AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 09, 2020 | 4:45 PM

Share

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಅಂಟಿಸುವ ಕ್ರಮವನ್ನು ತಕ್ಷಣ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ. ಇದಕ್ಕೆ, ಸುಪ್ರೀಂಕೋರ್ಟ್​ ಈಗ ಆಕ್ಷೇಪ ವ್ಯಕ್ತಪಡಿಸಿದ್ದು, ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ ಎಂದು ಕಳವಳ ಹೊರಹಾಕಿದೆ.

ಕೊರೊನಾ ಸೋಂಕಿತರ ಮನೆ ಎದುರು ಗೇಟ್​ ನಿಲ್ಲಿಸಿ, ಅದಕ್ಕೆ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಈ ಮೂಲಕ ಮನೆಯಲ್ಲಿ ಕೊರೊನಾ ಸೋಂಕಿತರಿದ್ದಾರೆ ಎನ್ನುವ ಎಚ್ಚರಿಕೆಯನ್ನು ಅಕ್ಕ-ಪಕ್ಕದ ಮನೆಯವರಿಗೆ ನೀಡುವುದು ಇದರ ಉದ್ದೇಶವಾಗಿತ್ತು. ಈ ಕ್ರಮದ ಉದ್ದೇಶ ಉತ್ತಮವಾಗಿದ್ದರೂ, ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬೇರೆ ಆಗಿದೆ ಎನ್ನುವ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದರು. ಈಗ ಸುಪ್ರೀಂಕೋರ್ಟ್​ ಕೂಡ ಇದೇ ರೀತಿಯ ಅಭಿಪ್ರಾಯ ಹೊರ ಹಾಕಿದೆ.

ಸುಪ್ರೀಂ ಹೇಳಿದ್ದೇನು: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​, ಕೊರೊನಾ ಸೊಂಕಿತರ ಮನೆಗೆ ಪೋಸ್ಟರ್ ಅಂಟಿಸುವ ಅವಶ್ಯಕತೆ ಇಲ್ಲ. ಪೋಸ್ಟರ್ ಅಂಟಿಸುವುದು ಸರಿಯಾದ ಕ್ರಮವಲ್ಲ. ಹೀಗೆ ಪೋಸ್ಟರ್​ ಅಂಟಿಸುವದರಿಂದ ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ. ಎಚ್ಚರಿಕೆಯ ಪೋಸ್ಟರ್​​​ಗಳು ಅಸ್ಪೃಶ್ಯತೆಗೆ ಕಾರಣವಾಗಬಾರದು ಎಂದಿದೆ.

ಸರ್ಕಾರಗಳಿಗೆ ಸೂಚನೆ: ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜವಾಬ್ದಾರಿ. ಹೀಗಾಗಿ, ಸರ್ಕಾರಗಳಿಗೆ ಈ ಬಗ್ಗೆ ಗಮನಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಲ್ಲಿ ಹಾಕಲಾಗುತ್ತಿತ್ತು ಪೋಸ್ಟರ್​: ಯಾವುದೇ ವ್ಯಕ್ತಿಗೆ ಕೊರೊನಾ ಬಂದರೆ, ಅಂಥವರ ಮನೆಗೆ ಗೇಟ್​ ಹಾಕಿ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಆರಂಭದ ದಿನಗಳಲ್ಲಿ ಕೊರೊನಾ ಪಾಸಿಟಿವ್ ಬಂದ ಗಲ್ಲಿಯನ್ನೇ ಸೀಲ್​ ಡೌನ್​ ಮಾಡಲಾಗುತ್ತಿತ್ತು. ಆದರೆ, ದಿನ ಕಳೆದಂತೆ, ಈ ಕ್ರಮಗಳನ್ನು ಕೈಬಿಡಲಾಗಿತ್ತು.

ನಟಿ ಮೇಘನಾ ರಾಜ್‌ ಹಾಗೂ ಫ್ಯಾಮಿಲಿಗೆ ಕೊರೊನಾ!

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ