AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ

‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಎಲ್ಲದಕ್ಕೂ ನಾವು ಸಹಾಯ ಮಾಡುತ್ತೇವೆ‘ ಎಂದು ಟಿಎಂಸಿ ಶಾಸಕ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ
ಬಿಜೆಪಿಗೆ ಮತ ಹಾಕದಂತೆ ಬೆದರಿಕೆ ಹಾಕಿದ ಟಿಎಂಸಿ ಶಾಸಕ
TV9 Web
| Edited By: |

Updated on:Mar 29, 2022 | 10:46 AM

Share

ಬಿಜೆಪಿಗೆ ಮತಹಾಕಬೇಡಿ ಎಂದು ಮತದಾರರಿಗೆ ಟಿಎಂಸಿ ಶಾಸಕ (TMC MLA) ನರೇನ್​ ಚಕ್ರಬರ್ತಿ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಬಿಜೆಪಿ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಅಮಿತ್​ ಮಾಳ್ವಿಯಾ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು (Election Commission) ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ, ಇಂಥ ಶಾಸಕರನ್ನೆಲ್ಲ ಇಟ್ಟುಕೊಂಡು ಪೋಷಿಸುತ್ತಿದ್ದಾರಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರನ್ನೂ ಟೀಕಿಸಿದ್ದಾರೆ. ಬಿಜೆಪಿ ಬೆಂಬಲಿಗರ ಬಳಿ ನರೇನ್​ ಚಕ್ರವರ್ತಿ ಮಾತನಾಡಿದ ವಿಡಿಯೋ ಇದು. ‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಬಿಜೆಪಿಗೆ ಮತ ಹಾಕದೆ ಇರುವವರಿಗೆ ಟಿಎಂಸಿ ಬೆಂಬಲ ನೀಡುತ್ತದೆ’ ಎಂದು ವಿಡಿಯೋದಲ್ಲಿ ಹೇಳಿದ್ದನ್ನು ಕೇಳಬಹುದು.

ವಿಡಿಯೋ ಶೇರ್​ ಮಾಡಿಕೊಂಡಿರುವ ಅಮಿತ್ ಮಾಳ್ವಿಯಾ, ಪಾಂಡವೇಶ್ವರ (ಅಸಾನ್ಸೋಲ್​) ವಿಧಾನಸಭೆ ಕ್ಷೇತ್ರದ ಟಿಎಂಸಿ ಶಾಸಕ ನರೇನ್​ ಚಕ್ರವರ್ತಿ ಬಿಜೆಪಿಯ ಬೆಂಬಲಿಗರು ಮತ್ತು ಮತದಾರರಿಗೆ ಹೀಗೆ ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ನೇರವಾಗಿಯೇ ಹೇಳುತ್ತಿದ್ದಾರೆ. ಇಂಥ ಕ್ರಿಮಿನಲ್​ಗಳು ನಿಜವಾಗಿ ಜೈಲಿನಲ್ಲಿ ಇರಬೇಕು. ಆದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಶಾಸಕರಾಗಿರುತ್ತಾರೆ. ಚುನಾವಣಾ ಆಯೋಗ ಇವರ ಬಗ್ಗೆ ಗಮನಹರಿಸಬೇಕು ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ಅಸಾನ್ಸೋಲ್​ ಲೋಕಸಭಾ ಕ್ಷೇತ್ರ ಮತ್ತು ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 12ರಂದು ನಡೆಯಲಿದೆ. ಅದರ ಬೆನ್ನಲ್ಲೇ ಟಿಎಂಸಿ ಶಾಸಕ ಹೀಗೆ ಮಾತನಾಡಿದ ವಿಡಿಯೋವೊಂದನ್ನು ಬಿಜೆಪಿ ಶೇರ್ ಮಾಡಿಕೊಂಡಿದೆ. ಅಸಾನ್ಸೋಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಕಳೆದ ವರ್ಷ ರಾಜೀನಾಮೆ ನೀಡಿ, ಬಿಜೆಪಿಯನ್ನು ತೊರೆದು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದೀಗ ಆ ಕ್ಷೇತ್ರದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಪಠ್ಯದಲ್ಲಿ ಭಗವದ್ಗೀತೆ ಬೇಡ, ಸಂವಿಧಾನ ಕಲಿಸಿ: ಮುಖ್ಯಮಂತ್ರಿಗೆ ಬುದ್ಧಿಜೀವಿಗಳ ಪತ್ರ

Published On - 9:56 am, Tue, 29 March 22

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ