Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ

‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಎಲ್ಲದಕ್ಕೂ ನಾವು ಸಹಾಯ ಮಾಡುತ್ತೇವೆ‘ ಎಂದು ಟಿಎಂಸಿ ಶಾಸಕ ಹೇಳಿದ್ದಾರೆ.

ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ಗ್ಯಾರಂಟಿ ಎಂದು ಬೆದರಿಕೆ ಹಾಕಿದ ಟಿಎಂಸಿ ಶಾಸಕ; ವಿಡಿಯೋ ಶೇರ್​ ಮಾಡಿದ ಬಿಜೆಪಿ ನಾಯಕ
ಬಿಜೆಪಿಗೆ ಮತ ಹಾಕದಂತೆ ಬೆದರಿಕೆ ಹಾಕಿದ ಟಿಎಂಸಿ ಶಾಸಕ
Follow us
TV9 Web
| Updated By: Lakshmi Hegde

Updated on:Mar 29, 2022 | 10:46 AM

ಬಿಜೆಪಿಗೆ ಮತಹಾಕಬೇಡಿ ಎಂದು ಮತದಾರರಿಗೆ ಟಿಎಂಸಿ ಶಾಸಕ (TMC MLA) ನರೇನ್​ ಚಕ್ರಬರ್ತಿ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಬಿಜೆಪಿ ಪಶ್ಚಿಮ ಬಂಗಾಳ ಸಹ ಉಸ್ತುವಾರಿ ಅಮಿತ್​ ಮಾಳ್ವಿಯಾ ಶೇರ್​ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲ ಈ ಬಗ್ಗೆ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗವನ್ನು (Election Commission) ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲ, ಇಂಥ ಶಾಸಕರನ್ನೆಲ್ಲ ಇಟ್ಟುಕೊಂಡು ಪೋಷಿಸುತ್ತಿದ್ದಾರಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರನ್ನೂ ಟೀಕಿಸಿದ್ದಾರೆ. ಬಿಜೆಪಿ ಬೆಂಬಲಿಗರ ಬಳಿ ನರೇನ್​ ಚಕ್ರವರ್ತಿ ಮಾತನಾಡಿದ ವಿಡಿಯೋ ಇದು. ‘ನೀವು ಬಿಜೆಪಿಗೆ ಮತ ಹಾಕಬೇಡಿ. ಬಿಜೆಪಿಗೆ ಮತ ಹಾಕದೆ ಇರುವವರು ಮಾತ್ರ ಈ ರಾಜ್ಯದಲ್ಲಿ ಉಳಿದುಕೊಳ್ಳಬಹುದು, ಉದ್ಯೋಗ ಮಾಡಬಹುದು. ಅಷ್ಟೇ ಅಲ್ಲ ಉದ್ಯಮವನ್ನೂ ಮಾಡಿಕೊಳ್ಳಬಹುದು. ಬಿಜೆಪಿಗೆ ಮತ ಹಾಕದೆ ಇರುವವರಿಗೆ ಟಿಎಂಸಿ ಬೆಂಬಲ ನೀಡುತ್ತದೆ’ ಎಂದು ವಿಡಿಯೋದಲ್ಲಿ ಹೇಳಿದ್ದನ್ನು ಕೇಳಬಹುದು.

ವಿಡಿಯೋ ಶೇರ್​ ಮಾಡಿಕೊಂಡಿರುವ ಅಮಿತ್ ಮಾಳ್ವಿಯಾ, ಪಾಂಡವೇಶ್ವರ (ಅಸಾನ್ಸೋಲ್​) ವಿಧಾನಸಭೆ ಕ್ಷೇತ್ರದ ಟಿಎಂಸಿ ಶಾಸಕ ನರೇನ್​ ಚಕ್ರವರ್ತಿ ಬಿಜೆಪಿಯ ಬೆಂಬಲಿಗರು ಮತ್ತು ಮತದಾರರಿಗೆ ಹೀಗೆ ಬಹಿರಂಗವಾಗಿಯೇ ಬೆದರಿಕೆ ಹಾಕುತ್ತಿದ್ದಾರೆ. ಬಿಜೆಪಿಗೆ ಮತ ಹಾಕಿದರೆ ನಿಮಗೆ ತೊಂದರೆ ತಪ್ಪಿದ್ದಲ್ಲ ಎಂಬುದನ್ನು ನೇರವಾಗಿಯೇ ಹೇಳುತ್ತಿದ್ದಾರೆ. ಇಂಥ ಕ್ರಿಮಿನಲ್​ಗಳು ನಿಜವಾಗಿ ಜೈಲಿನಲ್ಲಿ ಇರಬೇಕು. ಆದರೆ ಮಮತಾ ಬ್ಯಾನರ್ಜಿ ಆಡಳಿತದಲ್ಲಿ ಶಾಸಕರಾಗಿರುತ್ತಾರೆ. ಚುನಾವಣಾ ಆಯೋಗ ಇವರ ಬಗ್ಗೆ ಗಮನಹರಿಸಬೇಕು ಎಂದು ಕ್ಯಾಪ್ಷನ್​ ಬರೆದಿದ್ದಾರೆ.

ಅಸಾನ್ಸೋಲ್​ ಲೋಕಸಭಾ ಕ್ಷೇತ್ರ ಮತ್ತು ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಏಪ್ರಿಲ್ 12ರಂದು ನಡೆಯಲಿದೆ. ಅದರ ಬೆನ್ನಲ್ಲೇ ಟಿಎಂಸಿ ಶಾಸಕ ಹೀಗೆ ಮಾತನಾಡಿದ ವಿಡಿಯೋವೊಂದನ್ನು ಬಿಜೆಪಿ ಶೇರ್ ಮಾಡಿಕೊಂಡಿದೆ. ಅಸಾನ್ಸೋಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಬುಲ್ ಸುಪ್ರಿಯೋ ಕಳೆದ ವರ್ಷ ರಾಜೀನಾಮೆ ನೀಡಿ, ಬಿಜೆಪಿಯನ್ನು ತೊರೆದು ಟಿಎಂಸಿ ಸೇರ್ಪಡೆಯಾಗಿದ್ದಾರೆ. ಇದೀಗ ಆ ಕ್ಷೇತ್ರದ ಚುನಾವಣೆ ನಡೆಯಲಿದೆ.

ಇದನ್ನೂ ಓದಿ:ಪಠ್ಯದಲ್ಲಿ ಭಗವದ್ಗೀತೆ ಬೇಡ, ಸಂವಿಧಾನ ಕಲಿಸಿ: ಮುಖ್ಯಮಂತ್ರಿಗೆ ಬುದ್ಧಿಜೀವಿಗಳ ಪತ್ರ

Published On - 9:56 am, Tue, 29 March 22

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್