AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ

‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಎಲ್ಲದಕ್ಕೂ ನಾವು ಸಹಾಯ ಮಾಡುತ್ತೇವೆ‘ ಎಂದು ಟಿಎಂಸಿ ಶಾಸಕ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ
ಬಿಜೆಪಿಗೆ ಮತ ಹಾಕದಂತೆ ಬೆದರಿಕೆ ಹಾಕಿದ ಟಿಎಂಸಿ ಶಾಸಕ
TV9 Web
| Edited By: |

Updated on:Mar 29, 2022 | 10:46 AM

Share

ಬಿಜೆಪಿಗೆ ಮತಹಾಕಬೇಡಿ ಎಂದು ಮತದಾರರಿಗೆ ಟಿಎಂಸಿ ಶಾಸಕ (TMC MLA) ನರೇನ್​ ಚಕ್ರಬರ್ತಿ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಬಿಜೆಪಿ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಅಮಿತ್​ ಮಾಳ್ವಿಯಾ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು (Election Commission) ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ, ಇಂಥ ಶಾಸಕರನ್ನೆಲ್ಲ ಇಟ್ಟುಕೊಂಡು ಪೋಷಿಸುತ್ತಿದ್ದಾರಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರನ್ನೂ ಟೀಕಿಸಿದ್ದಾರೆ. ಬಿಜೆಪಿ ಬೆಂಬಲಿಗರ ಬಳಿ ನರೇನ್​ ಚಕ್ರವರ್ತಿ ಮಾತನಾಡಿದ ವಿಡಿಯೋ ಇದು. ‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಬಿಜೆಪಿಗೆ ಮತ ಹಾಕದೆ ಇರುವವರಿಗೆ ಟಿಎಂಸಿ ಬೆಂಬಲ ನೀಡುತ್ತದೆ’ ಎಂದು ವಿಡಿಯೋದಲ್ಲಿ ಹೇಳಿದ್ದನ್ನು ಕೇಳಬಹುದು.

ವಿಡಿಯೋ ಶೇರ್​ ಮಾಡಿಕೊಂಡಿರುವ ಅಮಿತ್ ಮಾಳ್ವಿಯಾ, ಪಾಂಡವೇಶ್ವರ (ಅಸಾನ್ಸೋಲ್​) ವಿಧಾನಸಭೆ ಕ್ಷೇತ್ರದ ಟಿಎಂಸಿ ಶಾಸಕ ನರೇನ್​ ಚಕ್ರವರ್ತಿ ಬಿಜೆಪಿಯ ಬೆಂಬಲಿಗರು ಮತ್ತು ಮತದಾರರಿಗೆ ಹೀಗೆ ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ನೇರವಾಗಿಯೇ ಹೇಳುತ್ತಿದ್ದಾರೆ. ಇಂಥ ಕ್ರಿಮಿನಲ್​ಗಳು ನಿಜವಾಗಿ ಜೈಲಿನಲ್ಲಿ ಇರಬೇಕು. ಆದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಶಾಸಕರಾಗಿರುತ್ತಾರೆ. ಚುನಾವಣಾ ಆಯೋಗ ಇವರ ಬಗ್ಗೆ ಗಮನಹರಿಸಬೇಕು ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ಅಸಾನ್ಸೋಲ್​ ಲೋಕಸಭಾ ಕ್ಷೇತ್ರ ಮತ್ತು ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 12ರಂದು ನಡೆಯಲಿದೆ. ಅದರ ಬೆನ್ನಲ್ಲೇ ಟಿಎಂಸಿ ಶಾಸಕ ಹೀಗೆ ಮಾತನಾಡಿದ ವಿಡಿಯೋವೊಂದನ್ನು ಬಿಜೆಪಿ ಶೇರ್ ಮಾಡಿಕೊಂಡಿದೆ. ಅಸಾನ್ಸೋಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಕಳೆದ ವರ್ಷ ರಾಜೀನಾಮೆ ನೀಡಿ, ಬಿಜೆಪಿಯನ್ನು ತೊರೆದು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದೀಗ ಆ ಕ್ಷೇತ್ರದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಪಠ್ಯದಲ್ಲಿ ಭಗವದ್ಗೀತೆ ಬೇಡ, ಸಂವಿಧಾನ ಕಲಿಸಿ: ಮುಖ್ಯಮಂತ್ರಿಗೆ ಬುದ್ಧಿಜೀವಿಗಳ ಪತ್ರ

Published On - 9:56 am, Tue, 29 March 22

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್