AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತೆ? ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು?

ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ ಎನ್ನುವ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ರೈಲು ಪ್ರಯಾಣಿಕರಿಗೆ ಒದಗಿಸುವ ಹೊದಿಕೆಗಳನ್ನು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ ಮತ್ತು ಹಾಸಿಗೆಯ ಹೊದಿಕೆಯಾಗಿ ಅದರ ಬಳಕೆಗಾಗಿ ಹೆಚ್ಚುವರಿ ಬೆಡ್‌ಶೀಟ್ ಅನ್ನು ಬೆಡ್‌ರೋಲ್ ಕಿಟ್‌ನಲ್ಲಿ ನೀಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು.

ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತೆ? ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದೇನು?
ಅಶ್ವಿನಿ ವೈಷ್ಣವ್ Image Credit source: The Economic Times
ನಯನಾ ರಾಜೀವ್
|

Updated on: Nov 28, 2024 | 8:11 AM

Share

ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ ಎನ್ನುವ ಪ್ರಶ್ನೆಗೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ರೈಲು ಪ್ರಯಾಣಿಕರಿಗೆ ಒದಗಿಸುವ ಹೊದಿಕೆಗಳನ್ನು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ ಮತ್ತು ಹಾಸಿಗೆಯ ಹೊದಿಕೆಯಾಗಿ ಅದರ ಬಳಕೆಗಾಗಿ ಹೆಚ್ಚುವರಿ ಬೆಡ್‌ಶೀಟ್ ಅನ್ನು ಬೆಡ್‌ರೋಲ್ ಕಿಟ್‌ನಲ್ಲಿ ನೀಡಲಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು.

ಭಾರತೀಯ ರೈಲ್ವೆಯಲ್ಲಿ ಬಳಸುವ ಕಂಬಳಿಯಂತಹ ಹೊದಿಕೆಯು ಹಗುರವಾಗಿದ್ದು, ತೊಳೆಯಲು ಕೂಡ ಸುಲಭ ಹಾಗೂ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುತ್ತದೆ. ಯಾಂತ್ರೀಕೃತ ಲಾಂಡ್ರಿ ವ್ಯವಸ್ಥೆ ಇರುತ್ತದೆ, ಗುಣಮಟ್ಟದ ಯಂತ್ರಗಳ ಬಳಕೆ, ನಿರ್ದಿಷ್ಟ ರಾಸಾಯನಿಕಗಳ ಬಳಕೆ ಸೇರಿದಂತೆ ಪ್ರಯಾಣಿಕರ ಸುರಕ್ಷತೆ ಕಡೆಗೂ ಗಮನಹರಿಸಲಾಗುತ್ತದೆ.

ಮೂಲ ನೈರ್ಮಲ್ಯ ಮಾನದಂಡಗಳನ್ನು ಪೂರೈಸುವ ಹಾಸಿಗೆಗಳಿಗೆ ಪ್ರಯಾಣಿಕರು ಪಾವತಿಸುತ್ತಿದ್ದರೂ, ತಿಂಗಳಿಗೊಮ್ಮೆ ಹೊದಿಕೆಗಳನ್ನು ರೈಲ್ವೇ ತೊಳೆಯುತ್ತದೆಯೇ ಎಂದು ಕೇಳಿದ್ದ ಕಾಂಗ್ರೆಸ್ ಸಂಸದ ಕುಲದೀಪ್ ಇಂದೋರಾ ಅವರ ಪ್ರಶ್ನೆಗೆ ಅಶ್ವಿನಿ ವೈಷ್ಣವ್ ಈ ಮಾಹಿತಿ ನೀಡಿದರು.

ಮತ್ತಷ್ಟು ಓದಿ: Video: ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ಜೀವ ಉಳಿಸಿದ ರೈಲ್ವೆ ಪೊಲೀಸ್

ಈಗ ರೈಲ್ವೇಯಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳಿವೆ. ರೈಲ್‌ಮದದ್ ಆ್ಯಪ್ ಮೂಲಕ ಪ್ರಯಾಣಿಕರು ತಮ್ಮ ದೂರುಗಳನ್ನು ದಾಖಲಿಸಿಕೊಳ್ಳುತ್ತಾರೆ. ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಹೊದಿಕೆಗಳು ಅಥವಾ ಬೆಡ್‌ರೋಲ್‌ಗಳು ಇರಲಿ, ಎಲ್ಲವನ್ನೂ ಸ್ವಚ್ಛಗೊಳಿಸಲಾಗುತ್ತದೆ. ತೊಳೆದ ಲಿನಿನ್ ವಸ್ತುಗಳ ಗುಣಮಟ್ಟವನ್ನು ಪರೀಕ್ಷಿಸಲು ವೈಟೊ-ಮೀಟರ್ಗಳನ್ನು ಬಳಸಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!