಅಂಟಿಸುವ ಅವಶ್ಯಕತೆ ಇಲ್ಲ. ಪೋಸ್ಟರ್ ಅಂಟಿಸುವುದು ಸರಿಯಾದ ಕ್ರಮವಲ್ಲ. ಹೀಗೆ ಪೋಸ್ಟರ್​ ಅಂಟಿಸುವದರಿಂದ ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ. ಎಚ್ಚರಿಕೆಯ ಪೋಸ್ಟರ್​​​ಗಳು ಅಸ್ಪೃಶ್ಯತೆಗೆ ಕಾರಣವಾಗಬಾರದು ಎಂದಿದೆ.

ಸರ್ಕಾರಗಳಿಗೆ ಸೂಚನೆ: ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜವಾಬ್ದಾರಿ. ಹೀಗಾಗಿ, ಸರ್ಕಾರಗಳಿಗೆ ಈ ಬಗ್ಗೆ ಗಮನಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಲ್ಲಿ ಹಾಕಲಾಗುತ್ತಿತ್ತು ಪೋಸ್ಟರ್​: ಯಾವುದೇ ವ್ಯಕ್ತಿಗೆ ಕೊರೊನಾ ಬಂದರೆ, ಅಂಥವರ ಮನೆಗೆ ಗೇಟ್​ ಹಾಕಿ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಆರಂಭದ ದಿನಗಳಲ್ಲಿ ಕೊರೊನಾ ಪಾಸಿಟಿವ್ ಬಂದ ಗಲ್ಲಿಯನ್ನೇ ಸೀಲ್​ ಡೌನ್​ ಮಾಡಲಾಗುತ್ತಿತ್ತು. ಆದರೆ, ದಿನ ಕಳೆದಂತೆ, ಈ ಕ್ರಮಗಳನ್ನು ಕೈಬಿಡಲಾಗಿತ್ತು.

ನಟಿ ಮೇಘನಾ ರಾಜ್‌ ಹಾಗೂ ಫ್ಯಾಮಿಲಿಗೆ ಕೊರೊನಾ!

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಉಗ್ರರಿಗೆ ಪಾಕಿಸ್ತಾನ ತರಬೇತಿ ನೀಡುತ್ತಿರೋದನ್ನು ಖಂಡಿಸಬೇಕು: ಹರಿಪ್ರಸಾದ್​​
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್ ದಾಳಿ: ಹುಟ್ಟುಹಬ್ಬ ಆಚರಣೆ ರದ್ದು ಮಾಡಿದ ಯುವ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಪಹಲ್ಗಾಮ್‌ ಉಗ್ರರ ದಾಳಿಯಿಂದ ಗ್ರೇಟ್​ ಎಸ್ಕೆಪ್​ ಆದ ಬಾಗಲಕೋಟೆಯ 13 ಮಂದಿ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ
ಉಗ್ರರ ದಾಳಿಗೆ ಬಲಿಯಾದ ಲೆ. ವಿನಯ್ ನರ್ವಾಲ್​ಗೆ ಪತ್ನಿಯಿಂದ ಭಾವುಕ ವಿದಾಯ