AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ. ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ […]

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Aug 18, 2020 | 5:13 PM

Share

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ.

ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ ಇದಲ್ಲದೆ, ಬಾಂಗ್ಲಾ ಮೂಲದ ನಿಷೇಧಿತ ಉಗ್ರ ಸಂಘಟನೆಯ ಸದಸ್ಯ ಸಹ ಆಗಿದ್ದ. ತಿಹಾರ್ ಜೈಲಿನಲ್ಲಿರುವ ಅಬ್ದುಲ್ ಬಸೀತ್ ಜೊತೆ ಸಂಪರ್ಕ ಹೊಂದಿದ್ದು ಸಿಎಎ ಪ್ರತಿಭಟನೆ ವೇಳೆ ಗಲಭೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಇದೀಗ, ತಾನು ISIS ಜೊತೆ ಸಂಪರ್ಕ ಹೊಂದಿದ್ದೆ ಎಂದು  ಬಂಧಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯ ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯನಾಗಿ ಸೇವೆ ಸಲ್ಲಿಸಿದ್ದ ಎಂದು ಹೇಳಿಲಾಗಿದೆ. 2014ರಲ್ಲಿ ಸಿರಿಯಾದ ಐಸಿಸ್‌ ಕ್ಯಾಂಪ್‌ಗೆ ಭೇಟಿ ನೀಡಿದ್ದ ರೆಹಮಾನ್​ ಐಸಿಸ್ ಕ್ಯಾಂಪ್‌ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡಿದ್ದ ಎಂದೂ ತಿಳಿದುಬಂದಿದೆ.

10 ದಿನ ಐಸಿಸ್ ಕ್ಯಾಂಪ್‌ನಲ್ಲಿದ್ದು ವಾಪಸ್ ಬಂದಿದ್ದ ಶಂಕಿತ ಉಗ್ರನ ಲ್ಯಾಪ್​ಟಾಪ್, ಮೊಬೈಲ್‌ ಮತ್ತು ಇತರೆ ಡಿಜಿಟಲ್ ಪರಿಕರಗಳಿಂದ ಸಾಕ್ಷ್ಯ ಸಂಗ್ರಹಿಸಿ ದೆಹಲಿಯ ಎನ್ಐಎ ಕೋರ್ಟ್‌ಗೆ ಈತನನ್ನ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ.

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ