AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ.

ಕೊರೊನಾ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಬೇಡ: ಸುಪ್ರೀಂಕೋರ್ಟ್​ ಸೂಚನೆ
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Dec 09, 2020 | 4:45 PM

Share

ನವದೆಹಲಿ: ಕೊರೊನಾ ವೈರಸ್ ಸೋಂಕಿತರ ಮನೆಗೆ ಎಚ್ಚರಿಕೆಯ ಪೋಸ್ಟರ್​ ಅಂಟಿಸುವ ಕ್ರಮವನ್ನು ತಕ್ಷಣ ನಿಲ್ಲಿಸಿ ಎಂದು ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

ಕರ್ನಾಟದಲ್ಲಿ ಈಗಾಗಲೇ ಈ ಪ್ರಕ್ರಿಯೆಗೆ ಬ್ರೇಕ್​ ಹಾಕಲಾಗಿದೆ. ಆದರೆ, ಅನೇಕ ರಾಜ್ಯಗಳಲ್ಲಿ ಈ ಕ್ರಮ ಇಂದು ಕೂಡ ಮುಂದುವರಿದಿದೆ. ಇದಕ್ಕೆ, ಸುಪ್ರೀಂಕೋರ್ಟ್​ ಈಗ ಆಕ್ಷೇಪ ವ್ಯಕ್ತಪಡಿಸಿದ್ದು, ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ ಎಂದು ಕಳವಳ ಹೊರಹಾಕಿದೆ.

ಕೊರೊನಾ ಸೋಂಕಿತರ ಮನೆ ಎದುರು ಗೇಟ್​ ನಿಲ್ಲಿಸಿ, ಅದಕ್ಕೆ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಈ ಮೂಲಕ ಮನೆಯಲ್ಲಿ ಕೊರೊನಾ ಸೋಂಕಿತರಿದ್ದಾರೆ ಎನ್ನುವ ಎಚ್ಚರಿಕೆಯನ್ನು ಅಕ್ಕ-ಪಕ್ಕದ ಮನೆಯವರಿಗೆ ನೀಡುವುದು ಇದರ ಉದ್ದೇಶವಾಗಿತ್ತು. ಈ ಕ್ರಮದ ಉದ್ದೇಶ ಉತ್ತಮವಾಗಿದ್ದರೂ, ಕೊರೊನಾ ಸೋಂಕಿತರನ್ನು ನೋಡುವ ದೃಷ್ಟಿ ಬೇರೆ ಆಗಿದೆ ಎನ್ನುವ ಅಭಿಪ್ರಾಯವನ್ನು ಅನೇಕರು ಹೊರ ಹಾಕಿದ್ದರು. ಈಗ ಸುಪ್ರೀಂಕೋರ್ಟ್​ ಕೂಡ ಇದೇ ರೀತಿಯ ಅಭಿಪ್ರಾಯ ಹೊರ ಹಾಕಿದೆ.

ಸುಪ್ರೀಂ ಹೇಳಿದ್ದೇನು: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​, ಕೊರೊನಾ ಸೊಂಕಿತರ ಮನೆಗೆ ಪೋಸ್ಟರ್ ಅಂಟಿಸುವ ಅವಶ್ಯಕತೆ ಇಲ್ಲ. ಪೋಸ್ಟರ್ ಅಂಟಿಸುವುದು ಸರಿಯಾದ ಕ್ರಮವಲ್ಲ. ಹೀಗೆ ಪೋಸ್ಟರ್​ ಅಂಟಿಸುವದರಿಂದ ಸೋಂಕಿತರಲ್ಲಿ ಕಳಂಕಿತರು ಎನ್ನುವ ಭಾವನೆ ಮೂಡಲಿದೆ. ಎಚ್ಚರಿಕೆಯ ಪೋಸ್ಟರ್​​​ಗಳು ಅಸ್ಪೃಶ್ಯತೆಗೆ ಕಾರಣವಾಗಬಾರದು ಎಂದಿದೆ.

ಸರ್ಕಾರಗಳಿಗೆ ಸೂಚನೆ: ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜವಾಬ್ದಾರಿ. ಹೀಗಾಗಿ, ಸರ್ಕಾರಗಳಿಗೆ ಈ ಬಗ್ಗೆ ಗಮನಹರಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.

ಬೆಂಗಳೂರಲ್ಲಿ ಹಾಕಲಾಗುತ್ತಿತ್ತು ಪೋಸ್ಟರ್​: ಯಾವುದೇ ವ್ಯಕ್ತಿಗೆ ಕೊರೊನಾ ಬಂದರೆ, ಅಂಥವರ ಮನೆಗೆ ಗೇಟ್​ ಹಾಕಿ ಎಚ್ಚರಿಕೆಯ ಪೋಸ್ಟರ್​ ಅಂಟಿಸಲಾಗುತ್ತಿತ್ತು. ಆರಂಭದ ದಿನಗಳಲ್ಲಿ ಕೊರೊನಾ ಪಾಸಿಟಿವ್ ಬಂದ ಗಲ್ಲಿಯನ್ನೇ ಸೀಲ್​ ಡೌನ್​ ಮಾಡಲಾಗುತ್ತಿತ್ತು. ಆದರೆ, ದಿನ ಕಳೆದಂತೆ, ಈ ಕ್ರಮಗಳನ್ನು ಕೈಬಿಡಲಾಗಿತ್ತು.

ನಟಿ ಮೇಘನಾ ರಾಜ್‌ ಹಾಗೂ ಫ್ಯಾಮಿಲಿಗೆ ಕೊರೊನಾ!

Follow Us
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!