AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ

‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಎಲ್ಲದಕ್ಕೂ ನಾವು ಸಹಾಯ ಮಾಡುತ್ತೇವೆ‘ ಎಂದು ಟಿಎಂಸಿ ಶಾಸಕ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ
ಬಿಜೆಪಿಗೆ ಮತ ಹಾಕದಂತೆ ಬೆದರಿಕೆ ಹಾಕಿದ ಟಿಎಂಸಿ ಶಾಸಕ
TV9 Web
| Edited By: |

Updated on:Mar 29, 2022 | 10:46 AM

Share

ಬಿಜೆಪಿಗೆ ಮತಹಾಕಬೇಡಿ ಎಂದು ಮತದಾರರಿಗೆ ಟಿಎಂಸಿ ಶಾಸಕ (TMC MLA) ನರೇನ್​ ಚಕ್ರಬರ್ತಿ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಬಿಜೆಪಿ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಅಮಿತ್​ ಮಾಳ್ವಿಯಾ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು (Election Commission) ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ, ಇಂಥ ಶಾಸಕರನ್ನೆಲ್ಲ ಇಟ್ಟುಕೊಂಡು ಪೋಷಿಸುತ್ತಿದ್ದಾರಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರನ್ನೂ ಟೀಕಿಸಿದ್ದಾರೆ. ಬಿಜೆಪಿ ಬೆಂಬಲಿಗರ ಬಳಿ ನರೇನ್​ ಚಕ್ರವರ್ತಿ ಮಾತನಾಡಿದ ವಿಡಿಯೋ ಇದು. ‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಬಿಜೆಪಿಗೆ ಮತ ಹಾಕದೆ ಇರುವವರಿಗೆ ಟಿಎಂಸಿ ಬೆಂಬಲ ನೀಡುತ್ತದೆ’ ಎಂದು ವಿಡಿಯೋದಲ್ಲಿ ಹೇಳಿದ್ದನ್ನು ಕೇಳಬಹುದು.

ವಿಡಿಯೋ ಶೇರ್​ ಮಾಡಿಕೊಂಡಿರುವ ಅಮಿತ್ ಮಾಳ್ವಿಯಾ, ಪಾಂಡವೇಶ್ವರ (ಅಸಾನ್ಸೋಲ್​) ವಿಧಾನಸಭೆ ಕ್ಷೇತ್ರದ ಟಿಎಂಸಿ ಶಾಸಕ ನರೇನ್​ ಚಕ್ರವರ್ತಿ ಬಿಜೆಪಿಯ ಬೆಂಬಲಿಗರು ಮತ್ತು ಮತದಾರರಿಗೆ ಹೀಗೆ ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ನೇರವಾಗಿಯೇ ಹೇಳುತ್ತಿದ್ದಾರೆ. ಇಂಥ ಕ್ರಿಮಿನಲ್​ಗಳು ನಿಜವಾಗಿ ಜೈಲಿನಲ್ಲಿ ಇರಬೇಕು. ಆದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಶಾಸಕರಾಗಿರುತ್ತಾರೆ. ಚುನಾವಣಾ ಆಯೋಗ ಇವರ ಬಗ್ಗೆ ಗಮನಹರಿಸಬೇಕು ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ಅಸಾನ್ಸೋಲ್​ ಲೋಕಸಭಾ ಕ್ಷೇತ್ರ ಮತ್ತು ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 12ರಂದು ನಡೆಯಲಿದೆ. ಅದರ ಬೆನ್ನಲ್ಲೇ ಟಿಎಂಸಿ ಶಾಸಕ ಹೀಗೆ ಮಾತನಾಡಿದ ವಿಡಿಯೋವೊಂದನ್ನು ಬಿಜೆಪಿ ಶೇರ್ ಮಾಡಿಕೊಂಡಿದೆ. ಅಸಾನ್ಸೋಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಕಳೆದ ವರ್ಷ ರಾಜೀನಾಮೆ ನೀಡಿ, ಬಿಜೆಪಿಯನ್ನು ತೊರೆದು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದೀಗ ಆ ಕ್ಷೇತ್ರದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಪಠ್ಯದಲ್ಲಿ ಭಗವದ್ಗೀತೆ ಬೇಡ, ಸಂವಿಧಾನ ಕಲಿಸಿ: ಮುಖ್ಯಮಂತ್ರಿಗೆ ಬುದ್ಧಿಜೀವಿಗಳ ಪತ್ರ

Published On - 9:56 am, Tue, 29 March 22

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು